ರಣಜಿ ಟ್ರೋಫಿಯಲ್ಲಿ ಹೊಸ ಭರವಸೆ: 2 ನೇ ಇನ್ನಿಂಗ್ಸ್ ನಲ್ಲೂ ಶತಕ ಸಿಡಿಸಿದ ಯಶ್ ಧುಲ್
ಚೊಚ್ಚಲ ರಣಜಿ ಪಂದ್ಯದಲ್ಲೇ ಎರಡೂ ಇನ್ನಿಂಗ್ಸ್ ಗಳಲ್ಲಿ ಶತಕಗಳನ್ನು ಸಿಡಿಸಿದ ಮೂರನೇ ಆಟಗಾರ..!
Team Udayavani, Feb 20, 2022, 5:49 PM IST
ಗುವಾಹಟಿ : ರಣಜಿ ಟ್ರೋಫಿಯಲ್ಲಿ ತಮಿಳುನಾಡು ಎದುರಿನ ಚೊಚ್ಚಲ ಪಂದ್ಯದಲ್ಲಿ ಶತಕ ಸಿಡಿಸಿ ಗಮನ ಸೆಳೆದಿದ್ದ ಭಾರತ ಅಂಡರ್-19 ವಿಶ್ವಕಪ್ ವಿಜೇತ ನಾಯಕ ಯಶ್ ಧುಲ್ ಎರಡನೇ ಇನ್ನಿಂಗ್ಸ್ ನಲ್ಲೂ ಭರ್ಜರಿ ಶತಕ ಸಿಡಿಸಿ ಹೊಸ ದಾಖಲೆ ಬರೆದು, ಕ್ರಿಕೆಟ್ ಭವಿಷ್ಯದ ಹೊಸ ಭರವಸೆಯಾಗಿದ್ದಾರೆ.
ಎಲೈಟ್ ಗ್ರೂಪ್ ಎಚ್ ಸ್ಪರ್ಧೆಯಲ್ಲಿ ದೆಹಲಿಯ ಬ್ಯಾಟರ್ ಯಶ್ ಧುಲ್ ಗುರುವಾರ ಪ್ರಥಮ ದರ್ಜೆಯಲ್ಲಿ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ತಮಿಳುನಾಡು ವಿರುದ್ಧ ಶತಕ ದಾಖಲಿಸಿದ್ದರು. ಭಾನುವಾರ ೨ ನೇ ಇನ್ನಿಂಗ್ಸ್ ನಲ್ಲೂ ಭರ್ಜರಿ ಬ್ಯಾಟಿಂಗ್ ಮಾಡಿದ ಅವರು ಶತಕ ಸಿಡಿಸಿ ಸಂಭ್ರಮಿಸಿದ್ದಾರೆ.
ದೆಹಲಿಯ ಯಶ್ ಧುಲ್ ತನ್ನ ಮುಡಿಗೆ ಮತ್ತೊಂದು ಗರಿ ಸೇರಿಸಿದ್ದು, 1952/53ರಲ್ಲಿ ಗುಜರಾತ್ಗಾಗಿ ನಾರಿ ಕಂಟ್ರಾಕ್ಟರ್ (152 ಮತ್ತು 102*) ಮತ್ತು 2012/13 ರಲ್ಲಿ ಮಹಾರಾಷ್ಟ್ರದ ವಿರಾಗ್ ಅವತೆ (126 ಮತ್ತು 112) ನಂತರ ರಣಜಿ ಟ್ರೋಫಿಯಲ್ಲಿ ಚೊಚ್ಚಲ ಪಂದ್ಯದ ಪ್ರತಿ ಇನ್ನಿಂಗ್ಸ್ನಲ್ಲಿ (113 ಮತ್ತು 100*) ಶತಕ ಬಾರಿಸಿದ ಮೂರನೇ ಬ್ಯಾಟ್ಸ್ಮನ್ ಆಗಿದ್ದಾರೆ.
ಡೆಲ್ಲಿ ಮೊದಲ ಇನ್ನಿಂಗ್ಸ್ ನಲ್ಲಿ ಧುಲ್ ಅವರ 113 ರನ್ ಕೊಡುಗೆಯಿಂದ 45ರನ್ ಗಳಿಸಿತ್ತು. ತಮಿಳುನಾಡು 494 ರನ್ ಗೆ ಆಲೌಟಾಗಿತ್ತು.
2 ನೇ ಇನ್ನಿಂಗ್ಸ್ ನಲ್ಲಿ ಧುಲ್ 113 ರನ್ ಗಳಿಸಿದ್ದು, ಅವರಿಗೆ ಭರ್ಜರಿ ಜೊತೆಯಾಟ ನೀಡಿದ ಇನ್ನೊಬ್ಬ ಆರಂಭಿಕ ಆಟಗಾರ ಧ್ರುವ್ ಶೋರೆ ಕೂಡ ಶತಕ ಸಿಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್