ಒಂದೇ ಪಂದ್ಯದಲ್ಲಿ ಶತಕ,ದ್ವಿಶತಕ:ಅಪರೂಪದ ದಾಖಲೆ ಬರೆದ ಕುಡಿ ಮೀಸೆಯ ಹುಡುಗ ಯಶಸ್ವಿ ಜೈಸ್ವಾಲ್‌


Team Udayavani, Mar 4, 2023, 7:07 PM IST

jaiswal

ಗ್ವಾಲಿಯರ್‌: 2020-21ರ ಸಾಲಿನ ರಣಜಿ ಚಾಂಪಿಯನ್‌ ಮಧ್ಯ ಪ್ರದೇಶದ ವಿರುದ್ಧ ಗ್ವಾಲಿಯರ್‌ನಲ್ಲಿ ನಡೆಯುತ್ತಿರುವ ಇರಾನಿ ಟ್ರೋಫಿಯ ಏಕೈಕ ಟೆಸ್ಟ್‌ ಪಂದ್ಯದಲ್ಲಿ ಭಾರತದ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್‌ ಅಪರೂಪದ ದಾಖಲೆಯೊಂದನ್ನು ಬರೆದಿದ್ದಾರೆ. ಮಧ್ಯ ಪ್ರದೇಶ ವಿರುದ್ಧದ ಒಂದೇ ಇನ್ನಿಂಗ್ಸ್‌ನಲ್ಲಿ ದ್ವಿಶತಕ ಮತ್ತು ಶತಕ ಬಾರಿಸುವ ಮೂಲಕ ಈ ಚಿಗುರು ಮೀಸೆಯ ಹುಡುಗ ಭಾರತ ತಂಡದ ಭರವಸೆಯ ಆಟಗಾರನಾಗಿ ಹೊರಹೊಮ್ಮುವ ವಿಶ್ವಾಸ ಹೊರಹಾಕಿದ್ದಾನೆ. ಈ ಪಂದ್ಯದಲ್ಲಿ ಜೈಸ್ವಾಲ್‌ ಒಂದೇ ಇನ್ನಿಂಗ್ಸ್‌ನಲ್ಲಿ 213 ಮತ್ತು 144 ರನ್ನುಗಳನ್ನು ಸಿಡಿಸಿದ್ದಾರೆ.

ದೇಶೀ ಕ್ರಿಕೆಟ್‌ನಲ್ಲಿ ರನ್‌ ಹೊಳೆಯನ್ನೇ ಹರಿಸುತ್ತಿರುವ ಜೈಸ್ವಾಲ್‌ ಇದೇ ವೇಳೆ 2012-13 ರಲ್ಲಿ ಭಾರತ ತಂಡದ ಅನುಭವಿ ಬ್ಯಾಟ್ಸ್‌ಮನ್‌ ಶಿಖರ್‌ ಧವನ್‌ ಬಾರಿಸಿದ್ದ 332 ರನ್ನುಗಳ ದಾಖಲೆಯನ್ನು ಪುಡಿಗೈದಿದ್ದಾರೆ. ಶಿಖರ್‌ ಬ್ಯಾಟ್‌ನಿಂದ ಬಂದಿದ್ದ 332 ರನ್ನುಇದುವರೆಗೆ ಪಂದ್ಯವೊಂದರ ಗರಿಷ್ಟ ಸ್ಕೋರ್‌ ಎನ್ನಿಸಿತ್ತು. ಆದರೆ ಜೈಸ್ವಾಲ್‌ 357 ರನ್ನು ಬಾರಿಸುವ ಮೂಲಕ ಶಿಖರ್‌ ದಾಖಲೆ ಪತನವಾಗಿದೆ.

ಅದೂ ಅಲ್ಲದೇ, ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಪಂದ್ಯವೊಂದರಲ್ಲೇ ದ್ವಿಶತಕ ಮತ್ತು ಶತಕ ಗಳಿಸಿದ12 ನೇ ಆಟಗಾರ ಎಂಬ ಕೀರ್ತಿಗೂ ಭಾಜನರಾಗಿದ್ದಾರೆ. ಸಸೆಕ್ಸ್‌ ಮತ್ತು ಕೆಂಟ್‌ ಮಧ್ಯೆ ನಡೆದಿದ್ದ ಪಂದ್ಯದಲ್ಲಿ ಭಾರತದ ದುಲೀಪ್‌ ಸಿಂಗ್‌ ದ್ವಿಶತಕ ಮತ್ತು ಶತತಕನ ಬಾರಿಸುವ ಮೂಲಕ ಮೀ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ಖ್ಯಾತಿಗೆ ಪಾತ್ರವಾಗಿದ್ದಾರೆ.

1970-71 ರಲ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧ ನಡೆದಿದ್ದ ಟೆಸ್ಟ್‌ ಪಂದ್ಯದ ಮೊದಲ ಇನ್ನಿಗ್ಸ್‌ನಲ್ಲಿ 124 ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 220 ರನ್ನು ಸಿಡಿಸುವ ಮೂಲಕ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಈ ಸಾಧನೆ ಮಾಡಿದ ಏಕೈಕ ಭಾರತೀಯ ಬ್ಯಾಟರ್‌ ಎಂಬ ದಾಖಲೆ ಸುನೀಲ್‌ ಗವಾಸ್ಕರ್‌ ಹೆಸರಿನಲ್ಲಿದೆ.

ಮಧ್ಯಪ್ರದೇಶ ವಿರುದ್ಧದ ಇರಾನಿ ಟ್ರೋಫಿ ಪಂದ್ಯದಲ್ಲಿ ಶೇಷ ಭಾರತ ಪರ  ಯಶಸ್ವಿ ಜೈಸ್ವಾಲ್‌ 259 ಎಸೆತಗಳಿಂದ 213 ರನ್‌ ಬಾರಿಸಿದ್ದು, ಈ  ಮೂಲಕ ಇರಾನಿ ಟ್ರೋಫಿ ಇತಿಹಾಸದಲ್ಲೇ ದ್ವಿಶತಕ ಬಾರಿಸಿದ 10 ನೇ ಬ್ಯಾಟ್ಸ್‌ಮ್ಯಾನ್‌ ಎಂಬ ಖ್ಯಾತಿಗೆ ಪಾತ್ರವಾಗಿದ್ದಾರೆ.

ಇದನ್ನೂ ಓದಿ: ಒಂದು ಕಾಲು ಹರ್ಯಾಣದಲ್ಲಿದೆ, ಮತ್ತೊಂದು..: ಆಸೀಸ್ ಆಟಗಾರನ ಕೆಣಕಿದ ಶ್ರೇಯಸ್ ಅಯ್ಯರ್

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.