ವರ್ಷಾಂತ್ಯದ ಪಂಚರಾಜ್ಯಚುನಾವಣೆ: ಶುರುವಾಗಿದೆ ಲೆಕ್ಕಾಚಾರ

ಕರ್ನಾಟಕದಲ್ಲಿ ಗೆದ್ದ ಕಾಂಗ್ರೆಸ್‌ಗೆ ಹೊಸ ಹುಮ್ಮಸ್ಸು-ಬಿಜೆಪಿಗೆ ಹೊಸ ರಾಜ್ಯಗಳಿಗೆ ವಿಸ್ತರಿಸಿಕೊಳ್ಳುವ ಬಯಕೆ

Team Udayavani, May 18, 2023, 7:31 AM IST

election

ನವದೆಹಲಿ: ಕರ್ನಾಟಕ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭೂತಪೂರ್ವ ಜಯಗಳಿಸಿದೆ. ವರ್ಷಾಂತ್ಯದಲ್ಲಿ ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಛತ್ತೀಸ್‌ಗಢ, ಮಿಜೋರಾಂ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಪಂಚರಾಜ್ಯಗಳ ಪೈಕಿ ಮಧ್ಯಪ್ರದೇಶದಲ್ಲಿ ಮಾತ್ರ ಬಿಜೆಪಿ ಅಧಿಕಾರದಲ್ಲಿದೆ. ಉಳಿದ ರಾಜ್ಯಗಳಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿ ಇದ್ದರೆ, ಮಿಜೋರಾಂನಲ್ಲಿ ಮಿಜೋ ನ್ಯಾಷನಲ್‌ ಫ್ರಂಟ್‌ ಅಧಿಕಾರದಲ್ಲಿ ಇದೆ. ತೆಲಂಗಾಣದಲ್ಲಿ ಕೆ.ಚಂದ್ರಶೇಖರ ರಾವ್‌ ನೇತೃತ್ವದ ಭಾರತ ರಾಷ್ಟ್ರ ಸಮಿತಿ ಅಧಿಕಾರ ನಡೆಸುತ್ತಿದೆ.

2004ರಿಂದ ಮಧ್ಯಪ್ರದೇಶದಲ್ಲಿ ಬಿಜೆಪಿ ಅಧಿಕಾರ ನಡೆಸುತ್ತಿದೆ. 2018 ಡಿಸೆಂಬರ್‌ನಿಂದ 2020 ಮಾರ್ಚ್‌ ಅವಧಿಯಲ್ಲಿ ಮಾತ್ರ ಕಾಂಗ್ರೆಸ್‌ ಅಧಿಕಾರದಲ್ಲಿ ಇತ್ತು. 2008 ಮತ್ತು 2013ರಲ್ಲಿ ಬಿಜೆಪಿಗೆ ಅತ್ಯಧಿಕ ಮತಗಳು ಪ್ರಾಪ್ತಿಯಾಗಿತ್ತು. 2008ರ ಚುನಾವಣೆಯಲ್ಲಿ ಬಿಜೆಪಿಗೆ 143 ಸ್ಥಾನಗಳು ಬಂದಿದ್ದರೆ, ಶೇ.37.64 ಮತಗಳೂ ಪ್ರಾಪ್ತಿಯಾಗಿದ್ದವು. ಕಾಂಗ್ರೆಸ್‌ಗೆ 71 ಸ್ಥಾನಗಳು ಮತ್ತು ಶೇ.32.39 ಮತಗಳು ಬಂದಿದ್ದವು. 2013ರಲ್ಲಿ ಬಿಜೆಪಿಗೆ 163 ಸೀಟುಗಳು, ಶೇ.44.88 ಮತಗಳು, ಕಾಂಗ್ರೆಸ್‌ಗೆ 58 ಸೀಟುಗಳು, ಶೇ.36.38 ಮತಗಳು ಬಂದಿದ್ದವು.
2018ರಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಶೇ.41 ಮತ ಪಡೆದುಕೊಂಡಿದ್ದವು. ಬಿಜೆಪಿಗೆ 104, ಕಾಂಗ್ರೆಸ್‌ 114ರ ಸಮೀಪದ ಸೀಟುಗಳನ್ನು ಪಡೆದುಕೊಂಡಿದ್ದವು.

ಛತ್ತೀಸ್‌ಗಡ: 2000ನೇ ಇಸವಿಯಲ್ಲಿ ರಚನೆಗೊಂಡ ರಾಜ್ಯದಲ್ಲಿ ಮೊದಲ 15 ವರ್ಷ ಡಾ.ರಮಣ್‌ ಸಿಂಗ್‌ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ನಡೆಸಿತ್ತು. 2018ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ 90 ಕ್ಷೇತ್ರಗಳ ಪೈಕಿ 68ನ್ನು ಗೆದ್ದು ಅಧಿಕಾರ ವಹಿಸಿಕೊಂಡಿತು. ಬಿಜೆಪಿಗೆ ಶೇ.33 ಮತಗಳು ಪ್ರಾಪ್ತಿಯಾಗಿ 15 ಸೀಟುಗಳಲ್ಲಿ ಜಯ ಸಾಧಿಸಿತ್ತು. ಬಿಎಸ್‌ಪಿ ಕೂಡ ರಾಜ್ಯದಲ್ಲಿ ಅದೃಷ್ಟ ಪರೀಕ್ಷೆ ನಡೆಸಲು ಮುಂದಾಗಿತ್ತು.

ರಾಜಸ್ಥಾನ: ಕಳೆದ ಮೂವತ್ತು ವರ್ಷಗಳಿಂದ ಈ ರಾಜ್ಯದಲ್ಲಿ ಒಂದು ಬಾರಿ ಅಧಿಕಾರ ನಡೆಸಿದ ಪಕ್ಷ ಮತ್ತೂಂದು ಅವಧಿಗೆ ಅಧಿಕಾರ ಉಳಿಸಿಕೊಂಡದ್ದೇ ಇಲ್ಲ. ಕಾಂಗ್ರೆಸ್‌ ಮತ್ತು ಬಿಜೆಪಿ ಆವರ್ತನದಂತೆ ಅಧಿಕಾರ ನಡೆಸಿವೆ. 2013ರಲ್ಲಿ 200 ಸ್ಥಾನಗಳ ಪೈಕಿ ಬಿಜೆಪಿ 163ನ್ನು ಗೆದ್ದಿತ್ತು. ಕಾಂಗ್ರೆಸ್‌ 21 ಕ್ಷೇತ್ರಗಳಲ್ಲಿ ಜಯ ಸಾಧಿಸಿತ್ತು. ಆದರೆ 2008 ಮತ್ತು 2018ರಲ್ಲಿ ಕಾಂಗ್ರೆಸ್‌ ಗೆದ್ದಿದ್ದ ಸಂದರ್ಭದಲ್ಲಿ ಬಹುಮತಕ್ಕೆ ಬೇಕಾಗಿರುವ 101 ಸೀಟುಗಳಿಗಿಂತ ಹೆಚ್ಚು ಪಡೆದಿರಲಿಲ್ಲ. ಸದ್ಯ ಇರುವ ಅಶೋಕ್‌ ಗೆಹಲೋತ್‌ ಸರ್ಕಾರಕ್ಕೆ ಬಿಎಸ್‌ಪಿಯ ಬೆಂಬಲವೂ ಇದೆ. ಮಾಜಿ ಡಿಸಿಎಂ ಸಚಿನ್‌ ಪೈಲಟ್‌ ಮತ್ತು ಸಿಎಂ ಅಶೋಕ್‌ ಗೆಹಲೋತ್‌ ನಡುವಿನ ಭಿನ್ನಾಭಿಪ್ರಾಯ ಕಾಂಗ್ರೆಸ್‌ಗೆ ಎರವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ತೆಲಂಗಾಣ: ಆಂಧ್ರಪ್ರದೇಶದಿಂದ 2014ರಲ್ಲಿ ಪ್ರತ್ಯೇಕ ರಾಜ್ಯವಾಗಿ ಉದಯಿಸಿದ ತೆಲಂಗಾಣದಲ್ಲಿ ಕೆ.ಚಂದ್ರಶೇಖರ ರಾವ್‌ ನೇತೃತ್ವದ ಭಾರತ ರಾಷ್ಟ್ರ ಸಮಿತಿ ನೇತೃತ್ವದ ಪಕ್ಷದ ಸರ್ಕಾರವಿದೆ. 2018ರಲ್ಲಿ ನಡೆದಿದ್ದ ಚುನಾವಣೆಯಲ್ಲಿ 188 ಕ್ಷೇತ್ರಗಳ ಪೈರಿ ಬಿಆರ್‌ಎಸ್‌ 88 ಸ್ಥಾನಗಳನ್ನು ಪಡೆದುಕೊಂಡಿತ್ತು (ಶೇ.47). 19 ಸ್ಥಾನಗಳನ್ನು ಗೆದ್ದಿದ್ದ ಕಾಂಗ್ರೆಸ್‌ಗೆ ಶೇ.28 ಮತ ಪ್ರಾಪ್ತಿಯಾಗಿತ್ತು. ಬಿಜೆಪಿ ಈ ರಾಜ್ಯದಲ್ಲಿ ಹೆಚ್ಚು ಪ್ರಭಾವಯುತವಾಗಿಲ್ಲ. ಸಂಸದ ಅಸಾದುದ್ದೀನ್‌ ಒವೈಸಿ ಅವರ ಎಂಐಎಂ ಪಕ್ಷ ಕೂಡ ಕೆಲವೊಂದು ಕ್ಷೇತ್ರಗಳಲ್ಲಿ ಪ್ರಭಾವ ಹೊಂದಿದೆ.

ಮಿಜೋರಾಂ: ನಲವತ್ತು ಸದಸ್ಯ ಬಲದ ವಿಧಾನಸಭೆಯಲ್ಲಿ ಸದ್ಯ ಮಿಜೋ ನ್ಯಾಷನಲ್‌ ಫ್ರಂಟ್‌ ಅಧಿಕಾರದಲ್ಲಿದೆ. ಆ ಪಕ್ಷಕ್ಕೆ ಕಳೆದ ಚುನಾವಣೆಯಲ್ಲಿ 27 ಸೀಟುಗಳು ಲಭಿಸಿದ್ದವು. ಬಹುಮತ ಪ್ರಾಪ್ತಿಯಾಗದ್ದರಿಂದ ಪಕ್ಷೇತರ ಶಾಸಕರ ಬೆಂಬಲದಿಂದ ಮಿಜೋ ನ್ಯಾಷನಲ್‌ ಫ್ರಂಟ್‌ ಈಗ ಅಧಿಕಾರದಲ್ಲಿದೆ. 2008ರ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 32 ಸ್ಥಾನಗಳು, ಶೇ.38.89, ಎಂಎನ್‌ಎಫ್ಗೆ 3 ಸ್ಥಾನಗಳು ಮತ್ತು ಶೇ.30.65 ಮತಗಳು, 2013ರಲ್ಲಿ ಕಾಂಗ್ರೆಸ್‌ಗೆ 34 ಸ್ಥಾನಗಳು ಮತ್ತು ಶೇ.44.63, ಎಂಎನ್‌ಎಫ್ಗೆ 5 ಮತ್ತು ಶೇ.28.65 ಮತಗಳು ಲಭಿಸಿದ್ದವು. 2018ರಲ್ಲಿ ಬಿಜೆಪಿ 1 ಸ್ಥಾನ ಗಳಿಸಿದೆ. ಇತರರು 8 ಕ್ಷೇತ್ರಗಳಲ್ಲಿ ಗೆದ್ದಿದ್ದು, ಶೇ. 22.94 ಮತ ಪ್ರಮಾಣ ಹೊಂದಿದ್ದಾರೆ.

ಟಾಪ್ ನ್ಯೂಸ್

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.