BJP: ಸಂಸತ್ ಚುನಾವಣೆಗೆ ಯೋಗೇಶ್ವರ್ ಸಿದ್ಧತೆ
Team Udayavani, Jun 23, 2023, 7:10 AM IST
ರಾಮನಗರ: ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಅವರು ರಾಜಕೀಯ ವೈರಾಗ್ಯದ ಮಾತುಗಳನ್ನಾಡುತ್ತಿರುವ ಬೆನ್ನಲ್ಲೇ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತಾನು ಸಿದ್ಧವಿರುವುದಾಗಿ ಬಿಜೆಪಿ ನಾಯಕ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ.
ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಸದ್ದು ಜೋರಾಗಿಯೇ ಕೇಳಿಬರುತ್ತಿದೆ. ವಿಧಾನಸಭಾ ಚುನಾವಣೆಯ ಸೋಲಿನ ಬಳಿಕ ಮತ್ತೆ ಮೈಕೊಡವಿ ಮೇಲೆದ್ದಿರುವ ಸಿ.ಪಿ.ಯೋಗೇಶ್ವರ್, ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿದ್ದಾರೆ. ಇಷ್ಟೆಲ್ಲ ಬೆಳವಣಿಗೆಗಳ ನಡುವೆಯೂ ಜೆಡಿಎಸ್ ನಾಯಕ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮಾತ್ರ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ.
ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಜತೆ ಯೋಗೇಶ್ವರ್ ಆರಂಭದಿಂದಲೂ “ಲವ್ ಆ್ಯಂಡ್ ಹೇಟ್’ ಸಂಬಂಧ ಇರಿಸಿಕೊಂಡೇ ಬಂದಿದ್ದಾರೆ. ಎರಡು ಬಾರಿ ಕಾಂಗ್ರೆಸ್ ತೊರೆದಾಗಲೂ ಡಿ.ಕೆ.ಶಿವಕುಮಾರ್ ಅವರನ್ನು ಬೈದುಕೊಂಡೇ ಹೊರ ಬಂದಿರುವ ಯೋಗೇಶ್ವರ್, ಇದುವರೆಗೆ ಡಿಕೆಶಿ ಮತ್ತು ಅವರ ಕುಟುಂಬದ ವಿರುದ್ಧ ಯಾವುದೇ ಚುನಾವಣೆ ಎದುರಿಸಿಲ್ಲ. ಈ ಬಾರಿಯ ಲೋಕಸಭಾ ಚುನಾವಣೆ ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಮತ್ತು ಸಿ.ಪಿ.ಯೋಗೇಶ್ವರ್ ನಡುವಿನ ಜಿದ್ದಾಜಿದ್ದಿನ ಅಖಾಡವಾಗಲಿದೆ ಎಂದು ಹೇಳಲಾಗುತ್ತಿದೆ. ಆದರೆ, ಡಿ.ಕೆ.ಸುರೇಶ್ ರಾಜಕೀಯ ವೈರಾಗ್ಯ ಮುಂದುವರಿಸುವರೇ, ಅಥವಾ ಮತ್ತೆ ಕಣಕ್ಕಿಳಿಯುವರೇ ಎಂಬುದಿನ್ನೂ ಸ್ಪಷ್ಟವಾಗಿಲ್ಲ.
ರಾಮನಗರ ಕ್ಷೇತ್ರದಲ್ಲಿ ಪುತ್ರ ನಿಖೀಲ್ ಸೋಲಿಗೆ ಸ್ಮಾರ್ಟ್ಕಾರ್ಡ್ ತಂತ್ರ ಕಾರಣವಾಗಿದ್ದು, ಈ ತಂತ್ರದ ಹಿಂದೆ ಡಿ.ಕೆ.ಸುರೇಶ್ ಪಾತ್ರ ಇದೆ ಎಂದು ಎಚ್.ಡಿ.ಕುಮಾರಸ್ವಾಮಿ ಗರಂ ಆಗಿದ್ದಾರೆ. ಮಗನ ಸೋಲಿನ ಸೇಡು ತೀರಿಸಿಕೊಳ್ಳಲು ಎಚ್ಡಿಕೆ ಕಾದು ಕುಳಿತಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರತೀಕಾರ ತೀರಿಸಿಕೊಳ್ಳಲಿದ್ದಾರೆಂಬ ಮಾತುಗಳು ಕೇಳಿಬರುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ