ತನ್ನ ಅಂಗಡಿ ಮುಂದೆ ಉಗುಳಿದ ಎಂಬ ಕ್ಷುಲ್ಲಕ ಕಾರಣಕ್ಕೆ ಇರಿದು ವ್ಯಕ್ತಿಯ ಕೊಲೆ
Team Udayavani, Sep 23, 2020, 2:15 PM IST
ಚಿಂತಾಮಣಿ : ಅಂಗಡಿ ಮುಂದೆ ಎಂಜಲು ಉಗಿದಿದ್ದಕ್ಕೆ ಅಂಗಡಿ ಮಾಲಿಕನ ಮಗ ವ್ಯಕ್ತಿಯೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಚಿಂತಾಮಣಿ ತಾಲೂಕಿನ ಉಲ್ಲಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೊಲೆಗೀಡಾದ ವ್ಯಕ್ತಿಯನ್ನು ಮುನಿಕೃಷ್ಣ ಎಂದು ಗುರುತಿಸಲಾಗಿದ್ದು ಚೇತನ್ ಎಂಬ ಯುವಕ ಕೊಲೆ ಮಾಡಿದ್ದಾನೆ.
ಕಾಫಿ ಮಾಡಲು ಕಾಫಿ ಪುಡಿ ತರಲು ಅಂಗಡಿಗೆ ಹೊಗಿದ್ದ ವೇಳೆ ಅಂಗಡಿ ಬಳಿ ಮುನಿಕೃಷ್ಣ ಎಂಜಲು ಉಗಿದಿದ್ದಾನೆ ಇದರಿಂದ ಕುಪಿತಗೊಂಡ ಚೇತನ್ ಅಂಗಡಿ ಮುಂದೆ ಎಂಜಲು ಉಗಿಯಬೇಡ ಎಂದು ಬುದ್ದಿವಾದ ಹೇಳಿದ್ದಾನೆ ಎನ್ನಲಾಗಿದೆ ಈ ವೇಳೆಯಲ್ಲಿ ಇಬ್ಬರ ಮದ್ಯೆ ಮಾತಿನ ಚಕಮಕಿ ನಡೆದು ಕೈ ಕೈ ಮಿಲಾಯಿಸಿದ್ದಾರೆ.
ಈ ವೇಳೆ ಉದ್ರೇಕಗೊಂಡ ಚೇತನ್ ಚಾಕುವಿನಿಂದ ಮುನಿಕೃಷ್ಣನ ಎದೆ ಮತ್ತು ಹೊಟ್ಟೆ ಭಾಗಕ್ಕೆ ಎರಡು ಮೂರು ಬಾರಿ ತಿವಿದಿದ್ದಾನೆ ಪರಿಣಾಮ ಮುನಿಕೃಷ್ಣನ ಸ್ಥಿತಿ ಗಂಭಿರವಾಗಿದೆ ಸ್ಥಳದಲ್ಲಿದ್ದ ಗ್ರಾಮಸ್ಥರು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರಕ್ಕೆ ತೆರಳುತ್ತಿದ್ದ ವೇಳೆ ಮಾರ್ಗಮಧ್ಯೆ ಮುನಿಕೃಷ್ಣ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಇದನ್ನೂ ಓದಿ : ತಡರಾತ್ರಿ ದಟ್ಟ ಕಾಡಿನಲ್ಲಿ ಕಾರಿನೊಳಗೆ 6 ತಾಸು ಕಳೆದ ಮೂವರನ್ನು ರಕ್ಷಿಸಿದ ಪೊಲೀಸ್ ಅಧಿಕಾರಿ
ವಿಷಯ ತಿಳಿದ ಚಿಂತಾಮಣಿ ಗ್ರಾಮಾಂತರ ಪೋಲೀಸರು ಘಟನಾ ಸ್ಥಳಕ್ಕೆ ಭೇಟಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ