ಭಾರತೀಯ ಕ್ರಿಕೆಟಿಗರ ಜಿಂಬಾಬ್ವೆ ಪ್ರವಾಸವೂ ರದ್ದು
ನಡೆಯಬೇಕಿತ್ತು 3 ಪಂದ್ಯಗಳ ಏಕದಿನ ಸರಣಿ
Team Udayavani, Jun 13, 2020, 6:50 AM IST
ಹೊಸದಿಲ್ಲಿ: ಟೀಮ್ ಇಂಡಿಯಾದ ಮುಂಬರುವ ಜಿಂಬಾಬ್ವೆ ಕ್ರಿಕೆಟ್ ಪ್ರವಾಸವನ್ನೂ ಬಿಸಿಸಿಐ ಕೋವಿಡ್-19 ಕಾರಣದಿಂದ ರದ್ದುಗೊಳಿಸಿದೆ. ಶ್ರೀಲಂಕಾ ಪ್ರವಾಸವನ್ನು ರದ್ದುಗೊಳಿಸಿದ ಒಂದೇ ದಿನದಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಶುಕ್ರವಾರ ಇದನ್ನು ಅಧಿಕೃತವಾಗಿ ಪ್ರಕಟಿಸಿದರು.
ಭಾರತ ತಂಡ ಶ್ರೀಲಂಕಾ ಪ್ರವಾಸ ಮುಗಿಸಿ ಆಗಸ್ಟ್ನಲ್ಲಿ ಜಿಂಬಾಬ್ವೆಗೆ ಕಿರು ಪ್ರವಾಸ ಕೈಗೊಳ್ಳುವ ಕಾರ್ಯಕ್ರಮವಿತ್ತು. ಆ. 22ರಿಂದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ ದೇಶದಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಬಾರದ ಕಾರಣ ಈ ಎರಡೂ ಪ್ರವಾಸ ಗಳನ್ನು ರದ್ದುಗೊಳಿಸಲಾಗಿದೆ ಎಂದು ಶಾ ಹೇಳಿದರು. ಶ್ರೀಲಂಕಾದಲ್ಲಿ 3 ಏಕದಿನ ಹಾಗೂ 3 ಟಿ20 ಪಂದ್ಯಗಳ ಸರಣಿಯನ್ನು ಆಯೋಜಿಸಲಾಗಿತ್ತು.
ಸೂಕ್ತ ಸಿದ್ಧತೆ ಅಗತ್ಯ
“ವಿದೇಶ ಪ್ರವಾಸಕ್ಕೂ ಮೊದಲು ಕ್ರಿಕೆಟಿಗರಿಗೆ ಸೂಕ್ತ ಅಭ್ಯಾಸ ಅಗತ್ಯವಿದೆ. ಈಗಿನ ಸ್ಥಿತಿಯಲ್ಲಿ ಕನಿಷ್ಠ ಆರು ವಾರಗಳ ಸಿದ್ಧತೆ ಬೇಕಿದೆ. ಆದರೆ ಕೋವಿಡ್-19ದಿಂದಾಗಿ ಬಹುತೇಕ ಆಟಗಾರರು ಮನೆಯೊಳಗೇ ಉಳಿದಿದ್ದಾರೆ. ಜುಲೈ ಒಳಗೆ ಅಭ್ಯಾಸ ಆರಂಭಗೊಳ್ಳುವ ಯಾವುದೇ ಸಾಧ್ಯತೆ ಇಲ್ಲ. ಹೀಗಾಗಿ ಪ್ರವಾಸವನ್ನು ರದ್ದುಗೊಳಿ ಸುವುದೊಂದೇ ನಮ್ಮ ಮುಂದಿರುವ ಮಾರ್ಗ’ ಎಂಬುದಾಗಿ ಜಯ್ ಶಾ ಹೇಳಿದರು. “ಸಂಪೂರ್ಣ ಸುರಕ್ಷಿತ’ ವಾತಾ ವರಣ ನಿರ್ಮಾಣಗೊಂಡ ಬಳಿಕವಷ್ಟೇ ಕ್ರಿಕೆಟಿಗರ ಅಭ್ಯಾಸ ಶಿಬಿರವನ್ನು ಆಯೋ ಜಿಸಲಾಗುವುದು ಎಂದೂ ತಿಳಿಸಿದರು.
“ಬಿಸಿಸಿಐ ಅಂತರಾಷ್ಟ್ರೀಯ ಕ್ರಿಕೆಟ್ ಸರಣಿಗಳ ಪುನರಾರಂಭಕ್ಕೆ ಮುಂದಡಿ ಇಡುತ್ತಲೇ ಇದೆ. ಆದರೆ ಗಡಿಬಿಡಿ ಮಾಡುವುದಿಲ್ಲ. ಯಾವುದೇ ಕಾರಣಕ್ಕೂ ಸರಕಾರ ಹಾಗೂ ಆರೋಗ್ಯ ಇಲಾಖೆಯ ಸೂಚನೆಯನ್ನು ಮೀರುವುದಿಲ್ಲ’ ಎಂದು ಶಾ ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ