ಅಕ್ರಮ ಭೂಮಿಯನ್ನು ಒತ್ತುವರಿ ಮಾಡಿ ಬಡವರಿಗೆ ಮನೆ ಕಟ್ಟಲಾಗುವುದು: ಯಡಿಯೂರಪ್ಪ
Team Udayavani, Jan 28, 2020, 2:09 PM IST
ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ಭೂಮಿ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ತನಿಖೆ ನಡೆಸಿ, ಒತ್ತುವರಿ ಭೂಮಿಯನ್ನು ಸರ್ಕಾರದ ವ್ಯಾಪ್ತಿಗೆ ಒಳಪಡಿಸಿ, ಅಲ್ಲೆಲ್ಲಾ ಬಡವರಿಗೆ ಮನೆ ಕಟ್ಟಿಸಿಕೊಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದರು.
ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳ ಜಿಲ್ಲಾಡಳಿತದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಅಕ್ರಮ ಸಕ್ರಮ ಯೋಜನೆ ಅಡಿಯಲ್ಲಿ 10 ಸಾವಿರ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಬೆಂಗಳೂರು ನಗರದಲ್ಲಿ ಎಲ್ಲೆಲ್ಲಿ ಅಕ್ರಮವಾಗಿ ಉಳ್ಳವರು ಒತ್ತುವರಿ ಮಾಡಿರುವ ಭೂಮಿಯನ್ನು ವಾಪಸ್ ಪಡೆಯುವ ಸಲುವಾಗಿ ಈಗಾಗಲೇ ಸಮಿತಿ ಮಾಡಲಾಗಿದೆ. ಒತ್ತುವರಿ ಮಾಡಿರುವವರ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೆ, ಎಲ್ಲಾ ಕಡೆಗಳಲ್ಲಿ ಬಡವರಿಗೆ, ನಿರ್ಗತಿಕರಿಗೆ ಮನೆ ಕಟ್ಟಿಸಿಕೊಡಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಕಂದಾಯ ಸಚಿವ ಆರ್ ಅಶೋಕ್ ಮಾತನಾಡಿ, ವೃದ್ದಾಪ್ಯ ವೇತನಕ್ಕೆ ಆಧಾರ್ ಕಾರ್ಡನ್ನು ಲಿಂಕ್ ಮಾಡಲಾಗುವುದು. ನಿಜವಾದ ಫಲಾನುಭವಿಗಳು ಮಾತ್ರ ಉಳಿಯುತ್ತಾರೆ. ಇದರಿಂದ ಸರ್ಕಾರಕ್ಕೆ 700 ಕೋಟಿ ರೂ. ಉಳಿತಾಯವಾಗಲಿದೆ ಎಂದು ತಿಳಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು
Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !
Banda; ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ
Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ