ಉಪಚುನಾವಣೆ: ಜೆಡಿಎಸ್ ಗಿಂತಲೂ ಹೆಚ್ಚು ಮತ ನೋಟಾಗೆ! ಎಲ್ಲಿಎಷ್ಟು ಗೊತ್ತಾ?
Team Udayavani, Dec 10, 2019, 4:10 PM IST
ಬೆಂಗಳೂರು: ರಾಜ್ಯದ ಹದಿನೈದು ಕ್ಚೇತ್ರಗಳ ಉಪಚುನಾವಣೆಯ ಫಲಿತಾಂಶ ಬಂದಿದೆ. 12 ಸ್ಥಾನಗಳೊಂದಿಗೆ ಆಡಳಿತಾರೂಢ ಬಿಜೆಪಿಗೆ ಮತದಾರರು ಜೈ ಎಂದಿದ್ದರೆ, ಕಾಂಗ್ರೆಸ್ ಗೆ ಕೇವಲ 2 ಸ್ಥಾನಕ್ಕೆ ತೃಪ್ತಿ ಪಡಬೇಕಾಗಿದೆ. ಆದರೆ ತೆನೆ ಹೊತ್ತ ಮಹಿಳೆ ಜೆಡಿಎಸ್ ಮಾತ್ರ ಶೂನ್ಯ ಸಂಪಾದನೆ ಮಾಡಿದ್ದು ರಾಜ್ಯದಲ್ಲಿ ತೀವ್ರ ಮುಖಭಂಗ ಅನುಭವಿಸಿದೆ.
ಅದರಲ್ಲೂ ಜೆಡಿಎಸ್ ನ ಭದ್ರಕೋಟೆಯಾಗಿದ್ದ ಮಂಡ್ಯದ ಕೆ.ಆರ್ ಪೇಟೆಯಲ್ಲಿ ಸೋಲನುಭವಿಸಿದೆ. ಇಲ್ಲಿ ಮೊದಲ ಬಾರಿ ಬಿಜೆಪಿ ತನ್ನ ಖಾತೆ ತೆರೆದಿದೆ. ಇಷ್ಟೆಲ್ಲಾ ಸೋಲಿನ ಮಧ್ಯೆ ಮತ್ತೊಂದು ಅವಮಾನ ಜೆಡಿಎಸ್ ಕಾಡಿದ್ದು, ನೋಟಾಗೆ ಹೆಚ್ಚಿನ ಮತ ಚಲಾವಣೆಯಾಗಿದ್ದು. ಹೌದು ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಗಿಂತ ನೋಟಾಗೆ ಹೆಚ್ಚಿನ ಮತಗಳು ಲಭಿಸಿವೆ.
ಕೆ.ಆರ್. ಪುರ
ಇಲ್ಲಿ ಬಿಜೆಪಿಯ ಬೈರತಿ ಬಸವರಾಜು ಅವರು ಭರ್ಜರಿಯಾಗಿ ಗೆದ್ದಿದ್ದಾರೆ. ಬೈರತಿಗೆ 1,39,833 ಮತಗಳು ಲಭಿಸಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಎಂ ನಾರಾಯಣ ಸ್ವಾಮಿಗೆ 76,428 ಮತ ಲಭಿಸಿವೆ. ಜೆಡಿಎಸ್ ನಿಂದ ಸ್ಪರ್ಧಿಸಿದ್ದ ಕೃಷ್ಣಮೂರ್ತಿ ಅವರು ಗಳಿಸಿದ್ದು ಕೇವಲ 2,048 ಮತಗಳನ್ನು ಮಾತ್ರ. ಆದರೆ ಕ್ಷೇತ್ರದಲ್ಲಿ ಒಟ್ಟು 5,181 ಜನರು ನೋಟಾಗೆ ಜೈ ಎಂದಿದ್ದಾರೆ.
ರಾಣೆಬೆನ್ನೂರು
ಹಾವೇರಿಯ ರಾಣೆಬೆನ್ನೂರು ಕ್ಷೇತ್ರದಲ್ಲಿ ಬಿಜೆಪಿಯ ಅರುಣ್ ಕುಮಾರ್ ಮೊದಲ ಬಾರಿ ಜಯ ಗಳಿಸಿದ್ದಾರೆ. ಅರುಣ್ ಕುಮಾರ್ 95,408 ಮತ ಪಡೆದರೆ, ಹಳೆ ಹುಲಿ ಕಾಂಗ್ರೆಸ್ ನ ಕೆ ಬಿ ಕೋಳಿವಾಡ 72,187 ಮತಗಳನ್ನು ಗಳಿಸಿದ್ದರು. ಇಲ್ಲಿ ನೋಟಾಗೆ 1608 ಮತಗಳು ಚಲಾವಣೆಯಾಗಿದ್ದರೆ, ಅದಕ್ಕಿಂತಲೂ ಕಡಿಮೆ ಅಂದರೆ ಕೇವಲ 979 ಮತಗಳು ಜೆಡಿಎಸ್ ನ ಮಲ್ಲಿಕಾರ್ಜುನ ರುದ್ರಪ್ಪ ಹಲಗೇರಿ ಅವರಿಗೆ ಲಭಿಸಿದೆ.
ಯಲ್ಲಾಪುರ
ಸೋಮವಾರದ ಫಲಿತಾಂಶದಲ್ಲಿ ಮೊದಲು ವಿಜೇತರನ್ನು ಘೋಷಿಸಿದ ಕ್ಷೇತ್ರ ಉತ್ತರ ಕನ್ನಡದ ಯಲ್ಲಾಪುರ. ಇಲ್ಲಿ ಕಮಲ ಪಕ್ಷದ ಶಿವರಾಂ ಹೆಬ್ಬಾರ್ 80442 ಮತ ಪಡೆದಿದ್ದರೆ, ಕಾಂಗ್ರೆಸ್ ನ ಭೀಮಣ್ಣ ನಾಯ್ಕ 49034 ಮತ ಪಡೆದಿದ್ದರು. ಆದರೆ ಈ ಕ್ಷೇತ್ರದಲ್ಲಿ ಜೆಡಿಎಸ್ ಟಿಕೆಟ್ ಗಿಟ್ಟಿಸಿದ್ದ ಚೈತ್ರಾ ಗೌಡಗೆ ಲಭಿಸಿದ್ದು ಕೇವಲ 1235 ಮತಗಳು. ಆದರೆ ಮತದಾರರು ಅವರಿಗಿಂತ ಹೆಚ್ಚಿನ ಮತಗಳನ್ನು (1444) ನೋಟಾಗೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ