ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪ್ರತಿಕ್ರಿಯೆ
Team Udayavani, Dec 9, 2019, 2:58 PM IST
ಸಂಗ್ರಹ ಚಿತ್ರ
ಕೋಲಾರ: 15 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ಚುನಾವನೆಗೆ ಸ್ಪರ್ಧಿಸಿದ್ದ 13 ಅನರ್ಹ ಶಾಸಕರ ಪೈಕಿ 11 ಮಂದಿ ಗೆಲುವು ಸಾಧಿಸಿದ್ದಾರೆ. ಮಾಜಿ ಸ್ಪೀಕರ್ ಆಗಿರುವ ಕೆ ಆರ್ ರಮೇಶ್ ಕುಮಾರ್ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಜನರ ತೀರ್ಪನ್ನು ಗೌರವಿಸುತ್ತೇನೆ ಎಂದಿದ್ದಾರೆ.
ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಉಪಚುನಾವನೆಯ ಫಲಿತಾಂಶವನ್ನು ಕಾಂಗ್ರೆಸ್ ಧೈರ್ಯದಿಂದ ಮತ್ತು ಸಮಚಿತ್ತದಿಂದ ಸ್ವೀಕರಿಸುತ್ತೇವೆ. ಚುನಾವಣೆಯಲ್ಲಿ ಹಣ ಕೊಡುವ- ಪಡೆಯುವ ರಾಜಕಾರಣ ಮಾಡಿ ನನಗೆ ಗೊತ್ತಿಲ್ಲ ಎಂದರು.
ರಮೇಶ್ ಕುಮಾರ್ ಅವರು ಸ್ಪೀಕರ್ ಆಗಿದ್ದ ಸಮಯದಲ್ಲಿ ಒಟ್ಟು 17 ಶಾಸಕರನ್ನು ಅನರ್ಹಗೊಳಿಸಲಾಗಿತ್ತು.