ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿ.ಟಿ.ರವಿ, ಮಾಧುಸ್ವಾಮಿ ಭೇಟಿ
Team Udayavani, Aug 21, 2019, 12:36 PM IST
ಚಿಕ್ಕಮಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಚಿವ ಸಂಪುಟದಲ್ಲಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಶಾಸಕರಾದ ಸಿ.ಟಿ.ರವಿ ಮತ್ತು ಮಾಧು ಸ್ವಾಮಿ ಅವರು ಇಂದು ಜಿಲ್ಲೆಯ ವಿವಿಧ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು.
ಮೂಡಿಗೆರೆ ತಾಲೂಕಿನ ಬಣಕಲ್, ಬಾಳೂರು ಹೊರಟ್ಟಿ, ಮಲೆಮನೆ, ದುರ್ಗದಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ಸದ್ಯದ ಪರಿಸ್ಥಿತಿಯನ್ನು ಅವಲೋಕಿಸಿದರು.
ಮಲೆನಾಡಿನ ಸದ್ಯದ ಪರಿಸ್ಥಿತಿಯನ್ನು ಕಂಡು ಮಾಧುಸ್ವಾಮಿ ಆಶ್ಚರ್ಯ ವ್ಯಕ್ತಪಡಿಸಿದರು. ಪ್ರವಾಹ ಮತ್ತು ಭೂಕುಸಿತದಿಂದ ಮನೆ, ಜಮೀನು ಕಳೆದುಕೊಂಡ ಸಂತ್ರಸ್ತರನ್ನು ಸಚಿವರು ಸಂತೈಸಿದರು.
ಸಚಿವ ಮಾಧುಸ್ವಾಮಿ ಮತ್ತು ಸಿ.ಟಿ. ರವಿ ಅವರಿಗೆ ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಸಾಥ್ ನೀಡಿದರು.