ರೈತರಿಗೆ ಪ್ರಯೋಜನವಾಗದ ರಾಜ್ಯದ ಕೃಷಿ ಮಾರುಕಟ್ಟೆ ಸುಧಾರಣೆಗಳು : ಸಿಎಜಿ ವರದಿ


Team Udayavani, Oct 13, 2019, 11:48 PM IST

APMC-13-10

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ರೈತರ ಅಭಿವೃದ್ಧಿಗೆ ಉಪಯುಕ್ತವಾಗಲೆಂದು ಕರ್ನಾಟಕ ಸರಕಾರ ಜಾರಿ ಮಾಡಿದ ಕೃಷಿ ಮಾರುಕಟ್ಟೆ ಸುಧಾರಣೆಗಳು ಗುರಿಯನ್ನು ತಲುಪುವಲ್ಲಿ  ಸೀಮಿತ ಯಶಸ್ಸು ಸಾಧಿಸಿದ್ದು, ವ್ಯಾಪಕ ಮಾರುಕಟ್ಟೆ ಅಭಾವ ಮತ್ತು ಕಾರ್ಯಾಚರಣೆಯಲ್ಲಿ ಪಾರದರ್ಶಕತೆ ಕೊರತೆ ಈ ಫ‌ಲಿತಾಂಶಕ್ಕೆ ಕಾರಣ ಎಂದು ಸಿಎಜಿ ವರದಿ ತಿಳಿಸಿದೆ.

ಪ್ರಾರಂಭದ ಹಂತದಲ್ಲಿ  ಸುಧಾರಣೆಗಳನ್ನು ಪ್ರಬಲವಾಗಿ ಅನುಷ್ಠಾನಗೊಳಿಸಬೇಕೆಂಬ ದೃಷ್ಟಿಯಿಂದ ಏಕೀಕೃತ ಮಾರುಕಟ್ಟೆ ವೇದಿಕೆಯನ್ನು (ಯುಎಂಪಿ) ಕಲ್ಪಿಸಿಕೊಟ್ಟ ಕರ್ನಾಟಕ ಸರಕಾರ, ಕೃಷಿ ಮಾರುಕಟ್ಟೆಯನ್ನು  ಅದರೊಂದಿಗೆ ವಿಲೀನಗೊಳಿಸಿತು. ಆ ಮೂಲಕ ನೇರವಾಗಿ ಕೃಷಿ ಮಾರುಕಟ್ಟೆಯಿಂದ ಸರಕುಗಳನ್ನು ಎಲೆಕ್ಟ್ರಾನಿಕ್‌ ಮಾರಾಟ ಪದ್ಧತಿಯಲ್ಲಿ ಮಾಡಲು ನಿರ್ಧರಿಸಲಾಗಿತ್ತು. 2014ರಲ್ಲಿ  ಕರ್ನಾಟಕ ಸರಕಾರ, ಎನ್‌.ಸಿ.ಡಿ.ಇ.ಎಕ್ಸ್‌. ಸ್ಪಾಟ್‌ ಎಕ್ಸ್‌ಚೇಂಜ್‌ ಜಂಟಿ ಸಹಭಾಗಿತ್ವದಲ್ಲಿ  ಎಸ್‌ಪಿವಿ ಹಾಗೂ ರಾಷ್ಟ್ರೀಯ ಇ-ಮಾರ್ಕೆಟ್‌ ಸರ್ವೀಸಸ್‌ (ಆರ್‌.ಎಂ.ಸ್‌.) ಅನ್ನು ರೈತರ ಅನುಕೂಲಕ್ಕಾಗಿ ಹೊರತಂದಿತ್ತು.

ಆದರೆ ಮಾರ್ಚ್‌ 2018 ರ ವರ್ಷಾಂತ್ಯಕ್ಕೆ ಕರ್ನಾಟಕದ ಆರ್ಥಿಕ ವಲಯದ ಕಾರ್ಯಕ್ಷಮತೆಯ ಗುಣಮಟ್ಟದ ಕುರಿತು ಸಿಎಜಿ ಸಮೀಕ್ಷೆ ನಡೆಸಿದ್ದು, ಏಕೀಕೃತ ಮಾರುಕಟ್ಟೆಯ ವಾಸ್ತವ ಸ್ಥಿತಿಯನ್ನು ಬಯಲು ಮಾಡಿದೆ.  ಯುಎಂಪಿಯನ್ನು ಪ್ರಮುಖ 160 ಮಂಡಿಗಳಲ್ಲಿ ಜಾರಿಗೊಳಿಸಲಾಗಿದ್ದರೂ, 352 ಕಿರು ಮಂಡಿಗಳನ್ನು ಕೈಬಿಡಲಾಗಿದೆ ಎಂದು ಬೊಟ್ಟು ಮಾಡಿದೆ. ಅಲ್ಲದೆ ನಿಗದಿ ಪಡಿಸಿದ ಸರಕುಗಳನ್ನು ಯುಎಂಪಿ ಮೂಲಕ ಮಾರಾಟ ಮಾಡದೇ ಒಂದೆರಡು ಸರಕುಗಳಿಗೆ ಮಾತ್ರ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ವರದಿ ಹೇಳಿದೆ.

ನಿಬಂಧನೆ ಉಲ್ಲಂಘನೆ
ಯುಎಂಪಿ ಮಾರುಕಟ್ಟೆಯಲ್ಲಿ  ಕೃಷಿ ಉತ್ಪನ್ನಗಳಿಗೆ ನಿರ್ದಿಷ್ಟ  ಬೆಲೆ ದೊರೆಯುತ್ತಿಲ್ಲ  ಎಂಬ ಅಂಶವನ್ನು ವರಿದಿ ಕಂಡುಕೊಂಡಿದ್ದು, ಮಾರುಕಟ್ಟೆ  ರೈತರ ಬೆಲೆಗಳಿಗೆ ನಿರ್ದಿಷ್ಟ ಬೆಲೆಯನ್ನು ಒದಗಿಸಿಕೊಡುವುದರಲ್ಲಿ  ವಿಫ‌ಲವಾಗಿದೆ. 2017-18ರಲ್ಲಿ  ಪ್ರಮುಖ 8 ಸರಕುಗಳಿಗಿದ್ದ ದರ ಎಂಎಸ್‌ಪಿ ಬೆಲೆಗಿಂತ ಕಡಿಮೆ ಇದೆ ಎಂದು ಸಿಎಜಿ ವರದಿ ತಿಳಿಸಿದೆ. ಇದಲ್ಲದೆ, ಒಪ್ಪಂದದ ನಿಬಂಧನೆಗಳನ್ನು ಉಲ್ಲಂಘಿಸಿ 2014-18ರಲ್ಲಿ  ಶೇ.3.95 ಕೋಟಿ ವಹಿವಾಟು ಶುಲ್ಕವನ್ನು ಆರ್‌ಇಎಂಎಸ್‌ ಪಾವತಿಸಲಾಗಿದೆ ಎಂದು ಸಿಎಜಿ ವರದಿ ಹೇಳಿದೆ.

ಉದ್ದೇಶಗಳು ಸಾಕಾರಗೊಂಡಿಲ್ಲ
ಕೃಷಿ ಮಂಡಿಗಳಲ್ಲಿ ನಡೆಯುತ್ತಿದ್ದ ಏಕಸ್ವಾಮ್ಯ ಪದ್ಧತಿಯನ್ನು ಕೊನೆಗೊಳಿಸುವುದು ಕೃಷಿ ಮಾರುಕಟ್ಟೆ ಸುಧಾರಣೆಗಳ ಪ್ರಮುಖ ಉದ್ದೇಶವಾಗಿದ್ದು, ಅದನ್ನು ಕಾರ್ಯರೂಪಕ್ಕೆ ತರುವಲ್ಲಿ  ವಿಫ‌ಲವಾಗಿದೆ ಎಂಬ ಅಂಶವನ್ನು ಸಿಎಜಿ ಗಮನಿಸಿದೆ. ಸುಧಾರಣೆಯ ಪ್ರಮುಖ ಉದ್ದೇಶವನ್ನು ಅನುಸರಿಸದೇ ಖಾಸಗಿ ಮಾರುಕಟ್ಟೆ  ಮಾರಾಟಗಾರರಿಗೆ ಪರವಾನಗಿ ನೀಡಿದ್ದು, ಗೋದಾಮಿನ ಆಧಾರಿತ ಮಾರಾಟದ ಪರಿಕಲ್ಪನೆಯು ಸಹ ಅಪೇಕ್ಷಿತ ಫ‌ಲಿತಾಂಶವನ್ನು ನೀಡಿಲ್ಲ  ಎಂಬ ಮಾಹಿತಿಯನ್ನು ವರದಿ ಹಂಚಿಕೊಂಡಿದೆ.

ಟಾಪ್ ನ್ಯೂಸ್

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.