ಪವಿತ್ರ ಮತ್ತು ಸುಭದ್ರ ಸರ್ಕಾರಕ್ಕೆ ಅಭಿನಂದನೆಗಳು; ಉಪಚುನಾವಣೆ ಫಲಿತಾಂಶಕ್ಕೆ HDK ಟ್ವೀಟ್
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸೋಮವಾರ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ
Team Udayavani, Dec 9, 2019, 4:30 PM IST
ಬೆಂಗಳೂರು: ಉಪಚುನಾವಣೆ ನಡೆದ ಹದಿನೈದು ಕ್ಷೇತ್ರಗಳ ಫಲಿತಾಂಶ ಹೊರಬಿದ್ದ ನಂತರ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸೋಮವಾರ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
ಇದೊಂದು “ಅಸಹ್ಯ” ಸರ್ಕಾರ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಮೂದಲಿಸಿದ್ದ ಮಾತಿಗೆ ಸಹಮತ ವ್ಯಕ್ತಪಡಿಸುವಂತೆ ರಾಜ್ಯದ 15 ಕ್ಷೇತ್ರಗಳ ಪ್ರಜ್ಞಾವಂತ ಮತದಾರರು “ಪವಿತ್ರ” ಮತ್ತು “ಸುಭದ್ರ” ಸರ್ಕಾರಕ್ಕೆ ಮುದ್ರೆ ಒತ್ತಿರುವುದಕ್ಕೆ ಮನದಾಳದ ಅಭಿನಂದನೆಗಳು ಎಂದು ಟ್ವೀಟ್ ಮೂಲಕ ಪರೋಕ್ಷವಾಗಿ ಟೀಕಿಸಿದ್ದಾರೆ.
ಡಿಸೆಂಬರ್ 4ರಂದು ಕುಮಾರಸ್ವಾಮಿ ಮಾಡಿರುವ ಟ್ವೀಟ್ ನಲ್ಲಿ ನನ್ನ ನೇತೃತ್ವದಲ್ಲಿ ಮೈತ್ರಿ ಸರ್ಕಾರ ರಚನೆಯಾದ ಕೂಡಲೇ ಅತೃಪ್ತಗೊಂಡಿದ್ದ ಬಿಜೆಪಿ, ಅಧಿಕಾರದ ಹುಚ್ಚುಹಿಡಿಸಿಕೊಂಡು ಕೂಗುಮಾರಿಯಂತಾಗಿತ್ತು. ನಾನು ಮಾಡದ ತಪ್ಪುಗಳಿಗೆ ನನ್ನನ್ನು ಬಿಗಿಯುತ್ತಾ, ಆಡಳಿತ ಮಾಡಲು ಬಿಡದ ಬಿಜೆಪಿ ಅನರ್ಹರ ಅಕ್ರಮ ಸಂಬಂಧದೊಂದಿಗೆ ಅನೈತಿಕ ಸರ್ಕಾರ ರಚಿಸಿ ಈಗ ರಾಜ್ಯವನ್ನು ಅನಾಹುತದ ಹಾದಿಯಲ್ಲಿ ಕರೆದೊಯ್ಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ಇದೊಂದು “ಅಸಹ್ಯ” ಸರ್ಕಾರ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಮೂದಲಿಸಿದ್ದ ಮಾತಿಗೆ ಸಹಮತ ವ್ಯಕ್ತಪಡಿಸುವಂತೆ ರಾಜ್ಯದ 15 ಕ್ಷೇತ್ರಗಳ ಪ್ರಜ್ಞಾವಂತ ಮತದಾರರು ‘ಪವಿತ್ರ’ ಮತ್ತು ‘ಸುಭದ್ರ’ ಸರ್ಕಾರಕ್ಕೆ ಮುದ್ರೆ ಒತ್ತಿರುವುದಕ್ಕೆ ಮನದಾಳದ ಅಭಿನಂದನೆಗಳು.
— H D Kumaraswamy (@hd_kumaraswamy) December 9, 2019
ಹದಿನೈದು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದಲ್ಲಿ 12 ಬಿಜೆಪಿ, ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ ಹಾಗೂ ಪಕ್ಷೇತರರು ಒಂದು ಕ್ಷೇತ್ರದಲ್ಲಿ ಜಯ ಸಾಧಿಸಿದ್ದು, ಜೆಡಿಎಸ್ ಮೂರು ಸ್ಥಾನಗಳನ್ನು ಕಳೆದುಕೊಂಡು ತೀವ್ರ ಮುಖಭಂಗ ಅನುಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್