ಯುವತಿಯಿಂದ ಹಣ ದೋಚಿದ ಸೈಬರ್ ವಂಚಕ!
Team Udayavani, Dec 6, 2019, 9:30 PM IST
ಬೆಂಗಳೂರು: ವೈವಾಹಿಕ ಜಾಲತಾಣದ ಮೂಲಕ ಯುವತಿಯೊಬ್ಬರನ್ನು ಪರಿಚಯಿಸಿಕೊಂಡ ವಂಚಕ ವಿದೇಶಿ ಉಡುಗೊರೆ ಕಳುಹಿಸುವ ನೆಪದಲ್ಲಿ 2.30 ಲ. ರೂ. ಪಡೆದು ವಂಚಿರುವ ಪ್ರಕರಣ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಖಾಸಗಿ ಕಂಪೆನಿ ಉದ್ಯೋಗಿ ಆಗಿರುವ ಸೋನಾಲಿ ಸುಲ್ತಾನ ಚೌಧರಿ ಎಂಬವರು ನೀಡಿರುವ ದೂರಿನ ಅನ್ವಯ ಮನೋಜ್ ಗುಪ್ತಾ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ವೈವಾಹಿಕ ಜಾಲತಾಣದ ಮೂಲಕ ಪರಿಚಯವಾಗಿದ್ದ ಮನೋಜ್ ಗುಪ್ತಾ ಹೆಸರಿನ ವ್ಯಕ್ತಿ ತಾನು ಲಂಡನ್ನಲ್ಲಿ ಕೆಲಸ ಮಾಡುತ್ತಿರುವುದಾಗಿ ಸೋನಾಲಿ ಅವರಿಗೆ ಹೇಳಿದ್ದ. ಹೀಗೆ ಆತ್ಮೀಯರಾದ ಬಳಿಕ ನ.25ರಂದು ಲಂಡನ್ನಿಂದ ವಿದೇಶಿ ಉಡುಗೊರೆ ಕಳುಹಿಸುತ್ತಿರುವುದಾಗಿ ಹೇಳಿದ್ದ. ಉಡುಗೊರೆ ಪಡೆಯಲು ಸುಂಕ ದರ 34.500 ರೂ. ಮತ್ತು ವಿಮಾ ಪಾಲಿಸಿ ದರ 95 ಸಾವಿರ ರೂ. ಅಕೌಂಟ್ಗೆ ಕಳುಹಿಸುವಂತೆ ಹೇಳಿದ್ದು ಇದನ್ನು ನಂಬಿದ್ದ ಸೋನಾಲಿ ಆತ ಸೂಚಿಸಿದ ಬ್ಯಾಂಕ್ ಖಾತೆಗಳಿಗೆ ಹಣ ಕಳುಹಿಸಿಕೊಟ್ಟರೂ ಉಡುಗೊರೆ ಮಾತ್ರ ಬಂದಿರಲಿಲ್ಲ.
ಇದಾದ ಐದು ದಿನಗಳ ಬಳಿಕ ನ.30ರಂದು ಉಡುಗೊರೆ ತೆಗೆದುಕೊಂಡು ಮುಂಬಯಿ ವಿಮಾನ ನಿಲ್ದಾಣಕ್ಕೆ ಬಂದಿದು, “ಹಳದಿ ಜ್ವರ ಮುಕ್ತ’ ವ್ಯಕ್ತಿಯೆಂಬುದಕ್ಕೆ ಪ್ರಮಾಣಪತ್ರ ಪಡೆಯಲು 28,500 ಪಾವತಿಸಬೇಕು. ಹೀಗಾಗಿ ಹಣ ಕಳುಹಿಸುವಂತೆ ಕೋರಿದ್ದಾನೆ. ಆಗಲೂ ಸೋನಾಲಿ ಹಣ ಕಳುಹಿಸಿದ್ದಾರೆ. ಬಳಿಕ ತನ್ನ ಬಳಿಯಿರುವ 21 ಸಾವಿರ ಅಮೆರಿಕನ್ ಡಾಲರ್ ರೂಪಾಯಿಗೆ ಬದಲಾಯಿಸಿಕೊಳ್ಳಬೇಕು ಎಂದು ಹೇಳಿ 72,900 ರೂ. ಹಣ ಪಡೆದುಕೊಂಡಿದ್ದಾನೆ.ಇದಾದ ಕೆಲವೇ ಸಮಯಕ್ಕೆ ಮೊಬೈಲ್ ಸ್ವಿಚ್ಆಫ್ ಮಾಡಿಕೊಂಡಿದ್ದು ಬಳಿಕ ಸೋನಾಲಿ ಅವರ ಸಂಪರ್ಕಕ್ಕೆ ಸಿಕ್ಕಿಲ್ಲ.
ಕಡೆಗೆ ತಾನು ಮೋಸಹೋಗಿರುವುದು ಗೊತ್ತಾಗಿ ದೂರು ನೀಡಿದ್ದಾರೆ. ಆರೋಪಿ ವಿರುದ್ಧ ಮಾಹಿತಿ ತಂತ್ರಜ್ಞಾನ ಮತ್ತು ವಂಚನೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ