ಕೋವಿಡ್-19 ವಿಚಾರದಲ್ಲಿ ನಾವು ರಾಜಕೀಯ ಮಾಡುವುದಿಲ್ಲ; ಆದರೆ ಸಚಿವರ ನಡುವೆಯೇ ಸಮನ್ವಯವಿಲ್ಲ

ಸರ್ವಪಕ್ಷ ನಾಯಕರ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

Team Udayavani, Mar 29, 2020, 2:10 PM IST

ಸರ್ವಪಕ್ಷ ನಾಯಕರ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬೆಂಗಳೂರು: ಬಹಳ ತಡವಾಗಿ ಆದರೂ ಸಿಎಂ ಯಡಿಯೂರಪ್ಪನವರು ಸರ್ವಪಕ್ಷ ಸಭೆ ಕರೆದಿರುವುದು ಅಭಿನಂದನಾರ್ಹ. ಕೋವಿಡ್-19 ವಿಚಾರದಲ್ಲಿ ನಾವು ರಾಜಕೀಯ ಮಾಡಲು ಹೋಗುವುದಿಲ್ಲ. ರಾಜಕೀಯ ಬೇರೆ, ಈ ನಾಡಿನ ಸಮಸ್ಯೆಯೇ ಬೇರೆ. ಒಂದಕ್ಕೊಂದು ಬೆರೆಸಲು ಹೋಗುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪನವರು ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ ಮಾತನಾಡಿದ ಅವರು ಕೋವಿಡ್-19 ಪರಿಸ್ಥಿತಿ ನಿಯಂತ್ರಣ, ನಿರ್ವಹಣೆಗೆ ಸರಕಾರ ಕೈಗೊಳ್ಳುವ ಎಲ್ಲ ಸಕಾರಾತ್ಮಕ ಕ್ರಮಗಳಿಗೆ ನಮ್ಮ ಪಕ್ಷದ, ವೈಯಕ್ತಿಕವಾಗಿ ನನ್ನ ಬೆಂಬಲವಿದೆ ಎಂದರು.

ಕೋವಿಡ್-19 ನಿಯಂತ್ರಣ, ಪರಿಸ್ಥಿತಿ ನಿರ್ವಹಣೆಗೆ ಸರಕಾರದ ಕ್ರಮಗಳು ವಿಶ್ವ ಆರೋಗ್ಯ ಸಂಸ್ಥೆಯ ನಿಯಮಗಳಿಗೆ, ಮಾರ್ಗಸೂಚಿಗಳಿಗೆ ಅನುಗುಣವಾಗಿ ಇರಬೇಕೇ ಹೊರತು ಸರಕಾರದ ಪ್ರತಿನಿಧಿಗಳ, ಯಾವುದೋ ರಾಜಕೀಯ ಪಕ್ಷದ ತತ್ವ, ಸಿದ್ಧಾಂತ, ರಾಜಕೀಯ ಲಾಭಕ್ಕೆ ಬಳಕೆ ಆಗಬಾರದು. ಕೋವಿಡ್-19 ಸೋಂಕು ಇಡೀ ರಾಜ್ಯದ, ದೇಶದ, ವಿಶ್ವದ ಸಮಸ್ಯೆ. ಬರೀ ಆಡಳಿತರೂಢ ಸರಕಾರದ, ಪಕ್ಷದ ಸಮಸ್ಯೆ ಅಲ್ಲ. ಇದು ಎಲ್ಲರ ಸಮಸ್ಯೆ. ಎಲ್ಲರೂ ಒಗ್ಗೂಡಿ ಹೋರಾಡಬೇಕು. ಈ ವಿಚಾರದಲ್ಲಿ ಒಬ್ಬರು ಹೆಚ್ಚು, ಒಬ್ಬರು ಕಡಿಮೆ ಎಂಬುದಿಲ್ಲ ಎಂದರು.

ಮುಂದುವರಿದು ಮಾತನಾಡಿದ ಅವರು ಆತಂಕಕಾರಿ ವಿಚಾರವೆಂದರೆ ಈ ಪಿಡುಗು ನಿವಾರಣೆ ವಿಚಾರದಲ್ಲಿ ಡಿಸಿಎಂಗಳು, ಸಚಿವರ ನಡುವೆ ಸಮನ್ವಯ ಇಲ್ಲ. ಒಬ್ಬೊಬ್ಬರು ಒಂದೊಂದು ಹೇಳಿಕೆ ಕೊಟ್ಟು ಜನರಲ್ಲಿ ಗೊಂದಲ, ಭಯ ಮೂಡಿಸುತ್ತಿದ್ದಾರೆ. ನಾನು ಅವರ ಹೆಸರು ಹೇಳಲು ಹೋಗುವುದಿಲ್ವ. ಆದರೆ ಅವರಲ್ಲಿ ಸಮನ್ವಯ ತರುವ ಜವಾಬ್ದಾರಿ ಸಿಎಂ ಆಗಿ ನಿಮ್ಮದು. ಇಲ್ಲದಿದ್ದರೆ ಜನ ಮತ್ತಷ್ಟು ಹೆದರಿ ಹೋಗುತ್ತಾರೆ ಎಂದರು.

ಸಾಮಾನ್ಯ ಜನರು, ಕೋವಿಡ್-19 ಸೋಂಕು ನಿವಾರಣೆಗೆ ಹೋರಾಡುತ್ತಿರುವ ವೈದ್ಯಕೀಯ, ಅರೆ ವೈದ್ಯಕೀಯ ಸಿಬ್ಬಂದಿ, ಪೊಲೀಸರು, ಪೌರಕಾರ್ಮಿಕರು ಯಾರಿಗೂ ಮಾಸ್ಕ್ ಸಿಗುತ್ತಿಲ್ಲ. ಇದನ್ನು ಉಚಿತವಾಗಿ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ರಕ್ಷಕರಿಗೇ ಸುರಕ್ಷೆ ಇಲ್ಲದಿದ್ದರೆ ಹೇಗೆ ಎಂದು ಸರಕಾರವನ್ನು ಪ್ರಶ್ನಿಸಿದರು.

ದಿನನಿತ್ಯದ ವಸ್ತುಗಳು, ಆಹಾರ ಸಿಗದೆ ಜನ ಕಂಗಾಲಾಗಿದ್ದಾರೆ. ಇಲ್ಲಿ ಇರಲೂ ಆಗದೆ, ತಮ್ಮೂರಿಗೆ ಹೋಗಲು ಆಗದೆ ಪರಿತಪಿಸುತ್ತಿದ್ದಾರೆ. ಇದಕ್ಕೊಂದು ಸ್ಪಷ್ಟ ಪರಿಹಾರ ಕಲ್ಪಿಸಬೇಕು. ರೈತರು ಬೆಳೆದ ಬೆಳೆಗಳು ವಿಲೇವಾರಿ ಆಗುತ್ತಿಲ್ಲ. ರೇಷ್ಮೆ ಗೂಡುಗಳು ಬಿಕರಿ ಆಗದೆ ರೇಷ್ಮೆ ಬೆಳೆಗಾರರು ಕಂಗಾಲಾಗಿದ್ದಾರೆ. ಅವರು, ಇವರು ಎನ್ನದೇ ಎಲ್ಲ ವರ್ಗದವರ ಸಂಕಷ್ಟಕ್ಕೆ ಪರಿಹಾರ ಸೂತ್ರಗಳನ್ನು ರೂಪಿಸಬೇಕು ಎಂಬ ಸಲಹೆಗಳನ್ನು ಡಿಕೆಶಿ ನೀಡಿದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.