ಡಿಕೆಶಿ ನನ್ನ ಬಳಿ ಬ್ಯಾಂಕ್ ಅಕೌಂಟ್ ತಪ್ಪುಗಳ ಬಗ್ಗೆ ಹೇಳಿದ್ದರು: ಪರಮೇಶ್ವರ್
Team Udayavani, Sep 19, 2019, 1:28 PM IST
ಬೆಂಗಳೂರು: ನಾನು ಡಿ ಕೆ ಶಿವಕುಮಾರ್ ಅವರನ್ನು ದೆಹಲಿಯ ಆಸ್ಪತ್ರೆಯಲ್ಲಿ ಭೆಟಿ ಮಾಡಿದ್ದೆ. ಇ.ಡಿಯವರು ವಿಚಾರಣೆ ನಡೆಸುತ್ತಿದ್ದಾರೆ. ನಾನು ಯಾವ ತಪ್ಪೂ ಮಾಡಿಲ್ಲ. ಅಕೌಂಟ್ ಮಾಡುವಾಗ ಕೆಲವು ತಪ್ಪಾಗಿದೆ. ಇದರ ಬಗ್ಗೆ ಕಾನೂನು ಹೋರಾಟ ಮಾಡುತ್ತೇನೆ. ಕಾನೂನಿನಡಿ ಹೊರ ಬರುತ್ತೇನೆ ಎಂದು ಡಿಕೆಶಿ ಅವರು ನನ್ನ ಬಳಿ ಹೇಳಿದ್ದರು ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.
ಸದಾಶಿವನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಪರಮೇಶ್ವರ್ , ದೆಹಲಿಗೆ ಹೋದ ಮೇಲೆ ಹೈಕಮಾಂಡ್ ಭೇಟಿಯಾಗುವುದು ಸಹಜ. ಹೀಗಾಗಿ ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿದ್ದೆ. ರಾಜ್ಯ ರಾಜಕಾರಣದ ಬಗ್ಗೆ ಚರ್ಚೆಯಾಯ್ತು. ಸೋನಿಯಾ ಗಾಂಧಿಯವರ ಜೊತೆ ಚರ್ಚೆ ನಡೆಯಿತು. ಡಿಕೆಶಿ ಬಗ್ಗೆ ಸೋನಿಯಾ ಕೂಡ ನೋವು ಹೊರಹಾಕಿದ್ದರು. ನಾವು ಅವರ ಬೆಂಬಲಕ್ಕೆ ಇರಬೇಕು ಅಂತ ಹೇಳಿದ್ದರು ಎಂದರು.
ಸಿದ್ದರಾಮಯ್ಯ ಮತ್ತು ಪರಮೇಶ್ವರ್ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಮಾತುಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಮತ್ತು ನನ್ನ ನಡುವೆ ಶತ್ರುತ್ವವಿಲ್ಲ. ನಾವಿಬ್ಬರೂ ಚೆನ್ನಾಗಿದ್ದರೆ ಕಾಂಗ್ರೆಸ್ ಬಲಿಷ್ಠವಾಗುತ್ತದೆ. ಹೀಗಾಗಿ ಕೆಲವೊಂದು ಷಡ್ಯಂತ್ರ ನಡೆದಿದೆ ಎಂದರು.
ನಾನು ಎಂಟು ವರ್ಷ ಅಧ್ಯಕ್ಷನಾಗಿದ್ದೆ. ಆಗಿನಿಂದಲೂ ಅವರ ಜೊತೆ ಕೆಲಸ ಮಾಡಿದ್ದೇನೆ. ಅವರ ಸಂಪುಟದಲ್ಲಿಯೂ ಕೆಲಸ ಮಾಡಿದ್ದೇವೆ. ಕೆಲವೊಂದು ಅಭಿಪ್ರಾಯ ಬೇರೆ ಬೇರೆ ಇರಬಹುದು. ನನ್ನ ಕೆಲವು ಅಭಿಪ್ರಾಯ ಅವರು ಕೇಳದಿರಬಹುದು . ಅವರ ಕೆಲವು ಅಭಿಪ್ರಾಯ ನಾನು ಕೇಳದಿರಬಹುದು. ಆದರೆ ಇಬ್ಬರೂ ಎಲ್ಲೂ ಭಿನ್ನವಾಗಿಲ್ಲ. ನಮ್ಮ ನಡುವೆ ಯಾವುದೇ ಭಿನ್ನಾಬಿಪ್ರಾಯವಿಲ್ಲ ಎಂದರು.
ಮೂಲ ಕಾಂಗ್ರೆಸಿಗ ಮತ್ತು ವಲಸೆ ಕಾಂಗ್ರೆಸಿಗರೆಂಬ ಬೇಧವಿಲ್ಲ. ಹಾಗಿದ್ದರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುತ್ತಿರಲಿಲ್ಲ. ಅವರು ಪ್ರತಿಪಕ್ಷ ನಾಯಕರೂ ಆಗುತ್ತಿರಲಿಲ್ಲ. ಮೂಲ ಕಾಂಗ್ರೆಸ್ಸಿಗರು ಹೋರಾಟವನ್ನೇ ಮಾಡುತ್ತಿದ್ದರು. ಅದರೆ ಅಂತಹ ಭಿನ್ನಾಬಿಪ್ರಾಯವಿಲ್ಲ ನಾವೆಲ್ಲ ಒಟ್ಟಿಗೆ ಸೇರಿ ಪಕ್ಷ ಕಟ್ಟಬೇಕು. ಎಲ್ಲರೂ ಸೇರಿಯೇ ಮತ್ತೆ ಅಧಿಕಾರಕ್ಕೆ ಬರಬೇಕು. ಸಾಮೂಹಿಕ ನಾಯಕತ್ವದಿಂದ ಮಾತ್ರ ಎಲ್ಲವೂ ಸಾಧ್ಯ. ಇದನ್ನೇ ಸೋನಿಯಾ ಗಾಂಧಿ ಬಳಿ ಕೂಡ ಚರ್ಚಿಸಿದ್ದೇನೆ ಮಾಜಿ ಮುಖ್ಯಮಂತ್ರಿ ಪರಮೇಶ್ವರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!