ರಾಶಿ, ರಾಶಿ ದಾಖಲೆ ಸಲ್ಲಿಕೆ-ಡಿಕೆಶಿ ಜಾಮೀನು ಅರ್ಜಿ ವಿಚಾರಣೆ ಶನಿವಾರಕ್ಕೆ ಮುಂದೂಡಿಕೆ


Team Udayavani, Sep 19, 2019, 5:16 PM IST

DK-Shivkumar

ನವದೆಹಲಿ: ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ರೋಸ್ ಅವೆನ್ಯೂ ವಿಶೇಷ ಕೋರ್ಟ್ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಜಾಮೀನು ಅರ್ಜಿಯ ವಿಚಾರಣೆಯಲ್ಲಿ ವಾದ, ಪ್ರತಿವಾದ ಆಲಿಸಿದ ಬಳಿಕ ಜಾಮೀನು ಅರ್ಜಿ ವಿಚಾರಣೆಯನ್ನು ಮತ್ತೆ ಶನಿವಾರಕ್ಕೆ ಮುಂದೂಡಿದೆ. ಇದರಿಂದಾಗಿ ಡಿಕೆ ಶಿವಕುಮಾರ್ ಗೆ ತಿಹಾರ್ ಜೈಲಿನಲ್ಲಿಯೇ ಕಾಲ ಕಳೆಯುವಂತಾಗಿದೆ.

ರಕ್ತದೊತ್ತಡ ಸಹಜ ಸ್ಥಿತಿಗೆ ಬಂದ ಕುರಿತು ಆರ್ ಎಂಎಲ್ ವೈದ್ಯರು ವರದಿ ನೀಡಿದ್ದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಪೊಲೀಸರು ಡಿಕೆ ಶಿವಕುಮಾರ್ ಅವರನ್ನು ತಿಹಾರ್ ಜೈಲಿಗೆ ಸ್ಥಳಾಂತರಿಸಿದ್ದರು.

ಬುಧವಾರ ಜಾರಿ ನಿರ್ದೇಶನಾಲಯದ ಪರ ವಕೀಲರಾದ ಕೆಎಂ ನಟರಾಜ್ ಅವರು ಗೈರು ಹಾಜರಾಗಿದ್ದರಿಂದ ಡಿಕೆಶಿ ಜಾಮೀನು ಅರ್ಜಿ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದ್ದರು.

ಬ್ರಹ್ಮಾಂಡ ಭ್ರಷ್ಟಾಚಾರದ ತುಣುಕು ಇದು; ಇ.ಡಿ. ಪರ ಎಎಸ್ ಜಿ ನಟರಾಜ್ ವಾದ:

ಬ್ರಹ್ಮಾಂಡ ಭ್ರಷ್ಟಾಚಾರದ ಒಂದು ತುಣುಕನ್ನು ನಿಮ್ಮ ಮುಂದಿಟ್ಟಿದ್ದೇನೆ. ಅಕ್ರಮದ ಎಲ್ಲಾ ದಾಖಲೆಗಳನ್ನು ನಿಮ್ಮ ಮುಂದಿಟ್ಟಿದ್ದೇವೆ. ಎಎಸ್ ಜಿ ನಟರಾಜ್ ವಾದ. ತನಿಖೆಯ ಎಲ್ಲಾ ಮಾಹಿತಿ ಬಹಿರಂಗಪಡಿಸಲು ಸಾಧ್ಯವಿಲ್ಲ. ಹವಾಲಾ ಹೇಗೆ ನಡೆದಿದೆ ಎಂಬ ಬಗ್ಗೆ ತನಿಖೆ ನಡೆಸ್ತಿದ್ದೇವೆ ಎಂದು ಇ.ಡಿ.ಪರ ಕೆಂಎ ನಟರಾಜ್ ವಾದಿಸಿದರು.

ಡಿಕೆಶಿಯ 4 ಬ್ಯಾಂಕ್ ಖಾತೆಗಳ ಬಗ್ಗೆ ಇನ್ನೂ ತನಿಖೆ ನಡೆಸಬೇಕಾಗಿದೆ. ಸಾಲ ಕೊಟ್ಟವರು ಯಾರು ಎಂಬುದೇ ಐಶ್ವರ್ಯಾಗೆ ತಿಳಿದಿಲ್ಲ. ಮಗಳ ಹೆಸರಿನಲ್ಲಿ ಡಿಕೆಶಿ 80 ಕೋಟಿ ರೂಪಾಯಿ ಆಸ್ತಿ ಸಂಪಾದನೆ ಮಾಡಿದ್ದಾರೆ. ಡಿಕೆಶಿ ಪಿಎಂಎಲ್ ಎ ಅಡಿ ಕ್ರಿಮಿನಲ್ ಚಟುವಟಿಕೆ ನಡೆಸುತ್ತಿದ್ದಾರೆ. ಅಕ್ರಮ ಹಣದಿಂದ ಗಳಿಸಿದ ಆಸ್ತಿ ಅಪರಾಧದ ಆಸ್ತಿ ಎಂದು ಪರಿಗಣಿಸಲ್ಪಡುತ್ತದೆ ಎಂದು ವಾದಿಸಿದರು.

ಕೃಷಿ ಭೂಮಿಯ ಆದಾಯ 1.38 ಕೋಟಿ ಎಂದು ಡಿಕೆಶಿ ಘೋಷಿಸಿದ್ದಾರೆ. ಕಳೆದ 20 ವರ್ಷಗಳಿಂದ ಕಟ್ಟಿದ ಆದಾಯ ಒಟ್ಟುಗೂಡಿಸಿದರೂ 870 ಕೋಟಿ ರೂಪಾಯಿ ಆಗುವುದಿಲ್ಲ. ಹೀಗಾಗಿ ಡಿಕೆ ಶಿವಕುಮಾರ್ ಜಾಮೀನು ಅರ್ಜಿಯನ್ನು ವಜಾಗೊಳಿಸಿಬೇಕು ಎಂದು ನಟರಾಜ್ ಮನವಿ ಮಾಡಿಕೊಂಡರು.

ಡಿಕೆಶಿ ಜಾಮೀನು ನಿರಾಕರಣೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ಹಲವು ತೀರ್ಪುಗಳನ್ನು ನಟರಾಜ್ ಉಲ್ಲೇಖಿಸಿದರು.

ದೆಹಲಿ ನಿವಾಸಗಳ ಮೇಲೆ ದಾಳಿ ವೇಳೆ ಸಿಕ್ಕ ಹಣ ಡಿಕೆಶಿಗೆ ಸೇರಿದ್ದು, ನಗದು ಹಣ ಬಳಕೆ ಮತ್ತು ಹಲವು ಆಸ್ತಿ ಖರೀದಿ ಪಿಎಂಎಲ್ ಎ ಕಾಯ್ದೆಯಡಿ ಬರುತ್ತೆ. ಐಟಿ ತನಿಖೆ ವೇಳೆಯೂ ಇದು ತಿಳಿದು ಬಂದಿದೆ. ಈ ವಾದ ಮಂಡನೆ ವೇಳೆ ಜಾಮೀನು ನಿರಾಕರಿಸಿರುವ ಪಿ.ಚಿದಂಬರಂ ಪ್ರಕರಣವನ್ನೂ ನಟರಾಜ್ ಉಲ್ಲೇಖಿಸಿದರು.

ಬಂಡಲ್ ಗಟ್ಟಲೆ ದಾಖಲೆ ಸಲ್ಲಿಕೆ;

ಡಿಕೆ ಶಿವಕುಮಾರ್ ನೋಟು ಬ್ಯಾನ್ ಸಂದರ್ಭದಲ್ಲಿ ಹಣ ವರ್ಗಾವಣೆ ಮಾಡಿದ್ದಾರೆ ಎಂದು ವಿವರಿಸಿದ ನಟರಾಜ್ ಕೋರ್ಟ್ ಗೆ ಬಂಡಲ್ ಗಟ್ಟಲೆ ದಾಖಲೆಯನ್ನು ಸಲ್ಲಿಸಿದರು. ಅಗತ್ಯಬಿದ್ದರೆ ದಾಖಲೆಗಳನ್ನು ಪರಿಶೀಲಿಸಿ ಎಂದು ಕೋರ್ಟ್ ಗೆ ಮನವಿ ಮಾಡಿಕೊಂಡರು. ಐಟಿ ಕಾಯ್ದೆ ಉಲ್ಲಂಘಿಸಿ ಜಾಮೀನು ಕೊಡಿ ಎಂದು ಹೇಳುತ್ತಾರೆ. ಆದರೆ ಡಿಕೆಶಿ ವಕೀಲರ ವಾದಕ್ಕೂ ಪಿಎಂಎಲ್ ಎ ಸೆಕ್ಷನ್ 45ಕ್ಕೂ ಸಂಬಂಧವಿಲ್ಲ ಎಂದು ನಟರಾಜ್ ಪ್ರಬಲವಾಗಿ ವಾದ ಮಂಡಿಸಿದ್ದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.