ಗೋವಾ ಇಫಿ ಚಿತ್ರೋತ್ಸವ; ಎನ್‌ಎಫ್‌ಡಿಸಿ ಯ ಫಿಲ್ಮ್‌ ಬಜಾರ್‌ಗೆ ಚಾಲನೆ


Team Udayavani, Nov 21, 2019, 2:00 PM IST

film-bazaar-blog-1

ಪಣಜಿ(ಉದಯವಾಣಿ ಪ್ರತಿನಿಧಿಯಿಂದ): ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವದ ಸುವರ್ಣ ಸಂಭ್ರಮದ ಜತೆಗೇ ರಾಷ್ಟ್ರೀಯ ಚಲನಚಿತ್ರ ಅಭಿವೃದ್ಧಿ ನಿಗಮ [ಎನ್‌ಎಫ್‌ಡಿಸಿ] ಹಮ್ಮಿಕೊಂಡಿರುವ 13 ನೇ ವರ್ಷದ ಚಲನಚಿತ್ರಸಂತೆ [ಫಿಲ್ಮ್‌ ಬಜಾರ್‌] ಬುಧವಾರ ಉದ್ಘಾಟನೆಗೊಂಡಿತು.

ಏಷ್ಯಾದ ಅತಿದೊಡ್ಡ ಚಲನಚಿತ್ರ ಸಂತೆಯಾದ ಫಿಲ್ಮ್‌ ಬಜಾರ್‌ ಪ್ರತಿ ವರ್ಷ ಇಫಿ ಚಿತ್ರೋತ್ಸವದೊಂದಿಗೆ ನಡೆಯುತ್ತದೆ. ಇದನ್ನು ಎನ್‌ಎಫ್‌ಡಿಸಿ ಸಂಘಟಿಸುತ್ತಿದೆ. ಈ ಬಾರಿ ಉತ್ಸವಕ್ಕೆ ಹೊಸದಾಗಿ ಸೇರ್ಪಡೆಗೊಂಡಿರುವುದೆಂದರೆ ಕೌಶಲ ಕಾರ್ಯಾಗಾರ, ಚಿತ್ರ ನಿರ್ಮಾಪಕರ ಕಾರ್ಯಾಗಾರ.

ನ. 24 ವೆರೆಗೂ ನಡೆಯುವ ಚಲನಚಿತ್ರ ಸಂತೆಯಲ್ಲಿ ವಿಶಾಲ್‌ ಭಾರದ್ವಾಜ್‌, ಅದಿಲ್‌ ಹುಸೇನ್‌, ಸೌಂದರ್ಯ ರಜನೀಕಾಂತ್‌, ಪ್ರಸೂನ್‌ ಜೋಷಿ, ಸಿದ್ಧಾರ್ಥ ರಾಯ್‌ ಕಪೂರ್‌, ಮೇಘನಾ ಗುಲ್ಜಾರ್‌, ವಾಣಿ ತ್ರಿಪಾಠಿ ಟಿಕೂ ಮತ್ತಿತರರು ವಿವಿಧ ಕಾರ್ಯಾಗಾರ, ಉಪನ್ಯಾಸಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಸಹ ನಿರ್ಮಾಣ ಯೋಜನೆಯಲ್ಲಿ 14 ಸಿನಿಮಾಗಳು, ಪ್ರಗತಿಯಲ್ಲಿರುವ 5 ಸಿನಿಮಾಗಳು ಹಾಗೂ ಫಿಲ್ಮ್‌ ಬಜಾರ್‌ನ ಶಿಫಾರಸಿನ 26 ಸಿನಿಮಾಗಳ ಬಗೆಗೂ ಚರ್ಚೆ ನಡೆಯಲಿದೆ. 30 ಕ್ಕೂ ಹೆಚ್ಚು ಭಾಷೆಗಳ 213 ಚಲನಚಿತ್ರಗಳು ವ್ಯೂವಿಂಗ್‌ ರೂಮ್‌ನಲ್ಲಿ ನೋಡಲು ವ್ಯವಸ್ಥೆ ಕಲ್ಪಿಸಲಾಗಿದೆ. ಕನ್ನಡದ ಆರು ಚಿತ್ರಗಳು ಇದರಲ್ಲಿ ಸೇರಿವೆ. ಇದರೊಂದಿಗೆ ಗೋಂಡಿ, ಬೋಡೊ, ಗೋಜ್ರಿ ಹಾಗೂ ಗಾಲೋ ಭಾಷೆಯ ಚಿತ್ರಗಳು ಸೇರಿರುವುದು ವಿಶೇಷ.

ಈ ಪೈಕಿ 154 ಕಥಾ ಚಿತ್ರಗಳಾಗಿದ್ದು, 59 ಕಿರುಚಿತ್ರಗಳು. 89 ಮಂದಿಯ ಚೊಚ್ಚಲ ಚಿತ್ರಗಳು ಈ ಪಟ್ಟಿಯಲ್ಲಿವೆ.

ಕೌಶಲ ಕಾರ್ಯಾಗಾರದ ಮೂಲಕ ಯುವ ಸಿನಿಮಾ ನಿರ್ದೇಶಕರ ಸಬಲೀಕರಣದ ಬಗ್ಗೆ ಪ್ರಸೂನ್‌ ಜೋಷಿ, ಸಿದ್ಧಾರ್ಥ ರಾಯ್‌ ಕಪೂರ್‌ ಮಾತನಾಡಿದರೆ, ವಾಣಿ ತ್ರಿಪಾಠಿ ಟಿಕೂ ಬಾಹುಬಲಿ ಚಿತ್ರದ ನಿರ್ಮಾಪಕಿ ಶೋಬು ಯರ್ಲಗಡ್ಡ ಅವರೊಂದಿಗೆ ಸಂವಾದ ನಡೆಸುವರು. ಸೌಂದರ್ಯ ರಜನೀಕಾಂತ್‌ ಮತ್ತು ನಂದಿತಾ ರಾಯ್‌ ಭಾರತೀಯ ಸಿನಿಮಾದಲ್ಲಿ ಬದಲಾಗುತ್ತಿರುವ ಮಹಿಳೆಯ ಪಾತ್ರ ಕುರಿತು ಮಾತನಾಡುವರು.

ಕೌಶಲ ಕಾರ್ಯಾಗಾರದಲ್ಲಿ ಅದಿಲ್‌ ಹುಸೇನ್‌. ಮೇಘನಾ ಗುಲ್ಜಾರ್‌, ಪುನೀತ್‌ ಕೃಷ್ಣ, ರಾಜೀ ವ್‌ ಕೃಷ್ಣ ಮೆನನ್‌, ಸುಭಾಷ್‌ ಘಾಯ್‌ ಮತ್ತಿತರರು ಪಾಲ್ಗೊಳ್ಳುವರು.

ಪ್ರಗತಿಯಲ್ಲಿರುವ ಚಿತ್ರಗಳ ವಿಭಾಗದಲ್ಲಿ ನಿರ್ಮಾಣದ ಹಂತದಲ್ಲಿರುವ ಚಿತ್ರಗಳನ್ನು ನಿರ್ದೇಶಕರು ಆಸಕ್ತ ನಿರ್ಮಾಪಕರಿಗೆ ಪ್ರದರ್ಶಿಸಲೂ ಅವಕಾಶವಿದೆ. ಈ ಬಾರಿಯ ಚಿತ್ರ ನಿರ್ಮಾಪಕರ ಕಾರ್ಯಾಗಾರಕ್ಕೆ ಅಮೆರಿಕ, ಶ್ರೀಲಂಕಾ, ಬಾಂಗ್ಲಾದೇಶ್‌, ತೈವಾನ್‌ ಮತ್ತು ಭಾರತದ ೨೦ ಯೋಜನೆಗಳು ಆಯ್ಕೆಯಾಗಿವೆ. ಇದರೊಂದಿಗೆ ಸಹ ನಿರ್ಮಾಣ ಯೋಜನೆಯಡಿಯೂ ಭಾರತ, ಭೂತಾನ್‌. ಬಾಂಗ್ಲಾದೇಶ, ಫ್ರಾನ್ಸ್‌, ನೇಪಾಳ್‌ ಸಿಂಗಾಪುರ ಸೇರಿದಂತೆ ೧೪ ಯೋಜನೆಗಳು ಆಯ್ಕೆಯಾಗಿದ್ದು, ಹಿಂದಿ, ಇಂಗ್ಲಿಷ್‌, ಮಲಯಾಲಂ, ಬಂಗಾಳಿ, ಅಸ್ಸಾಮಿ, ನೇಪಾಳಿ, ಗುಜರಾತಿ, ಭೂತಾನೀಸ್‌ ಭಾಷೆಯ ಪ್ರತಿಭಾವಂತ ನಿರ್ದೇಶಕರು ಇದರಲ್ಲಿ ಪಾಲ್ಗೊಳ್ಳಲು ಅವಕಾಶ ಪಡೆದಿದ್ದಾರೆ.

ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಪ್ರಕಾಶ್‌ ಜಾವಡೇಕರ್‌ ಈ ವರ್ಷದ ಉತ್ಸವಕ್ಕೆ ಚಾಲನೆ ನೀಡಿದರು. ಅವರೊಂದಿಗೆ ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌, ಕೇಂದ್ರ ಪರಿಸರ ರಾಜ್ಯ ಸಚಿವ ಬಬುಲ್‌ ಸುಪ್ರಿಯೊ, ಎನ್‌ಎಫ್ಡಿಸಿ ಯ ಎಂಡಿ ಟಿಸಿಎ ಕಲ್ಯಾಣಿ ಮತ್ತಿತರರು ಭಾಗವಹಿಸಿದ್ದರು.

ಕರ್ನಾಟಕ, ಲಕ್ಷದ್ವೀಪ್‌, ಮಧ್ಯಪ್ರದೇಶ, ಒರಿಸ್ಸಾ, ಉತ್ತರಾಖಂಡ್‌, ಉತ್ತರ ಪ್ರದೇಶ, ದಿಲ್ಲಿ, ರಾಜಸ್ಥಾನ ಮತ್ತಿತರ 12 ರಾಜ್ಯಗಳ ಇಲಾಖೆಗಳು ಈ ಸಂತೆಯಲ್ಲಿ ಭಾಗವಹಿಸಿವೆ. ಫಿಲ್ಮ್‌ ಬಜಾರ್‌ ಎನ್‌ಎಫ್‌ಡಿಸಿ ಸಂಘಟಿಸುತ್ತಿರುವ ವೇದಿಕೆ. ಚಿತ್ರ ನಿರ್ದೇಶಕರು, ನಿರ್ಮಾಪಕರು, ಚಿತ್ರ ಏಜೆಂಟರು, ವಿತರಕರು, ಚಿತ್ರೋತ್ಸವ ಸಂಘಟಕರ ವಿಚಾರ ವಿನಿಮಯಕ್ಕೆ ಕಲ್ಪಿಸಿರುವಂಥದ್ದು. ದಕ್ಷಿಣ ಏಷ್ಯಾ ಹಾಗೂ ವಿವಿಧ ದೇಶಗಳ ಸಿನಿಮಾ ನಿರ್ಮಾಪಕರು, ನಿರ್ದೇಶಕರು ಇದರಲ್ಲಿ ಪಾಲ್ಗೊಳ್ಳುವರು. ಕಳೆದ ವರ್ಷ 850 ಕ್ಕೂ ಹೆಚ್ಚು ಮಂದಿ ಪ್ರತಿನಿಧಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

9

ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ

12

ಮೀಟಿಂಗ್‌ ಮಾಡೋಕ್ಕೂ ರೇಟ್‌ ಫಿಕ್ಸ್‌: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕ ಚೋಪ್ರಾ ದಂಪತಿ

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.