ಪ್ರಮಾಣ ವಚನದಲ್ಲಿ ಹಸಿರು ಶಾಲು ಹೊದ್ದು ಹಲ್ಲು ಕಿರಿದರೆ ಸಾಲದು..: ಎಚ್ ಡಿಕೆ ಟಾಂಗ್
Team Udayavani, Jan 26, 2020, 3:01 PM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಟ್ವೀಟ್ ಸಮರವನ್ನು ಮುಂದುವರಿಸಿದ್ದು, ಸಾಲಮನ್ನಾ, ಸಬ್ಸಿಡಿ ವಿಚಾರದಲ್ಲಿ ಯಡಿಯೂರಪ್ಪನವರಿಗೆ ಇಂದು ಟಾಂಗ್ ನೀಡಿದ್ದಾರೆ.
ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿಯವರು, ಬಿಜೆಪಿಯನ್ನು ರೈತ ವಿರೋಧಿ ಎಂದಿದ್ದಾರೆ. ಪ್ರಮಾಣ ವಚನದಲ್ಲಿ ಹಸಿರು ಶಾಲು ಹೊದ್ದು ಹಲ್ಲು ಕಿರಿದರೆ ಸಾಲದು ಎಂದಿರುವ ಅವರು ಬಡವರ ಚಿನ್ನವನ್ನು ಹರಾಜಿನ ಮೂಲಕ ಕೇಂದ್ರ ಸರಕಾರ ಲಪಟಾಯಿಸಯತ್ತಿದೆ ಎಂದಿದ್ದಾರೆ.
ಕುಮಾರಸ್ವಾಮಿಯವರು ಮಾಡಿರುವ ಟ್ವೀಟ್ ಗಳು ಇಲ್ಲಿವೆ.
ನಾನು ಸಿಎಂ ಆಗಿದ್ದಾಗ ರೈತರ ಸಾಲಮನ್ನಾ ಬಗ್ಗೆ ಬಿಜೆಪಿ ಅನುದಿನವೂ ಕಿತಾಪತಿ ಮಾಡಿತು. ಸಾಲಮನ್ನಾ ಆಗಿಲ್ಲ ಎಂದು ಭಾಷಣವೀರ ಮೋದಿ ಕೂಡ ಹೇಳಿದ್ದರು. ಆದರೆ ಇಂದು ಕೇಂದ್ರ ಬಿಜೆಪಿ ಸರ್ಕಾರ ರೈತರ ಬೆಳೆ-ಒಡವೆ ಸಾಲದ ಬಡ್ಡಿ ಮೇಲಿನ ಸಬ್ಸಿಡಿಗೆ ಮಣ್ಣು ಹಾಕಿದೆ.
1/3— H D Kumaraswamy (@hd_kumaraswamy) January 26, 2020
ರೈತರ ಬೆಳೆ ಮತ್ತು ಒಡವೆ ಸಾಲಗಳ ಬಡ್ಡಿಗೆ ನೀಡಬೇಕಾದ ಸಬ್ಸಿಡಿಯನ್ನು ನಿಲ್ಲಿಸಿರುವ ಸರ್ಕಾರ ರೈತರನ್ನು ಲೇವಾದೇವಿದಾರರಿಗೆ ಶರಣಾಗುವಂತೆ ಮಾಡಿದೆ. ಇನ್ನೊಂದೆಡೆ ಬ್ಯಾಂಕ್ಗಳಲ್ಲಿರುವ ಬಡವರ ಚಿನ್ನವನ್ನು ಹರಾಜಿನ ಮೂಲಕ ಕೇಂದ್ರ ಸರ್ಕಾರ ಲಪಟಾಯಿಸುತ್ತಿದೆ.
2/3— H D Kumaraswamy (@hd_kumaraswamy) January 26, 2020
ಪ್ರಮಾಣ ವಚನದಲ್ಲಿ ಹಸಿರು ಶಾಲು ಹೊದ್ದು ಹಲ್ಲು ಕಿರಿದರೆ ಸಾಲದು, ಕಿಸಾನ್ ಸಮ್ಮಾನ್ ಎಂಬ ಹೆಸರಲ್ಲಿ ಪ್ರಧಾನಿ ಬೂಟಾಟಿಕೆ ಮಾಡಿದರೆ ಆಗದು. ಕೇಂದ್ರ ಸರ್ಕಾರ ಕೂಡಲೇ ರೈತರ ಬೆಳೆ-ಒಡವೆ ಸಾಲದ ಬಡ್ಡಿಯ ಮೇಲಿನ ಸಬ್ಸಿಡಿ ಬಿಡುಗಡೆ ಮಾಡಬೇಕು.ಇಲ್ಲವೇ ರಾಜ್ಯವೇ ಅದನ್ನು ಭರಿಸಬೇಕು. ಇಲ್ಲದಿದ್ದರೆ ಬಿಜೆಪಿ ರೈತ ವಿರೋಧಿ ಎಂಬುದನ್ನು ಒಪ್ಪಬೇಕು.
3/3— H D Kumaraswamy (@hd_kumaraswamy) January 26, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ