ಗೌಡರದ್ದು ನೀಚ ರಾಜಕಾರಣ, ಬಿಜೆಪಿ ಅಧಿಕಾರಕ್ಕೇರಲು ಅವಕಾಶ ಕೊಟ್ಟಿದ್ದೇ ಅಪ್ಪ-ಮಕ್ಕಳು; ಸಿದ್ದು
Team Udayavani, Aug 23, 2019, 12:54 PM IST
ಬೆಂಗಳೂರು: ಕಾಂಗ್ರೆಸ್, ಜೆಡಿಎಸ್ ಸರಕಾರ ಉಳಿಸಲು ಹಾಗೂ ಬಿಜೆಪಿ ಅಧಿಕಾರಕ್ಕೆ ಏರಲು ತಡೆಯಲು ನಾವು ಎಲ್ಲಾ ಪ್ರಯತ್ನ ಮಾಡಿದ್ದೇವೆ. ಆದರೆ ಸರಕಾರ ಉರುಳಿಸಲು ಅಪ್ಪ, ಮಕ್ಕಳೇ ಕಾರಣ. ಬಿಜೆಪಿ ಅಧಿಕಾರದ ಗದ್ದುಗೆ ಹಾದಿ ಸುಗಮಗೊಳಿಸಿಕೊಟ್ಟಿದ್ದೇ ದೇವೇಗೌಡರು ಮತ್ತು ಕುಮಾರಸ್ವಾಮಿ…ಹೀಗೆಂದು ನೇರವಾಗಿ ವಾಗ್ದಾಳಿ ನಡೆಸಿದ್ದು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ.
ಸಮ್ಮಿಶ್ರ ಸರಕಾರ ಪತನಕ್ಕೆ ಸಿದ್ದರಾಮಯ್ಯ ಕಾರಣ ಎಂಬ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಆರೋಪಕ್ಕೆ ಶುಕ್ರವಾರ ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟನೆ ನೀಡುವ ಮೂಲಕ ವಾಗ್ದಾಳಿ ನಡೆಸಿದರು.
೨೦೦೪ರಲ್ಲಿ ಜೆಡಿಎಸ್ ಪಕ್ಷ ಮುಖ್ಯಮಂತ್ರಿ ಸ್ಥಾನವನ್ನು ಒಪ್ಪಿಕೊಂಡರೆ ನನ್ನನ್ನು ಸಿಎಂ ಮಾಡಬೇಕಾಗುತ್ತೆ ಎಂಬ ಏಕೈಕ ಕಾರಣಕ್ಕೆ ದೇವೇಗೌಡರು ನಿರಾಕರಿಸಿದ್ದರು.
ಈಗ ಪಾಪ ಸೋನಿಯಾಗಾಂಧಿಯವರ ಕಡೆ ಬೊಟ್ಟು ಮಾಡ್ತಿದ್ದಾರೆ. ಅವರು ಆಗಲೂ ನನ್ನ ಪರವಾಗಿಯೇ ಇದ್ದರು. ಇದಕ್ಕೆ ಶರದ್ ಪವಾರ್ ಸಾಕ್ಷಿ.#MyPressconference pic.twitter.com/ApiGTjlrrr— Siddaramaiah (@siddaramaiah) August 23, 2019
ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದರೆ ಈ ಸರಕಾರ ಪತನವಾಗುತ್ತಿರಲಿಲ್ಲ. ಈಗ ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ಹೀಗೆ ಆರೋಪ ಮಾಡುವ ಮೂಲಕ ದೇವೇಗೌಡರು ಯಾರನ್ನು ಮೆಚ್ಚಿಸಲು ಹೊರಟಿದ್ದಾರೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ಅಧಿಕಾರಕ್ಕಾಗಿ ರಾತ್ರೋರಾತ್ರಿ ಬಿಜೆಪಿ ಜತೆ ಕೈಜೋಡಿಸಿದವರು ಯಾರು? 20;20 ತಿಂಗಳ ಅಧಿಕಾರದ ಹಂಚಿಕೆಯಲ್ಲಿ ದ್ರೋಹ ಎಸಗುವ ಮೂಲಕ ರಾಜ್ಯದಲ್ಲಿ ಮೊದಲ ಬಾರಿಗೆ ಬಿಜೆಪಿ ಅಧಿಕಾರಕ್ಕೇರಲು ಅವಕಾಶ ಮಾಡಿಕೊಟ್ಟವರೇ ದೇವೇಗೌಡರು ಮತ್ತು ಕುಮಾರಸ್ವಾಮಿ ಎಂದು ಆರೋಪಿಸಿದರು. ರಾಜಕೀಯದಲ್ಲಿ ತಮ್ಮ ಮಕ್ಕಳು, ತಮ್ಮ ಕುಟುಂಬ ಬಿಟ್ಟು ಬೇರೆ ಯಾರನ್ನೂ ಬೆಳೆಯಲು ದೇವೇಗೌಡರು ಬಿಟ್ಟಿಲ್ಲ ಎಂದರು.
ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳ ಸೋಲಿಗೆ ತಾತ-ಮೊಮ್ಮಕ್ಕಳು ಕೂಡಿ ಸ್ಪರ್ಧಿಸಿದ್ದು ಕಾರಣ. ದೇವೇಗೌಡರ ಕುಟುಂಬ ರಾಜಕಾರಣದ ಬಗ್ಗೆ ರಾಜ್ಯದ ಮತದಾರರು ಬೇಸತ್ತುಹೋಗಿದ್ದಾರೆ.#MyPressconference pic.twitter.com/LeITE6oXBN
— Siddaramaiah (@siddaramaiah) August 23, 2019
ನಾನು ಬಿಜೆಪಿಯನ್ನು ಮೊದಲಿನಿಂದಲೂ ವಿರೋಧಿಸಿಕೊಂಡು ಬಂದವನು. ಹೀಗಾಗಿಯೇ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರಕಾರ ರಚನೆಗೆ ಹೈಕಮಾಂಡ್ ಸೂಚನೆಯಂತೆ ಒಪ್ಪಿಗೆ ಸೂಚಿಸಿದ್ದೆ. ಅಲ್ಲದೇ 15 ತಿಂಗಳ ಕಾಲ ಕುಮಾರಸ್ವಾಮಿಗೆ ಸಂಪೂರ್ಣ ಸಹಕಾರ ಕೂಡಾ ನೀಡಿದ್ದೆ. ನಾನು ವಿರೋಧ ಪಕ್ಷದ ನಾಯಕನ ಸ್ಥಾನಕ್ಕಾಗಿ ಬಿಜೆಪಿ ಅಧಿಕಾರಕ್ಕೆ ಬರಲು ಮೈತ್ರಿ ಸರಕಾರ ಬೀಳಿಸಿಲ್ಲ. ನನ್ನ ರಾಜಕೀಯ ಜೀವನದಲ್ಲಿ ನೀಚ ರಾಜಕಾರಣ ಮಾಡಿಲ್ಲ, ಅದನ್ನು ಮಾಡಿಕೊಂಡು ಬಂದವರು ದೇವೇಗೌಡರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ