ಮರದ ಕೆಳಗೆ ಸಂಧಾನ! ಕುಮಟಳ್ಳಿ, ರಮೇಶ್ ಗೆ ಮಂತ್ರಿಗಿರಿ ಆಫರ್ ಕೊಟ್ಟ HDK, ಪರಂ!
Team Udayavani, May 27, 2019, 4:08 PM IST
ಬೆಂಗಳೂರು: ಆಪರೇಶನ್ ಕಮಲ, ಸರ್ಕಾರಕ್ಕೆ ಡೆಡ್ ಲೈನ್ ಹಿನ್ನೆಲೆಯಲ್ಲಿ ಬಿಜೆಪಿಗೆ ಸಡ್ಡು ಹೊಡೆಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಸೋಮವಾರ ವಿಧಾನಸೌಧ ಆವರಣದ ಮರದ ಕೆಳಗೆ ಕಾಂಗ್ರೆಸ್ ಬಂಡಾಯ ಶಾಸಕ ಮಹೇಶ್ ಕುಮಟಳ್ಳಿ ಜೊತೆ ಸುಮಾರು ಒಂದೂವರೆ ಗಂಟೆಗಳ ಕಾಲ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ಮಹೇಶ್ ಕುಮಟಳ್ಳಿ ಮೂಲಕ ಅತೃಪ್ತ ಶಾಸಕರ ಮನವೊಲಿಕೆಗೆ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಗನ್ ಮ್ಯಾನ್ ಹಾಗೂ ಬೆಂಬಲಿಗರನ್ನು ದೂರ ಇಟ್ಟು, ಮರದ ಕೆಳಗೆ ಸಮಾಲೋಚನೆ ನಡೆಸಿದ್ದರು. ಅಷ್ಟೇ ಅಲ್ಲ ಅತೃಪ್ತ ಶಾಸಕರಿಗೆ ಸಚಿವ ಸ್ಥಾನ ನೀಡುವ ಭರವಸೆಯೂ ನೀಡಿದ್ದಾರೆನ್ನಲಾಗಿದೆ.
ಈ ಮಾತುಕತೆ ಬಳಿಕ ಮಹೇಶ್ ಕುಮಟಳ್ಳಿ, ಮತ್ತೊಬ್ಬ ಕಾಂಗ್ರೆಸ್ ಪಕ್ಷದ ಬಂಡಾಯ ಶಾಸಕ ರಮೇಶ್ ಜಾರಕಿಹೊಳಿ ಮನೆಗೆ ತೆರಳಿದ್ದು, ಸಿಎಂ ಕುಮಾರಸ್ವಾಮಿ ನೀಡಿರುವ ಆಫರ್ ಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ರಮೇಶ್ ಜಾರಕಿಹೊಳಿ, ಕುಮಟಳ್ಳಿ 45 ನಿಮಿಷಗಳ ಕಾಲ ಚರ್ಚೆ ನಡೆಸಿದ ಬಳಿಕ ಕುಮಟಳ್ಳಿ ಮತ್ತೆ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿಯಾಗಲು ತೆರಳಿದ್ದಾರೆ.
ಸತೀಶ್ ಮತ್ತು ರಮೇಶ್ ಜಾರಕಿಹೊಳಿಗೂ ಮಂತ್ರಿಗಿರಿ ನೀಡಲಿ ಎಂದು ಬೆಂಗಳೂರಿನ ರಮೇಶ್ ಜಾರಕಿಹೊಳಿ ನಿವಾಸದ ಬಳಿ ಮಹೇಶ್ ಕುಮಟಳ್ಳಿ ಸುದ್ದಿಗಾರರ ಜೊತೆ ಮಾತನಾಡುತ್ತ ತಿಳಿಸಿದ್ದಾರೆ. ರಮೇಶ್ ಜಾರಕಿಹೊಳಿ ಜೊತೆ ಮಾತುಕತೆ ನಡೆಸಿದ ನಂತರ ಈ ಪ್ರತಿಕ್ರಿಯೆ ನೀಡಿದ್ದಾರೆ. ಸತೀಶ್, ರಮೇಶ್ ಇಬ್ಬರೂ ಸಂಘಟನಾ ಚತುರರು, ಮಂತ್ರಿಗಿರಿ ಬಗ್ಗೆ ಚರ್ಚಿಸುವಷ್ಟು ನಾನು ದೊಡ್ಡವನಲ್ಲ ಎಂದು ಹೇಳಿದರು!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ