“ಕೈ” ಹಿರಿಯ ನಾಯಕರಿಂದ ಬೆದರಿಕೆ ಇದೆ, ನಮಗೆ ರಕ್ಷಣೆ ಕೊಡಿ: ಮುಂಬೈ ಪೊಲೀಸರಿಗೆ ಪತ್ರ
Team Udayavani, Jul 15, 2019, 10:04 AM IST
ಮುಂಬೈ:ಕಾಂಗ್ರೆಸ್, ಜೆಡಿಎಸ್ ಅತೃಪ್ತ ಶಾಸಕರ ಮನವೊಲಿಕೆಗೆ ಸಿಎಂ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ಮುಖಂಡರು ಕಸರತ್ತು ನಡೆಸುತ್ತಿರುವ ನಡುವೆಯೇ ಇದೀಗ ತಮಗೆ ಕಾಂಗ್ರೆಸ್ ಹಿರಿಯ ನಾಯಕರಿಂದ ಬೆದರಿಕೆ ಇರುವುದಾಗಿ ಅತೃಪ್ತ ಶಾಸಕರು ಮುಂಬೈ ಪೊಲೀಸರಿಗೆ ಪತ್ರ ಬರೆದಿದ್ದಾರೆ.
ಮುಂಬೈ ಪೊಲೀಸರಿಗೆ ಬರೆದ ಪತ್ರದಲ್ಲಿ, ನಮಗೆ ಕಾಂಗ್ರೆಸ್ ನ ಹೈಕಮಾಂಡ್ ಜೊತೆ ಮಾತನಾಡುವ, ಸಭೆ ನಡೆಸುವ ಯಾವುದೇ ಇಚ್ಛೆ ಇಲ್ಲ, ನಮಗೆ ಕಾಂಗ್ರೆಸ್ ಮುಖಂಡರಿಂದ ಬೆದರಿಕೆ ಎದುರಾಗುವ ಸಾಧ್ಯತೆ ಇದೆ. ಕಾಂಗ್ರೆಸ್ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಗುಲಾಂ ನಬಿ ಆಜಾದ್ ಸೇರಿದಂತೆ ಕರ್ನಾಟಕ, ಮಹಾರಾಷ್ಟ್ರದ ಯಾವುದೇ ಕಾಂಗ್ರೆಸ್ ನಾಯಕರ ಜೊತೆ ಮಾತನಾಡಲು ಇಚ್ಛಿಸುವುದಿಲ್ಲ. ಅವರಿಂದ ನಮಗೆ ಗಂಭೀರ ಬೆದರಿಕೆ ಇದೆ ಎಂದು ಉಲ್ಲೇಖಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ನಮ್ಮ ಜೊತೆ ಕಾಂಗ್ರೆಸ್ ನಾಯಕರು ಮಾತುಕತೆ ನಡೆಸಲು ಮುಂದಾದರೆ ಅದಕ್ಕೆ ಅವಕಾಶ ನೀಡದೆ ನಮಗೆ ಅಗತ್ಯವಾದ ಪೊಲೀಸ್ ನೆರವು ನೀಡಬೇಕೆಂದು ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಮುಂಬೈನ ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿರುವ ಅತೃಪ್ತ ಶಾಸಕರ ಮನವೊಲಿಸಲು ಸೋಮವಾರ ಸಿಎಂ ಕುಮಾರಸ್ವಾಮಿ, ಡಿಸಿಎಂ ಜಿ.ಪರಮೇಶ್ವರ್, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಮುಂಬೈಗೆ ತೆರಳಲು ಸಿದ್ಧತೆ ನಡೆಸಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ
Bhuvanam gaganam Teaser: ಭುವನಂ ಗಗನಂ ಟೀಸರ್ ಬಂತು
Bharjari Gandu: ಟ್ರೇಲರ್ನಲ್ಲಿ ಭರ್ಜರಿ ಗಂಡು
Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್ನಲ್ಲಿ ಶೂಟಿಂಗ್!
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್