ಯಾವುದೇ ಪ್ರಧಾನಿ ಭಾರತ-ಪಾಕ್ ವಿಷಯವನ್ನು ವೈಯಕ್ತಿಕ ಲಾಭಕ್ಕೆ ಬಳಸಿಲ್ಲ: HDK
Team Udayavani, Apr 20, 2019, 11:50 AM IST
ಬೆಂಗಳೂರು : ‘ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ವೈಯಕ್ತಿಕ ಲಾಭಕ್ಕಾಗಿ ಭಾರತ-ಪಾಕ್ ಪರಿಸ್ಥಿತಿಯನ್ನು ತಮ್ಮ ಚುನಾವಣಾ ಪ್ರಚಾರ ಭಾಷಣದಲ್ಲಿ ಬಳಸಿಕೊಳ್ಳುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
‘ಮೋದಿ ತಮ್ಮ ಅಧಿಕಾರವನ್ನು ವೈಯಕ್ತಿಕ ಲಾಭಕ್ಕಾಗಿ ಭಾರತ-ಪಾಕ್ ವಿಷಯವನ್ನು ಉಲ್ಲೇಖೀಸಿ ಮಾತನಾಡುವುದು ತಪ್ಪು. ಅನೇಕ ಪ್ರಧಾನಿಗಳು ಈ ದೇಶವನ್ನು ಆಳಿದ್ದಾರೆ; ಅನೇಕ ಬಾರಿ ಭಾರತ – ಪಾಕ್ ಸಂಘರ್ಷ ನಡೆದಿವೆ. ಆದರೆ ಈ ಹಿಂದಿನ ಯಾವುದೇ ಪ್ರಧಾನಿ ತಮ್ಮ ವೈಯಕ್ತಿಕ ಲಾಭಕ್ಕಾಗಿ ಆ ವಿಷಯವನ್ನು ತಮ್ಮ ಭಾಷಣದ ಬಂಡವಾಳವಾಗಿ ಮಾಡಿಕೊಂಡಿಲ್ಲ’ ಎಂದು ಕುಮಾರಸ್ವಾಮಿ ಹೇಳಿದರು.
‘ಪ್ರಧಾನಿ ಮೋದಿ ಅವರು ತಮ್ಮ ಚುನಾವಣಾ ಭಾಷಣದಲ್ಲಿ ಪದೇ ಪದೇ ಬಾಲಾಕೋಟ್ ವಾಯು ದಾಳಿಯನ್ನು ಉಲ್ಲೇಖೀಸುತ್ತಾರೆ ಮತ್ತು ಆ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ. ತಾನೇ ಖುದ್ದು ಪಾಕ್ ಗಡಿಗೆ ಹೋಗಿ ಬಾಂಬ್ ಹಾಕಿ ಬಂದವರಂತೆ ಅವರು ಮಾತನಾಡುತ್ತಾರೆ. ನಿಜಕ್ಕಾದರೆ ಭಾರತ ಮತ್ತು ಪಾಕಿಸ್ಥಾನ ನಡುವೆ ಯಾವುದೇ ಸಂಘರ್ಷ, ಕದನ ಇಲ್ಲ; ದೇಶದ ಒಳಗೂ ಯಾವುದೇ ಬಾಂಬ್ ದಾಳಿ ನಡೆದಿಲ್ಲ; ಅಂಥದ್ದೇನೂ ಆಗಿಲ್ಲ’ ಎಂದು ಕುಮಾರಸ್ವಾಮಿ ಹೇಳಿದರು.
‘ನನ್ನ ತಂದೆ ಎಚ್ ಡಿ ದೇವೇಗೌಡ ಅವರು 1995ರಲ್ಲಿ 10 ತಿಂಗಳ ಕಾಲ ದೇಶದ ಪ್ರಧಾನಿಯಾಗಿದ್ದಾಗ ಈ ದೇಶದಲ್ಲಿ ಯಾವುದೇ ಭಯೋತ್ಪಾದಕ ಚಟುವಟಿಕೆಗಳು ನಡೆದಿದ್ದವಾ ? ಭಾರತ-ಪಾಕ್ ಗಡಿಯಲ್ಲಿ ಅಂಥದ್ದೇನಾದರೂ ನಡೆದಿತ್ತಾ ? ನನ್ನ ತಂದೆ ಪ್ರಧಾನಿಯಾಗಿದ್ದಾಗ ಇಡಿಯ ದೇಶ ಶಾಂತಿಯಿಂದಿತ್ತು’ ಎಂದು ಕುಮಾರಸ್ವಾಮಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
Dublin; ಆಸೀಸ್ ಸರಣಿ ಮುಂದೂಡಿದ ಐರ್ಲೆಂಡ್
T20 Cricket: “ವಿಂಡೀಸ್ ಪರ ಟಿ20 ವಿಶ್ವಕಪ್ ಆಡಲ್ಲ’: ಸುನೀಲ್ ನಾರಾಯಣ್ ಸ್ಪಷ್ಟ ನುಡಿ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Tapi River; ಸಲ್ಮಾನ್ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!