ಇದು ಮೋದಿಯ ವಿಜಯವಲ್ಲ, ಆದರೆ ಜನರ ಭರವಸೆಯ ಗೆಲುವು: ಪ್ರಧಾನಿ ಮೋದಿ


Team Udayavani, May 23, 2019, 9:03 PM IST

Kamala

ನವದೆಹಲಿ: ಈ ಬಡ ಫಕೀರನ ಜೋಳಿಗೆಯನ್ನು ನೀವು ಪ್ರೀತಿಯ ಆಶೀರ್ವಾದಿಂದ ತುಂಬಿಸಿದ್ದೀರಿ. ನನಗೆ ದೇಶ ಮುನ್ನಡೆಸಲು ಪ್ರಚಂಡ ಬಹುಮತ ಕೊಟ್ಟಿದ್ದೀರಿ. ನಮ್ಮ ದೇಶವನ್ನು ಸಮೃದ್ದಗೊಳಿಸಲು ನಮ್ಮೆಲ್ಲರ ಶ್ರಮ ಅಗತ್ಯ. 5 ವರ್ಷದಲ್ಲಿ ದೇಶವನ್ನು ಹೊಸ ಹಾದಿಗೆ ಕೊಂಡೊಯ್ಯುವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

2019ರ ಲೋಕಸಭೆ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟವಾದ ಬಳಿಕ ಸಂಜೆ ದೆಹಲಿ ಪಕ್ಷದ ಕೇಂದ್ರ ಕಚೇರಿಯಲ್ಲಿ ಮಾತನಾಡಿದ ಅವರು, 2014ರಲ್ಲಿ ನನ್ನ ಬಗ್ಗೆ ಗೊತ್ತಿಲ್ಲದಿದ್ದರೂ ನನಗೆ ಆಶೀರ್ವಾದ ಮಾಡಿದ್ದೀರಿ. ಈಗ 2019ರಲ್ಲಿ ನನ್ನ ಬಗ್ಗೆ ತಿಳಿದುಕೊಂಡು ಗೆಲ್ಲಿಸಿದ್ದೀರಿ. ಬಹುಮತದ ಮೂಲಕ ನನ್ನ ಮೇಲೆ ಹೊಸ ಜವಾಬ್ದಾರಿ ಹೊರಿಸಿದ್ದೀರಿ ಎಂದರು.

ಸುಮ್ಮನೆ ಕೆಲಸ ಮಾಡಲ್ಲ, ನಿಷ್ಠೆಯಿಂದ ಸೇವೆ ಮಾಡುತ್ತೇನೆ. ಈಗ ನಮ್ಮ ದೇಶವನ್ನು ಸರ್ವಮತದಿಂದ ಮುನ್ನಡೆಸಬೇಕಾಗಿದೆ. ನಮ್ಮ ವಿರೋಧಿಗಳಿದ್ದರೂ ಜೊತೆಗೆ ಕೊಂಡೊಯ್ಯಬೇಕಾಗಿದೆ ಎಂದು ಹೇಳಿದರು. ಈ ಚುನಾವಣೆಯಲ್ಲಿಯೇ ಮೊದಲ ಬಾರಿಗೆ ಬೆಲೆ ಏರಿಕೆ ಮತ್ತು ಭ್ರಷ್ಟಾಚಾರ ಪ್ರಮುಖ ವಿಷಯವಾಗಿರಲಿಲ್ಲ ಎಂದು ಮೋದಿ ಅಭಿಪ್ರಾಯ ವ್ಯಕ್ತಪಡಿಸಿದರು.

ದೇಶದಲ್ಲಿ ಎರಡು ವಿಧದ ಜಾತಿಗಳಿವೆ. ಒಂದು ಬಡತನ, ಮತ್ತೊಂದು ಯಾವುದಾದರೂ ರೀತಿಯಿಂದಲಾದರೂ ಕೊಡುಗೆ ನೀಡುವ ಮೂಲಕ ಬಡತನವನ್ನು ನಿರ್ಮೂಲನೆ ಮಾಡಬೇಕೆನ್ನುವ ಜನ ಎಂದು ಮೋದಿ ಪ್ರತಿಪಾದಿಸಿದರು.

ನಮ್ಮ ದೇಶದಲ್ಲಿ ನಮಗೆ ಸಂವಿಧಾನವೇ ಪರಮೋಚ್ಛ. 1984ರಲ್ಲಿ ಬಿಜೆಪಿ ಕೇವಲ 2 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿತ್ತು. ನಾವು ಈಗ ಎರಡನೇ ಬಾರಿ ಅಧಿಕಾರಕ್ಕೇರಿದ್ದೇವೆ. ಇದು ಮೋದಿಯ ವಿಜಯವಲ್ಲ, ಇದು ಭರವಸೆಯ ಮತ್ತು ಜನರ ಮಹಾತ್ವಾಕಾಂಕ್ಷೆಯ ಗೆಲುವಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2011

ಬೆಂಗಳೂರಿನಲ್ಲೊಂದು ಟೈ ರೋಮಾಂಚನ

rajani-kanth

ಮೋದಿಯೂ ವರ್ಚಸ್ವಿ ನಾಯಕ

smruthi-irani

ಬರಿಗಾಲಲ್ಲೇ ವಿನಾಯಕ ದೇಗುಲಕ್ಕೆ ತೆರಳಿದ್ದ ಸ್ಮತಿ!

Asshivrda

ಮಾಜಿ ರಾಷ್ಟ್ರಪತಿ ಪ್ರಣಬ್ ರ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ

Lalu-head-scratch-700

ರಾಜೀನಾಮೆ ನೀಡುವ ರಾಹುಲ್‌ ನಿರ್ಧಾರ ಆತ್ಮಾಹುತಿಯದ್ದು : ಲಾಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.