ರೈತರ 1 ಲಕ್ಷದವರೆಗಿನ ಸಾಲ ಮನ್ನಾ ಆಗುವುದೇ?


Team Udayavani, Aug 25, 2019, 3:08 AM IST

raitra

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ರೈತರ ಸಾಲ ಮನ್ನಾ ಯೋಜನೆ ವ್ಯಾಪ್ತಿಯಿಂದ ಹೊರಗುಳಿದ ರೈತರು ಬಿ.ಎಸ್‌.ಯಡಿಯೂರಪ್ಪ ಮತ್ತೆ ಮುಖ್ಯ ಮಂತ್ರಿಯಾಗಿರುವುದರಿಂದ ಮತ್ತೆ ಆಶಾಭಾವನೆ ಹೊಂದಿದ್ದಾರೆ. 14 ತಿಂಗಳ ಹಿಂದೆ ಯಡಿಯೂರಪ್ಪ ಆರು ದಿನಗಳ ಕಾಲ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಘೋಷಣೆ ಮಾಡಿದ್ದ ಬೆಳೆ ಸಾಲ ಪಡೆದ ಎಲ್ಲ ರೈತರಿಗೂ ಯಾವುದೇ ಷರತ್ತು ವಿಧಿಸದೇ 1 ಲಕ್ಷದವರೆಗಿನ ಸಾಲ ಮನ್ನಾ ಮಾಡುವರೇ ಎಂಬ ನಿರೀಕ್ಷೆಯಲ್ಲಿ ರೈತರಿದ್ದಾರೆ.

ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಘೋಷಿಸಿದ್ದ ಯೋಜನೆಯಿಂದ ಎಲ್ಲ ರೈತರಿಗೆ ಪ್ರಯೋಜನ ಸಿಗಲಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. 2018ರ ವಿಧಾನಸಭೆ ಚುನಾವಣೆ ಫ‌ಲಿತಾಂಶ ಬಂದ ನಂತರ ರಾಜ್ಯದಲ್ಲಿ ಸಾಲ ಪಡೆದ ಎಲ್ಲ ರೈತರ 1 ಲಕ್ಷದ ವರೆಗಿನ ಬೆಳೆ ಸಾಲ ಮನ್ನಾ ಮಾಡುವ ಘೋಷಣೆಯನ್ನು ಯಡಿಯೂರಪ್ಪ ಮಾಡಿದ್ದರು. ಆದರೆ, ಅವರು ಆ ಸಂದರ್ಭದಲ್ಲಿ ತಮ್ಮ ಸರ್ಕಾರದ ಬಹುಮತ ಸಾಬೀತು ಪಡೆಸುವಲ್ಲಿ ವಿಫ‌ಲರಾಗಿದ್ದರಿಂದ ಆರೇ ದಿನದಲ್ಲಿ ರಾಜೀನಾಮೆ ಸಲ್ಲಿಸಿ ನಿರ್ಗಮಿಸುವಂತಾಗಿತ್ತು. ಆದರೆ, ವರ್ಷದ ಬಳಿಕ ರಾಜ್ಯದಲ್ಲಿನ ಕ್ಷಿಪ್ರ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಿದ್ದಾರೆ.

ಯಡಿಯೂರಪ್ಪ ಮತ್ತೆ ಅಧಿಕಾರಕ್ಕೆ ಬಂದ ದಿನವೇ ರೈತರಿಗೆ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ ಅಡಿಯಲ್ಲಿ ದೊರೆಯುವ 6 ಸಾವಿರ ರೂ. ಜೊತೆಗೆ ರಾಜ್ಯ ಸರ್ಕಾರದಿಂದಲೂ 4 ಸಾವಿರ ರೂ. ಸೇರಿಸಿ ನೀಡಲು ತೀರ್ಮಾನಿಸಿದ್ದಾರೆ. ಆದರೆ, ಕುಮಾರಸ್ವಾಮಿ ಸರ್ಕಾರದಲ್ಲಿ ಅನೇಕ ಷರತ್ತುಗಳ ಹಿನ್ನೆಲೆಯಲ್ಲಿ ಸಾಲ ಮನ್ನಾ ಯೋಜನೆಯಿಂದ ವಂಚಿತರಾದ ರೈತರು ಯಡಿಯೂರಪ್ಪ ಆರಂಭದಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಘೋಷಣೆ ಮಾಡಿದ್ದ ಕೃಷಿ ಸಾಲ ಪಡೆದುಕೊಂಡಿರುವ ಎಲ್ಲ ರೈತರ 1 ಲಕ್ಷದ ವರೆಗಿನ ಸಾಲ ಮನ್ನಾ ಮಾಡುತ್ತಾರೆ ಎನ್ನುವ ಆಶಾ ಭಾವನೆ ಇಟ್ಟುಕೊಂಡಿದ್ದಾರೆ.

ಆರಂಭದಲ್ಲಿ ಎಚ್‌.ಡಿ. ಕುಮಾರಸ್ವಾಮಿ ಸಾಲ ಮನ್ನಾ ಯೋಜನೆಗೆ 46 ಸಾವಿರ ಕೋಟಿ ಹಣ ಬೇಕಾಗುತ್ತದೆ ಎಂದು ಹೇಳಿದ್ದರು. ಆದರೆ, ಷರತ್ತುಗಳನ್ನು ವಿಧಿಸಿದ ನಂತರ 18 ಸಾವಿರ ಕೋಟಿಗೆ ಇಳಿದಿತ್ತು. ಯಡಿಯೂರಪ್ಪ ಘೋಷಣೆ ಮಾಡಿರುವ 1 ಲಕ್ಷದ ವರೆಗಿನ ಸಾಲ ಮನ್ನಾ ಮಾಡಿದರೂ ಸುಮಾರು 20 ರಿಂದ 22 ಸಾವಿರ ಕೋಟಿ ರೂ. ಮಾತ್ರ ಹಣ ಬೇಕಾಗುತ್ತದೆ ಎಂದು ಅಂದಾಜಿಸಲಾಗಿತ್ತು.

ಸಾಲ ಪಡೆದ ರೈತರು: ರಾಜ್ಯದಲ್ಲಿ ರಾಷ್ಟ್ರೀಕೃತ ಹಾಗೂ ಸಹಕಾರ ಬ್ಯಾಂಕ್‌ಗಳಿಂದ ಸುಮಾರು 45 ಲಕ್ಷ ರೈತರು ಬೆಳೆ ಸಾಲ ಪಡೆದುಕೊಂಡಿದ್ದಾರೆ. ಸುಮಾರು 10 ಸಾವಿರ ರೂ.ನಿಂದ ಹಿಡಿದು 10 ಲಕ್ಷದವರೆಗೂ ರೈತರು ಹೊಂದಿರುವ ಜಮೀನಿನ ಆಧಾರದ ಮೇಲೆ ರಾಷ್ಟ್ರೀಕೃತ ಹಾಗೂ ಸಹಕಾರ ಬ್ಯಾಂಕ್‌ಗಳಲ್ಲಿ ಸಾಲ ಪಡೆದುಕೊಂಡಿದ್ದಾರೆ. ಆದರೆ, ಕುಮಾರಸ್ವಾಮಿ ಅವರು ಸಾಲ ಮನ್ನಾ ಯೋಜನೆ ಘೋಷಣೆ ಮಾಡಿ ನಂತರ ಯೋಜನೆ ವ್ಯಾಪ್ತಿಗೆ ಒಳ ಪಡಿಸಲು ರೈತರಿಗೆ ಸುಮಾರು 11 ಷರತ್ತುಗಳನ್ನು ವಿಧಿಸಿದರು.

ವಿಶೇಷವಾಗಿ ಐದು ಎಕರೆ ಮೇಲಿನ ಕೃಷಿ ಭೂಮಿ ಹೊಂದಿದ ರೈತರು ಹಾಗೂ ತೆರಿಗೆ ಕಟ್ಟುವ ಮತ್ತು ಸರ್ಕಾರಿ ಉದ್ಯೋಗ ಮಾಡುವ, 20 ಸಾವಿರಕ್ಕಿಂತ ಹೆಚ್ಚಿನ ಸಂಬಳ ಪಡೆಯುವ ರೈತರು ಕುಮಾರಸ್ವಾಮಿ ಸಾಲ ಮನ್ನಾ ಯೋಜನೆಯಿಂದ ವಂಚಿತರಾಗಿದ್ದಾರೆ. ಸಹಕಾರಿ ಬ್ಯಾಂಕ್‌ಗಳಿಂದ ಸುಮಾರು 22.65 ಲಕ್ಷ ರೈತರು ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ 21 ಲಕ್ಷ ರೈತರು ಬೆಳೆ ಸಾಲ ಪಡೆದುಕೊಂಡಿ ದ್ದಾರೆ. ಆದರೆ, ರಾಜ್ಯ ಸರ್ಕಾರದ ಷರತ್ತುಗಳಿಂದ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿಯೇ ಸುಮಾರು 7 ಲಕ್ಷ ರೈತರು, ಸಹಕಾರ ಬ್ಯಾಂಕ್‌ಗಳಿಂದಲೂ ಸುಮಾರು 2 ಲಕ್ಷ ರೈತರು ಯೋಜನೆ ಯಿಂದ ವಂಚಿತರಾಗಿದ್ದಾರೆ ಎಂದು ಅಂದಾಜಿಸಲಾಗಿದೆ.

* ಶಂಕರ ಪಾಗೋಜಿ

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.