ತಾಯಿ ಮೃತಪಟ್ಟಾಗಲೂ ಆತ ಬರಲಿಲ್ಲ, ಪೊಲೀಸರಿಗೆ ಸಹಕಾರ ನೀಡುತ್ತೇವೆ: ಆದಿತ್ಯ ರಾವ್ ಸಹೋದರ
ಬೆಂಗಳೂರು ತಲುಪಿದ ಮಂಗಳೂರು ಪೊಲೀಸರ ತನಿಖಾ ತಂಡ
Team Udayavani, Jan 22, 2020, 12:26 PM IST
ಶಂಕಿತ ಆರೋಪಿ ಆದಿತ್ಯ ರಾವ್
ಬೆಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಪೋಟಕವನ್ನಿಟ್ಟಿದ್ದ ಶಂಕಿತ ಆರೋಪಿ ಆದಿತ್ಯ ರಾವ್ ಬೆಂಗಳೂರು ಪೊಲೀಸರ ಮುಂದೆ ಶರಣಾಗಿದ್ದು, ಹೆಚ್ಚಿನ ವಿಚಾರಣೆಗೆ ಮಂಗಳೂರಿಗೆ ಕರೆದುಕೊಂಡು ಬರುವ ಸಾಧ್ಯತೆಯಿದೆ.
ಎಸಿಪಿ ಬೆಳ್ಳಿಯಪ್ಪ, ವಿನಯ್ ಗಾಂವ್ಕರ್ ನೇತೃತ್ವದ ಐದು ಅಧಿಕಾರಿಗಳ ತನಿಖಾ ತಂಡ ವಿಮಾನದ ಮೂಲಕ ಬೆಂಗಳೂರಿಗೆ ತಲುಪಿದೆ. ಮಂಗಳೂರು ಪೊಲೀಸರಿಗೆ ಸಂಬಂಧಿಸಿದ ಪ್ರಕರಣವಾಗಿರುವ ಕಾರಣ ಬೆಂಗಳೂರು ಪೊಲೀಸರು ಆರೋಪಿಯನ್ನು ಮಂಗಳೂರು ಪೊಲೀಸರಿಗೆ ಹಸ್ತಾಂತರಿಸಲಿದ್ದಾರೆ.
ಆರೋಪಿ ಆದಿತ್ಯ ರಾವ್ ಅವರ ಕುಟುಂಬಿಕರು ಮಂಗಳೂರಿನ ಚಿಲಿಂಬಿಯ ಫ್ಲ್ಯಾಟ್ ನಲ್ಲಿ ವಾಸವಾಗಿದ್ದಾರೆ.. ಆ ಮನೆಯಲ್ಲಿ ಸದ್ಯ ಆದಿತ್ಯ ರಾವ್ ತಂದೆ ಮತ್ತು ಸಹೋದರ ಇದ್ದಾರೆ ಎನ್ನಲಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಆದಿತ್ಯ ರಾವ್ ಸಹೋದರ, ಕಳೆದ ಮೂರು ವರ್ಷಗಳಿಂದ ನಮಗೆ ಆತನ ಸಂಪರ್ಕವಿಲ್ಲ. ಕಳೆದ ಸಲ ಜೈಲಿಗೆ ಹೋದಾಗಲೂ ನಾವು ಯಾವುದೇ ರೀತಿಯ ಸಂಪರ್ಕ ಮಾಡಿರಲಿಲ್ಲ. ಕಳೆದ ವರ್ಷ ತಾಯಿ ತೀರಿಕೊಂಡಾಗ ಜೈಲಿಗೆ ಕರೆಮಾಡಿ ವಿಷಯ ತಿಳಿಸಿದ್ದೆವು. ಆದರೆ ಆತ ಬರಲಿಲ್ಲ. ಆತ ಮಂಗಳೂರಿನಲ್ಲಿದ್ದ ಎಂದು ನಮಗೆ ತಿಳಿದಿರಲಿಲ್ಲ. ಪೊಲೀಸರಿಗೆ ಎಲ್ಲಾ ಸಹಕಾರ ನೀಡುತ್ತೇವೆ ಎಂದು ಹೇಳಿದರು.
ಆದಿತ್ಯ ರಾವ್ ತಂದೆ ಮತ್ತು ಸಹೋದರ ಬ್ಯಾಂಕ್ ಉದ್ಯೋಗಿಗಳಾಗಿದ್ದು, ಬ್ಯಾಂಕ್ ಹಿರಿಯ ಅಧಿಕಾರಿಯೋರ್ವರು ಆದಿತ್ಯ ರಾವ್ ಕುಟುಂಬಿಕರ ಮನೆಗೆ ಭೇಟಿ ನೀಡಿದ್ದಾರೆ ಎನ್ನಲಾಗಿದೆ. ನಮಗೆ ಆದಿತ್ಯನ ಬಗ್ಗೆ ಗೊತ್ತಿಲ್ಲ. ಆದರೆ ಸಹೋದರ ನಮ್ಮ ಬ್ಯಾಂಕ್ ಸಿಬ್ಬಂದಿ. ಒಳ್ಳೆಯ ಹುಡುಗ. ಆತನ ತಂದೆಯದ್ದು ಒಳ್ಳೆಯ ಕುಟುಂಬ. ನಾವು ಮನೆಯವರಿಗೆ ಧೈರ್ಯ ತುಂಬಲು ಬಂದಿದ್ದೇವೆ ಎಂದಿದ್ದಾರೆ.
ಆರೋಪಿ ಆದಿತ್ಯ ರಾವ್ ಬುಧವಾರ ಬೆಳಿಗ್ಗೆ ಬೆಂಗಳೂರು ಡಿಜಿ ಮತ್ತು ಐಜಿಪಿ ನೀಲಮಣಿ ಎನ್ ರಾಜು ಅವರ ಕಚೇರಿಯಲ್ಲಿ ಶರಣಾಗಿದ್ದ. ನಂತರ ಆತನನ್ನು ವಿಚಾರಣೆಗೆ ಹಲಸೂರು ಗೇಟ್ ಪೊಲೀಸರ ವಶಕ್ಕೆ ನೀಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು