ನಾನು ಬಿಎಸ್‌ವೈ ಮನೆ ಮಗನಿದ್ದಂತೆ, ಸಚಿವ ಸ್ಥಾನ ಕೊಟ್ಟರೂ, ಕೊಡದಿದ್ದರೂ ಸಂತೋಷ: ನಿರಾಣಿ


Team Udayavani, Feb 26, 2020, 7:48 PM IST

nirani

ಬಾಗಲಕೋಟೆ: ಮುಖ್ಯಮಂತ್ರಿ ಯಡಿಯೂರಪ್ಪ ನನ್ನ ರಾಜಕೀಯ ಗುರು. ಅವರು ಏನೇ ಅಂದರೂ ನನಗೆ ಬೇಜಾರಿಲ್ಲ. ಅವರ ಸ್ವಭಾವ ನಾನು ಬಹಳ ವರ್ಷದಿಂದ ನೋಡುತ್ತಿದ್ದೇನೆ. ಜೂನ್‌ನಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಆ ವೇಳೆ ಸಚಿವ ಸ್ಥಾನ ಕೊಟ್ಟರೂ, ಕೊಡದಿದ್ದರೂ ಸಂತೋಷವೇ. ನಾನು ಯಡಿಯೂರಪ್ಪ ಅವರ ಮನೆ ಮಗನಿದ್ದಂತೆ ಎಂದು ಬೀಳಗಿ ಬಿಜೆಪಿ ಶಾಸಕ ಮುರುಗೇಶ ನಿರಾಣಿ ಹೇಳಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಷ್ಟೋ ಜನರಿಗೆ ಶಾಸಕರಾಗುವ ಅವಕಾಶ ಸಿಗಲ್ಲ. ನನಗೆ ಬೀಳಗಿ ಕ್ಷೇತ್ರದ ಶಾಸನಾಗುವ ಅವಕಾಶ ದೊರೆತಿದೆ. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ನಾನು ಶ್ರಮಿಸುತ್ತಿದ್ದೇನೆ. ಉತ್ತರ ಕರ್ನಾಟಕದಲ್ಲಿ ಯಾವ ರಾಜಕಾರಣಿಯೂ ಮಾಡದ ಉದ್ಯಮ ಕೆಲಸ ಮಾಡಿದ್ದೇನೆ. 70 ಸಾವಿರ ಜನರಿಗೆ ಉದ್ಯೋಗ ನೀಡಿದ್ದೇನೆ. ಈ ಖುಷಿ ನನಗಿದೆ. ಕೆಲಸ ಮಾಡಲು ಸಚಿವ ಸ್ಥಾನವೇ ಬೇಕೆಂದಿಲ್ಲ ಎಂದರು.
ನಾನೊಬ್ಬ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ. ಸಚಿವ ಸಂಪುಟ ವಿಸ್ತರಣೆ ವೇಳೆ 117 ಶಾಸಕರಲ್ಲಿ ಯಾರಿಗೆ ಸಚಿವ ಸ್ಥಾನ ಕೊಟ್ಟರೂ ನನಗೆ ಬೇಸರವಿಲ್ಲ.

ವಲಸಿಗರು, ಮೂಲ ಬಿಜೆಪಿಗರು ಎಂಬ ಬೇಸರವಿಲ್ಲ. ನಾನು ಈಚೆಗೆ ಹುಬ್ಬಳ್ಳಿಯಲ್ಲಿ ಜಗದೀಶ ಶೆಟ್ಟರ ನಿವಾಸಕ್ಕೆ ಹೋಗಿದ್ದು, ಬೇರೆ ರೀತಿಯ ಸುದ್ದಿ ಹಬ್ಬಿಸಲಾಗಿದೆ. ನನ್ನ ಉದ್ಯಮಗಳಾದ ಸಾಯಿಪ್ರಿಯಾ ಶುಗರ್ ಅನ್ನು 10 ಸಾವಿರ ಮೆಟ್ರಿಕ್‌ ಟನ್‌ ಕಬ್ಬು ನುರಿಸುವುದನ್ನು 15 ಸಾವಿರ ಮೆಟ್ರಿಕ್‌ ಟನ್‌ಗೆ ಹೆಚ್ಚಳ, ಬಾದಾಮಿ ತಾಲೂಕಿನಲ್ಲಿ ಡಿಸ್ಟಿಲರಿ ಕಾರ್ಖಾನೆ ಆರಂಭಿಸುವ ಕುರಿತು ಚರ್ಚಿಸಲು ಹೋಗಿದ್ದೆ. ಗುಂಪುಗಾರಿಕೆ ಕುರಿತು ಸುದ್ದಿ ಹಬ್ಬಿದ್ದು, ಅದು ಸತ್ಯಕ್ಕೆ ದೂರವಾಗಿದೆ ಎಂದರು.

ಪಾಕಿಸ್ತಾನಕ್ಕೆ ಹೋಗಲಿ:
ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿದವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ನಮ್ಮ ದೇಶದ ನೆಲ, ಜಲ, ಆಹಾರ ತಿಂದು ಪಾಕಿಸ್ತಾನಕ್ಕೆ ಜಯಕಾರ ಕೂಗುವವರಿಗೆ ತಕ್ಕ ಶಿಕ್ಷೆ ಆಗಬೇಕು. ಪಾಕಿಸ್ತಾನದ ಮೇಲೆ ಮಮಕಾರ ಇದ್ದವರು ಅಲ್ಲಿಗೇ ಹೋಗಲಿ. ಈ ರೀತಿ ಮಾಡುವವರು ಯಾರಿಗೋ ಹುಟ್ಟಿ, ಇನ್ಯಾರನ್ನೋ ತಂದೆ ಎಂದು ಹೇಳಿದಂತೆ ಎಂದರು.

ಯುಕೆಪಿ 3ನೇ ಹಂತದಡಿ ಭೂಮಿ ಕಳೆದುಕೊಳ್ಳುವ ರೈತರ ಖುಷ್ಕಿ ಭೂಮಿಗೆ 30 ಲಕ್ಷ, ನೀರಾವರಿ ಭೂಮಿಗೆ 40 ಲಕ್ಷ ಪರಿಹಾರ ಕೊಡಬೇಕು ಎಂಬ ನನ್ನ ಒತ್ತಾಯಕ್ಕೆ ನಾನು ಈಗಲೂ ಬದ್ಧನಿದ್ದೇನೆ. ಉಸ್ತುವಾರಿ ಸಚಿವರೂ ಆಗಿರುವ ಡಿಸಿಎಂ ಕಾರಜೋಳರು, ಕಾನೂನು ಪ್ರಕಾರ ಪರಿಹಾರ ಕೊಡುವುದಾಗಿ ನೀಡಿರುವ ಹೇಳಿಕೆ ಕುರಿತು ನನಗೆ ಗೊತ್ತಿಲ್ಲ. ಆದರೆ, ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಬಜೆಟ್‌ ಅಧಿವೇಶನದಲ್ಲೂ ನಾನು ಒತ್ತಾಯಿಸುತ್ತೇನೆ ಎಂದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.