ರಾಯಚೂರು: ವಿದ್ಯಾರ್ಥಿನಿ ಸಾವು ಖಂಡಿಸಿ ಪ್ರತಿಭಟನೆ; ಪೊಲೀಸರ ಮೇಲೆ ಚಪ್ಪಲಿ
ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ,
Team Udayavani, Apr 25, 2019, 2:25 PM IST
ರಾಯಚೂರು: ನಗರದ ನವೋದಯ ಕಾಲೇಜಿನಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು ಆತ್ಮಹತ್ಯೆ ಆಗಿರದೇ ವ್ಯವಸ್ಥಿತ ಕೊಲೆಯಾಗಿದ್ದು, ಈ ಕೃತ್ಯಕ್ಕೆಕಾರಣರಾದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿ ಸಬೇಕು
ಎಂದು ಆಗ್ರಹಿಸಿ ಸಾವಿರಾರು ವಿದ್ಯಾರ್ಥಿಗಳು ಗುರುವಾರ ಬುಧವಾರ ನಗರದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದರು. ಈ ವೇಳೆಪೊಲೀಸರ ಮೇಲೆ ಚಪ್ಪಲಿ ಮತ್ತು ಕಲ್ಲು ತೂರಾಟ ನಡೆಸಿರುವ ಬಗ್ಗೆ ವರದಿಯಾಗಿದೆ.
ಎಬಿವಿಪಿ ನೇತೃತ್ವದಲ್ಲಿ ಸಾವಿರಾರು ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾವಣೆಗೊಂಡು ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.
ವಿದ್ಯಾರ್ಥಿಗಳ ಮೆರವಣಿಗೆ ಜಿಲ್ಲಾಧಿಕಾರಿಗಳ ಕಚೇರಿ ತಲುಪುತ್ತಿದ್ದಂತೆ ಕೆಲ ದುಷ್ಕರ್ಮಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಪ್ರತಿಭಟನೆಯಲ್ಲಿ ಸ್ಯಾಂಡಲ್ವುಡ್ನ ನಟಿ ಹರ್ಷಿಕಾ ಮತ್ತು ನಟ ಭುವನ್ ಭಾಗಿಯಾಗಿದ್ದರು.
ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ
ಪ್ರತಿಭಟನೆ ವೇಳೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದು, ಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡಿದ್ದಾನೆ. ರಕ್ಷಣೆಗೊಳಗಾಗಿರುವ ಆತನನ್ನುರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸರು ಗುಂಪು ಚದುರಿಸಿದ್ದು , ಓರ್ವನನ್ನು ವಶಕ್ಕೆಪಡೆದಿದ್ದಾರೆ.