ಕಿಡಿ ಕಿಡಿಯಾಗಿ ರಾಜೀನಾಮೆ ನೀಡಲು ಹೊರಟ ರಮೇಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ ದ್ರೋಹಿ,ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಹೇಳುವುದು ಬಹಳ ಇದೆ
Team Udayavani, Apr 24, 2019, 2:29 PM IST
ಬೆಳಗಾವಿ : ಬಂಡಾಯ ಶಾಸಕ ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ , ಕಾಂಗ್ರೆಸ್ಗೆ ಗುಡ್ಬೈ ಹೇಳುವುದು ಖಚಿತಾಗಿದೆ.
ಬುಧವಾರ ಮಧ್ಯಾಹ್ನ ಬೆಂಗಳೂರಿಗೆ ಹೊರಟ ವೇಳೆ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಸತೀಶ್ ಜಾರಕಿಹೊಳಿ ಗೋಮುಖ ನೋಡಿ ಮೋಸ ಹೋಗಿದ್ದೇನೆ. ಕಾಂಗ್ರೆಸ್ನಲ್ಲಿ ಭಿನ್ನಮತ ಆರಂಭಿಸಿದ್ದೇ ಸತೀಶ್.ನಮ್ಮ ಮನೆಗೆ ಬಂದು ಅಳುತ್ತಾ ಕುಳಿತಿದ್ದ. ಬರೀ ಸಚಿವನಾದರೆ ನಮ್ಮ ಮನೆತನಕ್ಕೆ ಹಿನ್ನಡೆ ಎಂದಿದ್ದ. ದ್ರೋಹಿಗಳಿಂದ ಕಾಂಗ್ರೆಸ್ ಪಕ್ಷ ಹಾಳಾಗಿ ಹೋಗಿದೆ ಎಂದು ಕಿಡಿ ಕಾರಿದರು.
ನಾನು ಉಪ ಚುನಾವಣೆಯಲ್ಲಿ ಮಾತ್ರ ಗೋಕಾಕ್ನಿಂದ ಸ್ಪರ್ಧಿಸುತ್ತೇನೆ. ಮುಂದಿನ ವಿಧಾನ ಸಭಾ ಚುನಾವಣೆ ಯಮಕನ ಮರಡಿಯಲ್ಲಿ ಸ್ಪರ್ಧಿಸುತ್ತೇನೆ ಎಂದು ಸಹೋದರ, ಸಚಿವ ಸತೀಶ್ ಜಾರಕಿಹೊಳಿಗೆ ಶಾಕ್ ನೀಡಿದರು.
ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧವೂ ಆಕ್ರೋಶ ಹೊರ ಹಾಕಿದ ರಮೇಶ್ ಜಾರಕಿಹೊಳಿ, ಹೌದು ನಮ್ಮ ಸ್ಥಿತಿ ತೋಳ ಬಂತು ತೋಳ ರೀತಿ ಆಗಿದೆ. ಆಕೆಯ ಬಗ್ಗೆಎದುರು ಬದುರು ಕುಳಿತು ಮಾತನಾಡುವುದು ತುಂಬಾ ಇದೆ. ಆಕೆಯ ಕುಟುಂಬದ ಹಿನ್ನಲೆ ಏನು, ನಮ್ಮ ಕುಟುಂಬದ ಹಿನ್ನಲೆ ಏನು ಎಂದು ಹೇಳಬೇಕು ಎಂದರು.
ಕಾರಜೋಳ ಜೊತೆ ಪ್ರಯಾಣ
ರಮೇಶ್ ಜಾರಕಿಹೊಳಿ ಪ್ರಯಾಣಿಸುತ್ತಿರುವ ವಿಮಾನದಲ್ಲೇ ಬಿಜೆಪಿ ನಾಯಕ ಗೋವಿಂದ ಕಾರಜೋಳ ಅವರೂ ಪ್ರಯಾಣಿಸುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ