ಹೈಕಮಾಂಡ್ ಸೂಚಿಸಿದರೆ ಈಗಲೇ ರಾಜೀನಾಮೆಗೆ ಸಿದ್ಧ: ಡಿಸಿಎಂ ಗೋವಿಂದ ಕಾರಜೋಳ
Team Udayavani, Jan 27, 2020, 12:27 PM IST
ವಿಜಯಪುರ: ಬೆಂಗಳೂರಿನಿಂದ ಹೊರಗಿರುವ ನನಗೆ ಸಂಪುಟ ವಿಸ್ತರಣೆ ಕುರಿತು ನನಗೆ ಏನೂ ಗೊತ್ತಿಲ್ಲ. ಪಕ್ಷದ ಶಿಸ್ತಿನ ಸಿಪಾಯಿ ಆಗಿರುವ ನಾನು ಪಕ್ಷದ ಹೈಕಮಾಂಡ್ ಸೂಚಿದರೆ ಈಗಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಪ್ರತಿಕ್ರಿಯಿಸಿದ್ದಾರೆ.
ಸೋಮವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಡಿಸಿಎಂ ಸ್ಥಾನ, ಸಂಪುಟ ವಿಸ್ತರಣೆ, ಸೋತವರಿಗೆ ಅಧಿಕಾರ ನೀಡಿಕೆಯಂಥ ವಿಷಯವನ್ನು ಪಕ್ಷ ನಿರ್ಧರಿಸುತ್ತದೆ. ಪ್ರಧಾನಿ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ, ಪಕ್ಷದ ಅಧ್ಯಕ್ಷರ ತೀರ್ಮಾನಕ್ಕೆ ಎಲ್ಲರೂ ಬದ್ಧವಾಗಿರಬೇಕು ಎಂದರು.
ನಾನೇನು ಹೊರ ಜಿಲ್ಲೆಯವನಲ್ಲ. ಅಖಂಡ ವಿಜಯಪುರ ಜಿಲ್ಲೆಯ ನಾನು ಬಾಗಲಕೋಟೆ ವಿಭಜನೆ ಬಳಿಕ ಅಲ್ಲಿನ ಮುಧೋಳ ಕ್ಷೇತ್ರದಲ್ಲಿದ್ದೇನೆ. ಇಷ್ಟಕ್ಕೂ ನನ್ನ ಮೂಲ ವಿಜಯಪುರ ಜಿಲ್ಲೆ. ಹೀಗಾಗಿ ಹೊರಗಿನವನು ಎಂಬ ಮಾತಿಗೆ ಪ್ರತಿಕ್ರಿಯಿಸಲಾರೆ ಎಂದರು.\
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
Lok Sabha Election: ಬಿಜೆಪಿ-ಜೆಡಿಎಸ್ “ಜಂಟಿ ಸಮರಾಭ್ಯಾಸ’
Congress; ಕೋಲಾರಕ್ಕೆ ಗೌತಮ್ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!
Politics: ಟಿಕೆಟ್ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು