ಸಾಲದ ಕಂತು ಮರುಪಾವತಿಗೆ ಜೂನ್ ಅಂತ್ಯದ ವರೆಗೂ ಅವಕಾಶ
Team Udayavani, Mar 28, 2020, 5:45 AM IST
ಬೆಂಗಳೂರು: ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಸಾಲದ ಕಂತು ಪಾವತಿಗೆ ಜೂನ್ ಅಂತ್ಯದವರೆಗೂ ಕಾಲಾವಕಾಶ ನೀಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಸಂಪುಟ ಸಭೆಯ ಅನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬಿಎಸ್ವೈ, ಕೋವಿಡ್ -19 ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ರೈತರಿಗೆ ಅನುಕೂಲ ಕಲ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.
ಟ್ರಾಕ್ಟರ್ ಟ್ರಿಲ್ಲರ್, ಬೆಳೆ ಸಾಲ ಬಡ್ಡಿ ಸುಸ್ತಿ ಮನ್ನಾದ ಅವಧಿಯನ್ನು ಕೂಡ ಜೂ.30ರ ವರೆಗೆ ವಿಸ್ತರಿಸಲಾಗಿದೆ. ಕೋವಿಡ್ -19 ತಡೆಗಟ್ಟುವ ನಿಟ್ಟಿನಲ್ಲಿ ಏನೆಲ್ಲ ಮುನ್ನಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು ಎಂದು ಸಂಪುಟದಲ್ಲಿ ಚರ್ಚೆ ಮಾಡಿದ್ದೇವೆ ಎಂದಿದ್ದಾರೆ.
ಮೋದಿ ಕರೆ: ಕಟ್ಟು ನಿಟ್ಟಿನ ಕ್ರಮ
ಪ್ರಧಾನಿ ಮೋದಿ ಶುಕ್ರವಾರ ತನಗೆ ದೂರವಾಣಿ ಕರೆ ಮಾಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ನಿರ್ದೇಶನ ನೀಡಿದ್ದಾರೆ. ಅದರಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದಿದ್ದಾರೆ.
ಆಹಾರ ಧಾನ್ಯಗಳ ಪೂರೈಕೆಗೆ ಕ್ರಮ
ಅಗತ್ಯ ಆಹಾರ ಧಾನ್ಯ, ಮಾಂಸ, ಹಣ್ಣು , ತರಕಾರಿ ಪೂರೈಕೆಗೆ ತೊಂದರೆ ಆಗದಂತೆ ಸರಕಾರ ಕ್ರಮ ಕೈಗೊಂಡಿದೆ. ಅಗತ್ಯವಾದರೆ ಹಾಪ್ಕಾಮ್ಸ್, ಎಪಿಎಂಸಿ ಮೂಲಕ ನೇರವಾಗಿ ಗ್ರಾಹಕರಿಗೆ ಮಾರಾಟ ವ್ಯವಸ್ಥೆಯೂ ಕಲ್ಪಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ತಿಂಗಳಿಗಾಗುವಷ್ಟು ಆಹಾರ ಪದಾರ್ಥ
ಮಾತೃಪೂರ್ಣ ಯೋಜನೆಯಡಿ ರಾಜ್ಯದ 7 ಲಕ್ಷ ಫಲಾನುಭವಿಗಳಿಗೆ 1 ತಿಂಗಳಿಗೆ ಆಗುವಷ್ಟು ಆಹಾರ ಪದಾರ್ಥಗಳನ್ನು ನೀಡಲು ಸರಕಾರ ನಿರ್ಧರಿಸಿದೆ. ಮಾ. 31ರೊಳಗೆ ಅಂಗನವಾಡಿ ಕಾರ್ಯಕರ್ತೆಯರು ಇದನ್ನು ಫಲಾನುಭವಿಗಳಿಗೆ ತಲುಪಿಸಬೇಕು ಎಂದು ಸುತ್ತೋಲೆ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್