ಸಿದ್ದರಾಮಯ್ಯ,ಗುಂಡೂರಾವ್‌ ವಿರುದ್ಧ ರೋಷನ್‌ ಬೇಗ್‌ ಆಕ್ರೋಶ

ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತ, ಜಮೀರ್‌ ಅಹಮದ್‌ ಖಾನ್‌ ತಿರುಗೇಟು

Team Udayavani, May 21, 2019, 1:34 PM IST

3-a

Roshan Baig, outrage ,Dinesh Gundu rao, Siddaramaiah

ಬೆಂಗಳೂರು : ಚುನಾವಣೋತ್ತರ ಸಮೀಕ್ಷೆಗಳು ಎನ್‌ಡಿಎ ಗೆಲುವಿನ ಭವಿಷ್ಯ ನುಡಿದ ಬೆನ್ನಲ್ಲೇ ವಿಪಕ್ಷಗಳಲ್ಲಿ ತಳಮಳ ಆರಂಭವಾಗಿದ್ದು, ರಾಜ್ಯ ಕಾಂಗ್ರೆಸ್‌ನಲ್ಲಿ ಭಿನ್ನಮತಭುಗಿಲೆದ್ದಿದ್ದು, ಮಾಜಿ ಸಚಿವ, ಶಾಸಕ ರೋಷನ್‌ ಬೇಗ್‌ ಅವರು ಕಾಂಗ್ರೆಸ್‌ ನಾಯಕರ ವಿರುದ್ಧ ಬಹಿರಂಗ ಆಕ್ರೋಶ ಹೊರ ಹಾಕಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರೋಷನ್‌ ಬೇಗ್‌ , ಎಕ್ಸಿಟ್‌ ಪೋಲ್‌ ನೋಡಿದರೆ ನನಗೆ ಬೇಸರವಾಗುತ್ತದೆ. ಸಿದ್ದರಾಮಯ್ಯ ಮತ್ತು ದಿನೇಶ್‌ ಗುಂಡೂರಾವ್‌ ಸೇರಿಕೊಂಡು ಕಾಂಗ್ರೆಸ್‌ ಪಕ್ಷವನ್ನು ಈ ಗತಿಗೆ ತಂದಿದ್ದಾರೆ ಎಂದರು.

ಕಾಂಗ್ರೆಸ್‌ ನಾಯಕರು ನಡೆದುಕೊಂಡ ರೀತಿ ಸರಿಯಿಲ್ಲ, ಅಹಂಕಾರ, ದುರಹಂಕಾರ ಸರಿಯಲ್ಲ . ನಿಮ್ಮ ನಡತೆ ನೋಡಿ ಎಲ್ಲರಿಗೂ ಬೇಸರ ಆಗಿದೆ ಎಂದರು.

ಇದೇ ವೇಳೆ ಕಾಂಗ್ರೆಸ್‌ ಅಲ್ಪಸಂಖ್ಯಾತರ ಪರ ಕೆಲಸ ಮಾಡುತ್ತಿಲ್ಲ, ಅಲ್ಪಸಂಖ್ಯಾತರನ್ನು ತುಳಿಯುತ್ತಿದೆ ಎಂದು ಆರೋಪಿಸಿದರು.

ಸಿದ್ದರಾಮಯ್ಯ ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ. ಅದಕ್ಕಾಗಿ ಕಾಂಗ್ರೆಸ್‌ಗೆ ಈ ಗತಿ ಬಂದಿದೆ. ದಿನೇಶ್‌ ಗುಂಡೂರಾವ್‌ ನೈತಿಕತೆ ಇದ್ದರೆ ರಾಜೀನಾಮೆ ನೀಡಲಿ ಎಂದು ಸವಾಲು ಹಾಕಿದರು.

ಲಿಂಗಾಯತ ಧರ್ಮ ಒಡೆಯಲು ಮುಂದಾಗಿರುವುದರಿಂದ ಕಾಂಗ್ರೆಸ್ 79 ಸ್ಥಾನಕ್ಕೆ.ಇಳಿಯಲು ಕಾರಣವಾಗಿದೆ ಎಂದರು.

ಬಿಜೆಪಿ ಸೇರ್ಪಡೆಯಾಗುವ ಬಗ್ಗೆ ಯೋಚನೆ ಮಾಡಿಲ್ಲ. ಮುಂದೆ ಯೋಚಿಸುತ್ತೇನೆ ಎಂದು ಕುತೂಹಲ ಮೂಡಿಸಿದ್ದಾರೆ.

ಜಮೀರ್‌ ತಿರುಗೇಟು
ಸಚಿವ ಜಮೀರ್‌ ಅಹಮದ್‌ ಖಾನ್‌ ಅವರು ಸುದ್ದಿಗೋಷ್ಠಿ ನಡೆಸಿ ರೋಷನ್‌ ಬೇಗ್‌ಗೆ ತಿರುಗೇಟು ನೀಡಿದರು. ಬೇಗ್‌ ಅಧಿಕಾರ ದಾಹಿ, ಅವರಿಗೆ ಗೊತ್ತಿದ್ದರೆ ಮೊದಲೆ ಯಾಕೆ ಹೇಳಲಿಲ್ಲ, ಕಾಂಗ್ರೆಸ್‌ ಸರ್ಕಾರ ಬಂದಾಗಲೆಲ್ಲ ಸಚಿವರಾಗಿದ್ದಾರೆ, ಅವರು ಅಧಿಕಾರ ಅನುಭವಿಸಿದ್ದಾರೆ. ಅಧಿಕಾರ ಕೊಟ್ಟಾಗ ಕಾಂಗ್ರೆಸ್‌ ಒಳ್ಳೆಯ ಪಕ್ಷ ವೇ ಎಂದು ತೀವ್ರ ವಾಗ್ಧಾಳಿ ನಡೆಸಿದ್ದಾರೆ.

ಇಷ್ಟು ದಿನ ಕಾಂಗ್ರೆಸ್ ನಲ್ಲಿ ಅಧಿಕಾರ ಅನುಭವಿಸಿದಾಗ ಎಲ್ಲವೂ ಸರಿಯಾಗಿತ್ತು. ಇವರಿಗೆ ಎಂಪಿ ಟಿಕೆಟ್ ನೀಡಿಲ್ಲ ಎಂದ ಮಾತ್ರಕ್ಕೆ ಕಾಂಗ್ರೆಸ್ ಸರಿಯಿಲ್ಲ ಎಂದು ಹೇಳುತ್ತಿದ್ದಾರೆ. ಎಕ್ಸಿಟ್ ಪೋಲ್ ನೋಡಿ ಅವರು ಹೇಳಿಕೆ ನೀಡುತ್ತಿದ್ದಾರೆ. ಅವರು ರಾಜಕೀಯವಾಗಿ ಬೇರೆ ತೀರ್ಮಾನ ಮಾಡಿದಂತೆ ಕಾಣುತ್ತದೆ. ಅವರು ಹಿರಿಯ ನಾಯಕರು ಅವರ ಹೇಳಿಕೆಯನ್ನು ಖಂಡಿಸುತ್ತೇನೆ ಎಂದರು.

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.