ತಪ್ಪಾಯಿತು ದೇವಿ ಕ್ಷಮಿಸಿಬಿಡಿ: ಚಾಮುಂಡಿ ಬೆಟ್ಟದಲ್ಲಿ ಸಾ.ರಾ. ಮಹೇಶ್
Team Udayavani, Oct 18, 2019, 9:57 AM IST
ಮೈಸೂರು: ಅನರ್ಹ ಶಾಸಕ ಎಚ್.ವಿಶ್ವನಾಥ್ ಜೊತೆಗಿನ ಆಣೆ ಪ್ರಮಾಣ ರಾಜಕೀಯ ಜಿದ್ದಿಗೆ ಗುರುವಾರ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಹೈಡ್ರಾಮಾ ನಡೆಸಿದ್ದ ಮಾಜಿ ಸಚಿವ ಸಾ.ರಾ.ಮಹೇಶ್ ಶುಕ್ರವಾರ ಮತ್ತೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದರು.
ಚಾಮುಂಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ತಮ್ಮ ರಾಜಕಾರಣಕ್ಕೆ ನಾಡದೇವತೆ ಸನ್ನಿಧಿಯನ್ನು ಬಳಸಿಕೊಂಡಿದ್ದಕ್ಕೆ ವಿಷಾದ ವ್ಯಕ್ತಪಡಿಸಿ ತಾಯಿ ಚಾಮುಂಡೇಶ್ವರಿ ಹಾಗೂ ನಾಡಿನ ಜನತೆಯ ಕ್ಷಮೆ ಕೋರಿದರು.
ಗುರುವಾರದ ಘಟನೆ ಬಗ್ಗೆ ಹಲವು ಹಿರಿಯರು ರಾಜಕಾರಣದಲ್ಲಿ ಈ ರೀತಿ ನಡೆದುಕೊಳ್ಳಬಾರದು ಎಂದು ಕಿವಿಮಾತು ಹೇಳಿದ್ದರಿಂದ ತಪ್ಪಿನ ಅರಿವಾಗಿ ಮತ್ತೆ ದೇವಿಯ ಸನ್ನಿಧಿಗೆ ಬಂದು ಕ್ಷಮೆ ಕೋರಿದ್ದೇನೆ. ಇನ್ನು ಮುಂದೆ ಈ ವಿಚಾರವಾಗಿ ಮಾತನಾಡುವುದಿಲ್ಲ ಎಂದು ಶಪಥ ಮಾಡಿದರು.
ಆಣೆ-ಪ್ರಮಾಣದ ರಾಜಕೀಯಕ್ಕೆ ಚಾಮುಂಡೇಶ್ವರಿ ದೇವಿಯ ಸನ್ನಿಧಿಯನ್ನು ಬಳಸಿಕೊಂಡಿದ್ದು ತಪ್ಪಾಯಿತು ಎಂದ ಮಾಜಿ ಸಚಿವ ಸಾ.ರಾ.ಮಹೇಶ್ ತಪ್ಪೊಪ್ಪಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?