ಚಾಕು ತೋರಿಸಿ ಮೊಬೈಲ್ ಕಿತ್ತರು!
Team Udayavani, Dec 6, 2019, 6:42 PM IST
ಸಾಂದರ್ಭಿಕ ಚಿತ್ರ.
ಬೆಂಗಳೂರು:ಡ್ರಾಪ್ ಪಡೆಯುವ ನೆಪದಲ್ಲಿ ಬೈಕ್ನಲ್ಲಿ ಕುಳಿತ ದುಷ್ಕರ್ಮಿಯೊಬ್ಬ ಸ್ವಲ್ಪ ದೂರ ಹೋಗುತ್ತಿದ್ದಂತೆ ಬೈಕ್ ಸವಾರನಿಗೆ ಚಾಕುತೋರಿಸಿ ಹೆದರಿಸಿ ಬೈಕ್,ಮೊಬೈಲ್ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಜೀವನ್ ಭೀಮಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಈ ಕುರಿತು ಖಾಸಗಿ ಕಂಪೆನಿ ಉದ್ಯೋಗಿ ದೊಮ್ಮಲೂರಿನ ಪ್ರವೀಣ್ ಸಿ.ಎಂ ಎಂಬುವವರು ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನ.30ರಂದು ರಾತ್ರಿ 12 ಗಂಟೆ ಸುಮಾರಿಗೆ ಕೆಲಸ ಮುಗಿಸಿಕೊಂಡು ತಮ್ಮ ಬೈಕ್ನಲ್ಲಿ ಮನೆಗೆ ತೆರಳುತ್ತಿದ್ದರು. ಮಾರ್ಗಮಧ್ಯೆ ಧೂಪನಹಳ್ಳಿ ಬಸ್ನಿಲ್ದಾಣದಲ್ಲಿ ನಿಂತಿದ್ದ ಅಪರಿಚಿತ ವ್ಯಕ್ತಿ ಕೈ ಅಡ್ಡ ಹಾಕಿದ್ದು ಇಸ್ಲಾಂಪುರಕ್ಕೆ ಡ್ರಾಪ್ ನೀಡುವಂತೆ ಮನವಿ ಕೇಳಿಕೊಂಡಿದ್ದಾನೆ.
ಆತನ ಮಾತನ್ನು ನಂಬಿದ ಪ್ರವೀಣ್ ಬೈಕ್ನಲ್ಲಿ ಕುಳ್ಳಿರಿಸಿಕೊಂಡಿದ್ದಾರೆ. ನಲ್ಲೂರು ಪುರಂ ಸರ್ಕಾರಿ ಶಾಲೆಯ ಸಮೀಪ ಬಂದಾಗ ಮೂತ್ರವಿಸರ್ಜನೆಗೆಂದು ಪ್ರವೀಣ್ ಬೈಕ್ ನಿಲ್ಲಿಸಿದ್ದಾರೆ.
ಈ ವೇಳೆ ಚಾಕು ತೋರಿಸಿ ಕೊಲ್ಲುವುದಾಗಿ ಹೆದರಿಸಿದ ದುಷ್ಕರ್ಮಿ, ಅವರ ಬಳಿಯಿದ್ದ ಮೊಬೈಲ್, ಬ್ಯಾಂಕ್ ಡೆಬಿಟ್ಕಾರ್ಡ್, ಕ್ರೆಡಿಟ್ ಕಾರ್ಡ್ ಕಿತ್ತುಕೊಂಡು ಬೈಕ್ ಸಮೇತ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ