ಹಿಂದಿನ ಜನ್ಮದಲ್ಲಿ ಕರ್ನಾಟಕದಲ್ಲೇ ಹುಟ್ಟಿದ್ದೆ, ನಾನೂ ಕನ್ನಡಿಗ: ಸೋನು ನಿಗಮ್
Team Udayavani, Feb 27, 2020, 10:55 AM IST
ಬೆಂಗಳೂರು: “ನಾನು ಹಿಂದಿನ ಜನ್ಮದಲ್ಲಿ ಇಲ್ಲಿಯೇ ಹುಟ್ಟಿದ್ದೆ, ಕನ್ನಡಿಗನೇ ಆಗಿದ್ದೆ ಎಂದು ಬಲವಾಗಿ ನಂಬಿದ್ದೆ” ಇದು ಖ್ಯಾತ ಗಾಯಕ ಸೋನು ನಿಗಮ್ ಹೇಳಿದ ಮಾತುಗಳು.
12ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಮಾತನಾಡಿದ ಸೋನು ನಿಗಮ್ ಈ ಅಭಿಮಾನದ ಮಾತುಗಳನ್ನಾಡಿದರು. ನಾನು ಹಿಂದಿನ ಜನ್ಮದಲ್ಲಿ ಕನ್ನಡಿಗನೇ ಆಗಿದ್ದೆ ಎಂದು ನಾನು ಬಲವಾಗಿ ನಂಬಿದ್ದೆ. ಯಾಕೆಂದರೆ ನಾನು ಹಿಂದಿ ಹಾಡು ಹಾಡಲು ಬಂದಿದ್ದೆ. ಆದರೆ ಹಿಂದಿಗಿಂತ ಒಳ್ಳೆಯ ಹಾಡುಗಳನ್ನು ಕನ್ನಡದಲ್ಲಿ ಹಾಡಿದ್ದೇನೆ. ಕನ್ನಡದ ಜನರ ಬಗ್ಗೆ ತುಂಬ ಗೌರವವಿದೆ. ನಿಮ್ಮ ಪ್ರೀತಿ ಪಡೆಯಲು ಹೆಮ್ಮೆ ಆಗುತ್ತಿದೆ ಎಂದು ಸೋನು ನಿಗಮ್ ಹೇಳಿದರು.
ನಾನು ದುಬೈ, ಆಸ್ಪ್ರೇಲಿಯಾ, ಅಮೇರಿಕಾ ಹೀಗೆ ಹಲವು ದೇಶಗಳಲ್ಲಿ ಕಾರ್ಯಕ್ರಮ ಕೊಡುತ್ತೇನೆ. ಯಾವ ದೇಶದಲ್ಲಿ ಸಂಗೀತ ಕಾರ್ಯಕ್ರಮ ನೀಡುತ್ತಿದ್ದರೂ ಅಲ್ಲಿ ಒಂದು ‘ಕನ್ನಡ’ ಎಂದು ಧ್ವನಿ ಕೇಳುತ್ತದೆ. ಆಗ ನಾನು ‘ಅನುಸುತ್ತಿದೆ ಯಾಕೋ ಇಂದು’ ಎಂದು ಹಾಡುತ್ತೇನೆ ಎಂದರು. ಇಷ್ಟೇ ಅಲ್ಲದೆ ವೇದಿಕೆಯಲ್ಲಿ ಸೋನು ನಿಗಮ್ ಮುಂಗಾರು ಮಳೆ ಚಿತ್ರದ ಅನಿಸುತ್ತಿದೆ ಯಾಕೋ ಇಂದು’ ಹಾಡನ್ನು ಹಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…