ಶ್ರೀಲಂಕಾ ಸ್ಪೋಟ ಪ್ರಕರಣ : 40 ಶಂಕಿತರ ಬಂಧನ
ಸಾವಿನ ಸಂಖ್ಯೆ 310ಕ್ಕೆ ಏರಿಕೆ ; ಗಾಯಾಳುಗಳಲ್ಲಿ ಹಲವರ ಸ್ಥಿತಿ ಇನ್ನೂ ಗಂಭೀರ
Team Udayavani, Apr 23, 2019, 12:22 PM IST
ದ್ವೀಪರಾಷ್ಟ್ರದಲ್ಲಿ ಇದೀಗ ಎಲ್ಲೆಲ್ಲೂ ದುಗುಡ, ದುಃಖ, ನೋವು ತುಂಬಿದ ಮುಖಗಳೇ ಕಾಣಿಸುತ್ತಿವೆ.
ಕೊಲಂಬೋ: ಈಸ್ಟರ್ ರವಿವಾರ ಶ್ರೀಲಂಕಾ ದ್ವೀಪರಾಷ್ಟ್ರದ ರಾಜಧಾನಿ ಕೊಲಂಬೋದ ವಿವಿಧೆಡೆಗಳಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಇದುವರೆಗೆ ಮೃತಪಟ್ಟವರ ಸಂಖ್ಯೆ 310ಕ್ಕೆ ಏರಿಕೆಯಾಗಿದೆ. ಘಟನೆಗೆ ಸಂಬಂಧಿಸಿದಂತೆ 40 ಜನ ಶಂಕಿತರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ದೇಶವನ್ನೇ ತಲ್ಲಣಗೊಳಿಸಿದ ಈ ದುರಂತ ಘಟನೆಯ ಬಳಿಕ ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನೆ ಅವರು ದೇಶಾದ್ಯಂತ ತುರ್ತುಸ್ಥಿತಿ ಘೋಷಿಸಿದ್ದು ದೇಶದ ಮಿಲಿಟರಿಗೆ ತಾತ್ಕಾಲಿಕ ಪೊಲೀಸ್ ಅಧಿಕಾರವನ್ನು ನೀಡಲಾಗಿದೆ. ಕೆಲವೊಂದು ಸಾಮಾಜಿಕ ಜಾಲತಾಣ ಸೈಟ್ ಗಳನ್ನೂ ಮುಚ್ಚಲಾಗಿದೆ. ರಾಷ್ಟ್ರ ರಾಜಧಾನಿಯ ಜನನಿಬಿಡ ಪ್ರದೇಶಗಳಲ್ಲಿ ಸಶಸ್ತ್ರ ಯೋಧರು ಪಥಸಂಚಲನ ನಡೆಸುತ್ತಿದ್ದಾರೆ. ಕರ್ಫ್ಯೂ ಸ್ಥಿತಿಯನ್ನು ಎರಡನೇ ದಿನಕ್ಕೆ ಮುಂದುವರೆಸಲಾಗಿದೆ.
2009ರಲ್ಲಿ ನಾಗರಿಕ ಯುದ್ಧಕ್ಕೆ ಅಂತ್ಯ ಹಾಡಿದ್ದ ಬಳಿಕ ಮೊನ್ನೆ ರವಿವಾರ ನಡೆದ ಈ ಆತ್ಮಾಹುತಿ ಬಾಂಬ್ ದಾಳಿಗಳೇ ದ್ವೀಪರಾಷ್ಟ್ರದಲ್ಲಿ ಸಂಭವಿಸಿದ ಅತೀದೊಡ್ಡ ದುರಂತವಾಗಿದೆ. ಇನ್ನು ಸೋಮವಾರದಂದು ಕೊಲಂಬೋದ ಪ್ರಮುಖ ಬಸ್ ನಿಲ್ದಾಣವೊಂದರಲ್ಲಿ 87 ಬಾಂಬ್ ಡಿಟೋನೇಟರ್ ಗಳು ಪತ್ತೆಯಾಗಿದ್ದು ಇನ್ನಷ್ಟು ಆತಂಕಕ್ಕೆ ಕಾರಣವಾಗಿತ್ತು.
ಈ ಭೀಕರ ಬಾಂಬ್ ಸ್ಪೋಟದಲ್ಲಿ ಎಂಟು ಭಾರತೀಯರೂ ಸೇರಿದಂತೆ 31 ವಿದೇಶಿ ನಾಗರಿಕರು ಸಾವಿಗೀಡಾಗಿದ್ದಾರೆ. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್