ಇವಿಎಂ ವಿಶ್ವಾಸಾರ್ಹತೆ ಪ್ರಶ್ನಿಸಿದವರಿಗೆ ತೇಜಸ್ವಿ ಸೂರ್ಯ ಚಾಲೆಂಜ್
Team Udayavani, May 21, 2019, 10:31 AM IST
ಬೆಂಗಳೂರು: ಲೋಕಸಭೆ ಚುನಾವಣೆ ಮತದಾನೋತ್ತರ ಸಮೀಕ್ಷೆಗಳ ನಿಖರತೆ ಬಗ್ಗೆ ಅನುಮಾನ ವ್ಯಕ್ತ ಪಡಿಸಿರುವ ವಿಪಕ್ಷ ನಾಯಕರಿಗೆಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಯುವ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಬಹಿರಂಗ ಸವಾಲೆಸೆದಿದ್ದಾರೆ.
ಇವಿಎಂನ ವಿಶ್ವಾಸಾರ್ಹತೆ ಪ್ರಶ್ನಿಸಿದವರಿಗೆ ನನ್ನ ಸವಾಲು – ಇವಿಎಂಗಳ ಬಗ್ಗೆ ಪ್ರಶ್ನಿಸುವ ಮೊದಲು , ನೀವು ಪ್ರಶ್ನಿಸುತ್ತಿರುವ ಇದೇ ಇವಿಎಂಗಳ ಮೂಲಕ ಗೆದ್ದು ಬಂದಿರುವ ನಿಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ನೈತಿಕತೆ ಮತ್ತು ಧೈರ್ಯವನ್ನು ತೋರುತ್ತೀರಾ ಎಂದು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಹಾಗೂ ಜೆಡಿಎಸ್ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದವು. ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್, ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಸೇರಿದಂತೆ ಹಲವು ನಾಯಕರು ಸಮೀಕ್ಷೆಗಳನ್ನು ನಂಬಲು ಆಗುವುದಿಲ್ಲ ಎಂದು ಹೇಳಿದ್ದರು.