ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಕಚೇರಿ ಮೇಲೆ ಎಸಿಬಿ ದಾಳಿ ಇಬ್ಬರು ಬಲೆಗೆ
Team Udayavani, Oct 17, 2019, 4:00 PM IST
ಚಿಕ್ಕಬಳ್ಳಾಪುರ: ಭೂ ವರ್ತನೆಗೊಂಡ ನಿವೇಶಗಳನ್ನು ಬಿಡುಗಡೆ ಮಾಡಲು ನಗರಾಭಿವೃದ್ಧಿ ಪ್ರಾಧಿಕಾರದ ಇಬ್ಬರು ಸದಸ್ಯರು ಬರೋಬರಿ 3 ಲಕ್ಷ ರೂ. ಲಂಚ ಸ್ಪೀಕರಿಸುವ ವೇಳೆ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಬಂಧಿತರ ಪೈಕಿ ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿರುವ ಸಿವಿಲ್ ಇಂಜಿನಿಯರ್ ಹೆಚ್.ಆರ್.ಕೃಷ್ಣಪ್ಪ ಹಾಗೂ ಹಣ ಪಡೆಯುತ್ತಿದ್ದ ಅಚುತ್ ಕುಮಾರ್ ಎಂದು ಗುರುತಿಸಲಾಗಿದೆ.
ಬೆಂಗಳೂರಿನ ಹೆಗಡೆ ನಗರದ ನಿವಾಸಿ ರಾಮಾಂಜನಪ್ಪ ಎಂಬುವರು ಎಸಿಬಿಗೆ ಈ ಕುರಿತು ದೂರು ನೀಡಿದ್ದರು. ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಹೋಬಳಿಯ ಕುಪ್ಪಳ್ಳಿ ಸಮೀಪ ಮಾಡಲಾಗಿರುವ ಹೊಸ ಬಡಾಬಣೆಯಲ್ಲಿ ಈಗಾಗಲೇ ಶೇ.60 ನಿವೇಶನಗಳನ್ನು ಬಿಡುಗಡೆಗೊಳಿಸಿರುವ ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರ, ಉಳಿದ ಶೇ.40 ರಷ್ಡು ನಿವೇಶನಗಳ ಬಿಡುಗಡೆ ಮಾಡಲು ೮ ಲಕ್ಷಕ್ಕೆ ಬೇಡಿಕೆ ಇಟ್ಟಿದ್ದು ಗುರುವಾರ ಮದ್ಯಾಹ್ನ ಕೂಡಾದ ಸದಸ್ಯರಾಗಿರುವ ಹೆಚ್.ಆರ್.ಕೃಷ್ಣಪ್ಪ ಬೇಡಿಕೆಯಂತೆ ಮೊದಲ ಕಂತಾಗಿ ಅಚುತ್ ಕುಮಾರ್ ಕೂಡಾದ ಕಚೇರಿಯಲ್ಲಿ 3 ಲಕ್ಷ ಲಂಚ ಸ್ಪೀಕರಿಸುವ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಡಿವೈಎಸ್ಪಿ ವೆಂಕಟೇಶ್ ನಾಯ್ಡ ಮಾರ್ಗದರ್ಶನದಲ್ಲಿ ಸಿಪಿಐ ಲಕ್ಮೀದೇವಮ್ಮ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ