ಹೀರೋ, ಜೋಕರ್ ಯಾರೆಂಬುದನ್ನು ಮತದಾರರು ತೀರ್ಮಾನಿಸುತ್ತಾರೆ: ಬಿಜೆಪಿ ಶಾಸಕ
Team Udayavani, Apr 19, 2019, 11:43 AM IST
ಬೆಂಗಳೂರು : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಯಾವ ನಾಯಕ ಹೀರೋ ಯಾವ ನಾಯಕರು ಜೋಕರ್ ಎನ್ನುವುದನ್ನು ಮತದಾರರು ತೀರ್ಮಾನಿಸಲಿದ್ದಾರೆ ಎದು ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಬಾರಿಯ ಚುನಾವಣಾ ಫಲಿತಾಂಶಗಳು ಹೊರಬಿದ್ದಾಗ ಪ್ರಧಾನಿ ನರೇಂದ್ರ ಮೋದಿ ಅವರು ಹೀರೋ ಆಗಿ ಹೊರಹೊಮ್ಮಲಿದ್ದಾರೆ; ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಜೋಕರ್ ಗಳೆಂದು ಸಾಬೀತಾಗುತ್ತದೆ ಎಂದವರು ಮಾಧ್ಯಮಕ್ಕೆ ಹೇಳಿದರು.
ನೀವ್ಯಾಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಮತ್ತು ಸಿಎಂ ಕುಮಾರಸ್ವಾಮಿ ಅವರನ್ನು ತಮಾಷೆ ಮಾಡುತ್ತೀರಿ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರವಾಗಿ ಬೊಮ್ಮಾಯಿ ಅವರು, “ಅವರು (ರಾಹುಲ್ ಮತ್ತು ಕುಮಾರಸ್ವಾಮಿ) ತಮ್ಮ ನಡೆ-ನುಡಿಯಿಂದ ತಮ್ಮನ್ನು ತಾವೇ ಗೇಲಿ ಮಾಡಿಕೊಳ್ಳುತ್ತಿದ್ದಾರೆ. ಅವರ ಹಾವಭಾವಗಳಿಂದಲೂ ಇದು ಗೊತ್ತಾಗುತ್ತಿದೆ’ ಎಂದು ಹೇಳಿದರು.
ಬ್ರಿಟಿಷರು ಅನುಸರಿಸುತ್ತಿದ್ದ ಒಡೆದು ಆಳುವ ನೀತಿಯಯಂತೆ ಕಾಂಗ್ರೆಸ್ ಪಕ್ಷ ಲಿಂಗಾಯತರ ಧಾರ್ಮಿಕ ವಿಷಯವನ್ನು ಬಳಸಿಕೊಳ್ಳುತ್ತಿದೆ ಎಂದು ಬೊಮ್ಮಾಯಿ ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ