Live Updates;ಕರ್ನಾಟಕ ಮಿನಿ ಸಮರ-ಬಿಎಸ್ ಯಡಿಯೂರಪ್ಪ ಸರ್ಕಾರ ಭದ್ರ, ಕೈಗೆ ಮುಖಭಂಗ
Team Udayavani, Dec 9, 2019, 7:00 AM IST
ಬೆಂಗಳೂರು: ರಾಜ್ಯದ ಹದಿನೈದು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 12 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಭದ್ರವಾದಂತಾಗಿದೆ. ಕಾಂಗ್ರೆಸ್ ಕೇವಲ ಎರಡು ಕ್ಷೇತ್ರಗಳಲ್ಲಿ ಜಯ ಸಾಧಿಸುವ ಮೂಲಕ ತೀವ್ರ ಮುಖಭಂಗ ಅನುಭವಿಸಿದೆ. ಜೆಡಿಎಸ್ ಕೂಡಾ ಮೂರು ಕ್ಷೇತ್ರಗಳಲ್ಲಿ ಪರಾಜಯಗೊಂಡು ಹೀನಾಯ ಸೋಲು ಅನುಭವಿಸಿದೆ.ಚುನಾವಣೆ ನಡೆದ 15 ಕ್ಷೇತ್ರಗಳ ಫಲಿತಾಂಶದ ಕ್ಷಣ, ಕ್ಷಣದ ಮಾಹಿತಿ ಇಲ್ಲಿದೆ…