ಗ್ರಾಮಾಂತರ ಪ್ರದೇಶದಲ್ಲಿ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ


Team Udayavani, Aug 10, 2019, 12:38 PM IST

10-Naveen-2

ಮಹಾನಗರ: ಕೆಲವು ದಿನಗಳಿಂದ ದ.ಕ.ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಗ್ರಾಮಾಂತರ ಪ್ರದೇಶ ಗಳು ಭಾಗಶಃ ಜಲಾವೃತವಾಗಿವೆ.

ಉರುಳಿದ ವಿದ್ಯುತ್‌ ಕಂಬ
ಗುರುಪುರ: ಕೈಕಂಬ ವ್ಯಾಪ್ತಿಯ ಹಲವು ಕಡೆಗಳಲ್ಲಿ ತಂತಿಕಂಬಗಳು ಉರುಳಿ ಬಿದ್ದಿದ್ದು, ಮೆಸ್ಕಾಂ ಸಿಬಂದಿ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹಲವು ಭಾಗಗಳಲ್ಲಿ ವಿದ್ಯುತ್‌ ಸಮಸ್ಯೆ ಉಂಟಾ ಗಿದೆ.

ಮಳಲಿ ವ್ಯಾಪ್ತಿಯ ಒಸರ್‌ ಪಳ್ಳ ಎಂಬಲ್ಲಿ ವಿದ್ಯುತ್‌ ಕಂಬದ ಮೇಲೆ ಮರ ಉರುಳಿ ಬಿದ್ದಿದ್ದು, ಮೂರು ದಿನಗಳಿಂದ ಈ ಭಾಗದ ಜನರು ವಿದ್ಯುತ್‌ ಇಲ್ಲದೆ ಪರದಾಡುತ್ತಿದ್ದಾರೆ. ಇನ್ನು ಮಳಲಿಯ ಉಲ್ಲಾಸ್‌ ನಗರ ಬಳಿ ಈಚಲು ಮರ ಬುಡ ಸಮೇತ ಉರುಳಿ ವಿದ್ಯುತ್‌ ತಂತಿಯ ಮೇಲೆ ಬಿದ್ದಿದ್ದು, ಸ್ಥಳೀಯ ಯುವಕರೇ ಸೇರಿ ತೆರವು ಕಾರ್ಯ ನಡೆಸಿದ್ದಾರೆ.

ಕುಪ್ಪೆಪದವು ಸಮೀಪದ ಕುಳವೂರ್‌ ಗ್ರಾಮದ ನೆಲ್ಲಚ್ಚಿಲ್ ನಾರಾಯಣ ಪೂಜಾರಿ ಅವರ ಮನೆ ಮೇಲೆ ಬೃಹತ್‌ ಗಾತ್ರದ ಮರ ಉರುಳಿ ಬಿದ್ದು ಮನೆಯು ಸಂಪೂರ್ಣ ಹಾನಿಗೊಂಡು ಲಕ್ಷಾಂತರ ರೂ. ನಷ್ಟ ಉಂಟಾಗಿದೆ.

ಬಡಗ ಎಡಪದವು ಪಂ. ವ್ಯಾಪ್ತಿಯ ಲತ್ರೊಟ್ಟು ಸೋಮಯ್ಯ ಎಂಬ ವರ ಮನೆ ಯಶೀಟುಗಳು ಗಾಳಿಗೆ ಹಾರಿ ಹೋಗಿದ್ದು, ಸುಮಾರು 50 ಸಾವಿರ ರೂ. ನಷ್ಟ ಉಂಟಾಗಿದೆ. ಕುಪ್ಪೆಪದವು ಆಚಾರಿಜೋರ ಆಶ್ರಫ್‌ ಅವರ ಮನೆ ಸಮೀಪ ವಿದ್ಯುತ್‌ ತಂತಿಗಳು ತುಂಡಾಗಿ ಬಿದ್ದಿರುವುದು.ಅದೇ ರೀತಿ ಸರಕಾರಿ ಶಾಲೆ ಮಳಲಿಯ ತಡೆಗೋಡೆ ಕುಸಿದು ಬಿದ್ದಿದ್ದು, ಮುಂದೆ ಇನ್ನಷ್ಟು ಕುಸಿಯುವ ಭೀತಿ ಇದೆ.

ನೀರಿನ ಮಟ್ಟ ಏರಿಕೆ
ಪೊಳಲಿ: ಇಲ್ಲಿನ ಫಲ್ಗುಣಿ ನದಿಯಲ್ಲಿ ನೀರಿನ ಮಟ್ಟ ಏರಿದ್ದು, ಅಪಾಯದ ಮಟ್ಟ ತಲುಪುತ್ತಿದೆ. ಇದೇ ರೀತಿ ಮಳೆ ಮುಂದು ವರಿದರೆ ತಗ್ಗು ಪ್ರದೇಶ ಜಲಾವೃತಗೊಳ್ಳುವ ಭೀತಿ ಎದುರಾಗಿದೆ.

ಆಡ್ಡೂರು ಸಮೀಪ ಫಲ್ಗುಣಿ ನದಿಗೆ ನಿರ್ಮಿಸಿರುವ ಸೇತುವೆ ಸಮೀಪ ನೀರಿನ ಪ್ರಮಾಣ ಏರಿದ್ದು, ಇಲ್ಲಿನ ಪ್ರದೇಶ ಗಳು ಜಲಾವೃತಗೊಳ್ಳುವ ಸಾಧ್ಯತೆ ಇದೆ. ಇಲ್ಲಿ ಪ್ರತಿವರ್ಷ ನೆರೆಹಾವಳಿ ಉಂಟಾಗುತ್ತಿರು ವುದು ಸಾಮಾನ್ಯವಾಗಿದೆ. ಇಲ್ಲಿನ ಅಡಿಕೆ ತೋಟ, ಗದ್ದೆಗಳು ನೀರಿನ ಪ್ರವಾಹಕ್ಕೆ ಕೊಚ್ಚಿ ಹೋಗುವ ಭೀತಿ ಇದೆ.

ಇದೇ ಪರಿ ಸ್ಥಿತಿ ಗುರುಪುರದಲ್ಲೂ ಎದುರಾಗಿದ್ದು, ಇಲ್ಲಿನ ತಗ್ಗು ಪ್ರದೇಶಗಳಿಗೂ ನೆರೆಭೀತಿ ಉಂಟಾಗಿದೆ. ಇನ್ನು ಕಾಜಿಲ ಮಳಲಿ ರಸ್ತೆಯ ಸಾಧೂರು ಪಟ್ಲ ಎಂಬಲ್ಲಿ ನೆರೆ ಪರಿಸ್ಥಿತಿ ಉಂಟಾಗಿದ್ದು, ಬಯಲು ಪ್ರದೇಶಗಳಲ್ಲಿ ನೀರು ತುಂಬಿಕೊಂಡಿದೆ. ಒಟ್ಟಾರೆ ಮಳೆ ಇದೇ ರೀತಿ ಮುಂದುವರಿದರೆ ಅಪಾಯ ಉಂಟಾಗುವ ಸಾಧ್ಯತೆ ಇದ್ದು, ಜಿಲ್ಲಾ ಡಳಿತ ಮುಂಜಾಗ್ರತೆ ವಹಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಉಳ್ಳಾಲ: ನೆರೆಭೀತಿ
ಉಳ್ಳಾಲ: ಉಳ್ಳಾಲ ಸಹಿತ ಸುತ್ತ ಮುತ್ತಲಿನ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗಿನಿಂದಲೇ ಧಾರಾಕಾರವಾಗಿ ಮಳೆ ಸುರಿದಿದ್ದು, ಉಳ್ಳಾಲ ವ್ಯಾಪ್ತಿಯ ನೇತ್ರಾವತಿ ತಟದಲ್ಲಿ ನದಿ ನೀರು ಅಪಾಯಮಟ್ಟದಲ್ಲಿ ಹರಿಯುತ್ತಿದ್ದು ನೆರೆಭೀತಿಯಲ್ಲಿದೆ.

ಬೆಳಗ್ಗೆ ಚೆಂಬುಗುಡ್ಡೆ ಸಮೀಪದ ಕೆರೆಬೈಲ್ ಬಳಿ ರಸ್ತೆಗೆ ಮರ ಬಿದ್ದು ತೊಕ್ಕೊಟ್ಟಿನಿಂದ ದೇರಳಕಟ್ಟೆ ಸಂಚರಿ ಸುವ ವಾಹನಗಳಳ ಸಂಚಾರದಲ್ಲಿ ವ್ಯತ್ಯಯ ವಾಗಿದ್ದು ಬಳಿಕ ಮರ ತೆರವು ಕಾರ್ಯ ನಡೆಯಿತು.ಉಳ್ಳಾಲದ ನೇತ್ರಾವತಿ ನದಿ ತಟಗಳಾದ ಕಲ್ಲಾಪು, ಆಡಂಕುದ್ರು, ಮುನ್ನೂರು ಉಳಿಯ, ಅಂಬ್ಲಿಮೊಗರು, ಹರೇಕಳ ಪಾವೂರು, ಸಜಿಪ ಪ್ರದೇಶಗಳಲ್ಲಿ ನೇತ್ರವಾತಿ ನದಿ ಅಪಾಯಮಟ್ಟದಲ್ಲಿ ಹರಿಯುತ್ತಿದ್ದು, ಶುಕ್ರವಾರ ಸಂಜೆ ವೇಳೆಗೆ ಕಲ್ಲಾಪು ಪ್ರದೇಶಕ್ಕೆ ತಹಶೀಲ್ದಾರ್‌ ಗುರುಪ್ರಸಾದ್‌ ಭೇಟಿ ನೀಡಿ ತಟದ ಜನರಿಗೆ ಎಚ್ಚರಿಕೆಯಲ್ಲಿರುವಂತೆ ಮಾಹಿತಿ ನೀಡಿದರು.

ತೊಕ್ಕೊಟ್ಟು ನೂತನ ಫ್ಲೈಓವರ್‌ನ ಮಧ್ಯ ಭಾಗದಲ್ಲಿ ಸಣ್ಣದೊಂದು ಬಿರುಕು ಕಂಡಿದ್ದು, ಕೆಲವು ಕಾಲ ಸಂಚಾರವನ್ನು ಸ್ಥಗಿತ ಗೊಳಿಸಲಾಯಿತು. ಸ್ಥಳಕ್ಕೆ ಎಂಜಿನಿಯರ್‌ಗಳು ಮತ್ತು ಪರಿಣತರು ಆಗಮಿಸಿ ಸಂಚಾರಕ್ಕೆ ಹಸರು ನಿಶಾನೆ ನೀಡಿದ ಬಳಿಕ ಸಂಚಾರ ಆರಂಭವಾಯಿತು.

ತಾರಿಪ್ಪಾಡಿ ಸೈಟ್‌ನ ಮಾರ್ಟಿನ್‌ ಪೆರಾವೋ ಎಂಬವರ ಮನೆಗೆ ಮರವೊಂದು ಉರುಳಿ ಬಿದ್ದ ಪರಿಣಾಮ ಅಪಾರ ಹಾನಿ ಸಂಭವಿಸಿದೆ. ಘಟನೆಯಲ್ಲಿ ಅದೃಷ್ಟವಶಾತ್‌ ಯಾರಿಗೂ ಗಾಯವಾಗಿಲ್ಲ. ನಡುಪದವು ಕಲ್ಲುಗುಂಡಿಯ ಖಾದರ್‌ ಅವರ ಮನೆ ಬಳಿಯ ಮರವೊಂದು ವಿದ್ಯುತ್‌ ತಂತಿಗೆ ಉರುಳಿ ಬಿದ್ದ ಪರಿಣಾಮ ನಾಲ್ಕು ವಿದ್ಯುತ್‌ ಕಂಬಗಳು ಧರೆಗುರಳಿದೆ. ಸುಧಾಕರ್‌ ಅವರ ಮನೆ ಸಮೀಪದ ಹಲಸಿನ ಮರವೊಂದು ರಾತ್ರಿ ಗಾಳಿಗೆ ಮುರಿದು ಬಿದ್ದಿದೆ. ಪಟ್ಟೋರಿಯ ಶ್ರೀ ನಾಗಬ್ರಹ್ಮ ಉಳ್ಳಾಲ್ತಿ ದೈವಸ್ಥಾನದ ಮುಂಭಾಗದ ಆವರಣ ಗೋಡೆ ಕುಸಿದು ಬಿದ್ದು ಹಾನಿ ಸಂಭವಿಸಿದೆ. ಕೊಣಾಜೆ ದೊಡ್ಡುಗುಳಿಯ ಗೋಪಾಲ್ ಅವರ ಮನೆ ಸಮೀಪದ ಗುಡ್ಡದ ಮಣ್ಣು ಕುಸಿದು ಮನೆಗೆ ಹಾನಿ ಸಂಭವಿಸಿದೆ.

ಕೋಟೆಕಾರು ಪ. ಪಂ. ಸದಸ್ಯ ಅಹ್ಮದ್‌ ಬಾವ ಅವರ ಅಜ್ಜಿನಡ್ಕದಲ್ಲಿರುವ ಮನೆಯ ಹಿಂಭಾಗದಲ್ಲಿದ್ದ ತೆರೆದ ಬಾವಿ ಸಂಪೂರ್ಣ ಕುಸಿದು ಬಿದ್ದಿದೆ. ಬಾವಿಯಲ್ಲಿ ಕಲ್ಲು ಮಣ್ಣು ತುಂಬಿ ಸಂಪೂರ್ಣ ಮುಚ್ಚಲ್ಪಟ್ಟು ಅಪಾರ ನಷ್ಟವುಂಟಾಗಿದ್ದಲ್ಲದೆ, ಮನೆಮಂದಿಯಲ್ಲಿ ಆತಂಕಕ್ಕೂ ಕಾರಣವಾಗಿದೆ. ಕೋಟೆಕಾರು ಪ.ಪಂ.ವ್ಯಾಪ್ತಿಯ ಬಗಂಬಿಲದಿಂದ ಪಾನೀರ್‌ವರೆಗೆ 11ವಿದ್ಯುತ್‌ ಕಂಬಗಳು ನೆಲಕ್ಕುರುಳಿವೆ. ಮೆಸ್ಕಾಂ ಸಿಬಂದಿ ದುರಸ್ತಿ ಕಾರ್ಯ ನಡೆಸಿದ್ದಾರೆ. ಇರಾ ಕುಂಡಾವು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಆವರಣ ಗೋಡೆ ಕುಸಿದು ಬಿದ್ದಿದ್ದು, ಶಾಸಕ ಯು.ಟಿ. ಖಾದರ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.