130 ಇಂಗುಗುಂಡಿ ನಿರ್ಮಿಸಿದ ವಿದ್ಯಾರ್ಥಿನಿಯರು

ಕಾರ್ಮೆಲ್ ಪ್ರೌಢಶಾಲೆ: ಜಲಕ್ರಾಂತಿಗೆ ಮುನ್ನುಡಿ

Team Udayavani, Aug 5, 2019, 1:41 PM IST

5-AGUST-28

ಇಂದುಗುಂಡಿ ನಿರ್ಮಿಸಿದ ಬಿ.ಸಿ. ರೋಡ್‌ನ‌ ಮೊಡಂಕಾಪು ಕಾರ್ಮೆಲ್ ಬಾಲಿಕೆಯರ ಪ್ರೌಢಶಾಲಾ ವಿದ್ಯಾರ್ಥಿನಿಯರು.

ಬಂಟ್ವಾಳ: ಬೇಸಗೆಯಲ್ಲಿ ತಮ್ಮ ಮನೆಗಳಲ್ಲಿ ನೀರಿನ ಬವಣೆ ಬರಬಾರದು ಎಂಬ ನಿಟ್ಟಿನಲ್ಲಿ ಬಿ.ಸಿ. ರೋಡ್‌ನ‌ ಮೊಡಂಕಾಪು ಕಾರ್ಮೆಲ್ ಬಾಲಿಕೆಯರ ಪ್ರೌಢಶಾಲಾ ವಿದ್ಯಾರ್ಥಿನಿಯರು ಶಿಕ್ಷಕರ ಮಾರ್ಗದರ್ಶನದಿಂದ 130 ಇಂಗುಗುಂಡಿ ಮಾಡಿ ಜಲಕ್ರಾಂತಿಗೆ ಮುನ್ನುಡಿ ಬರೆದಿದ್ದಾರೆ.

ಶಿಕ್ಷಕ ರೋಶನ್‌ ಪಿಂಟೋ ಮಾರ್ಗದರ್ಶನ
ಶಾಲೆಯ ಹಸಿರು ಭವಿಷ್ಯ ಪರಿಸರ ಸಂಘದ ಮಾರ್ಗದರ್ಶಿ ಶಿಕ್ಷಕ ರೋಶನ್‌ ಪಿಂಟೋ ಮಾರ್ಗ ದರ್ಶನದಲ್ಲಿ ವಿದ್ಯಾರ್ಥಿನಿಯರು ತಮ್ಮ ಮನೆ ಪರಿಸರದಲ್ಲಿ ಇಂಗುಗುಂಡಿಗಳನ್ನು ಮಾಡಿದ್ದಾರೆ. ಎಲ್ಲ ವಿದ್ಯಾರ್ಥಿಗಳು ತಾವು ಮನೆಯಲ್ಲಿ ನಿರ್ಮಿಸಿರುವ ಇಂಗುಗುಂಡಿಗಳ ವರದಿ ನೀಡಿದ್ದು, ಈ ಮೂಲಕ ಒಟ್ಟು ಇಂಗುಗುಂಡಿಗಳ ಸಂಖ್ಯೆ ಲೆಕ್ಕ ಹಾಕಲಾಗಿದೆ. ಬೇಸಗೆಯಲ್ಲಿ ಹಲವು ವಿದ್ಯಾರ್ಥಿಗಳ ಮನೆಯವರು ನೀರಿನ ಬವಣೆ ಅನುಭವಿಸುತ್ತಿದ್ದು, ಭೂಮಿಗೆ ನೀರು ಕೊಟ್ಟಾಗಲೇ ನಾವು ಬದುಕಲು ಸಾಧ್ಯ ಎಂಬ ನಿಟ್ಟಿ ನಲ್ಲಿ ಶಿಕ್ಷಕರು ವಿದ್ಯಾರ್ಥಿನಿಯರಿಗೆ ಮಾರ್ಗದರ್ಶನ ನೀಡಿದ್ದರು.

ಮನೆಯ ಸುತ್ತಮುತ್ತ ಇಂಗುಗುಂಡಿ
ಶಾಲಾ ವಠಾರದಲ್ಲಿ ಸಾಕಷ್ಟು ಸ್ಥಳಾವಕಾಶ ಲಭ್ಯತೆ ಇಲ್ಲದ ಕಾರಣ ವಿದ್ಯಾರ್ಥಿನಿಯರು ಅವರ ಮನೆಯ ಸುತ್ತಮುತ್ತ ಇಂಗುಗುಂಡಿಗಳನ್ನು ನಿರ್ಮಿಸಿದ್ದಾರೆ.

ಕೆಲವು ವಿದ್ಯಾರ್ಥಿನಿಯರು ಹೆತ್ತವರ ಸಹಾಯ ಪಡೆದರೆ, ಇನ್ನು ಕೆಲವು ವಿದ್ಯಾರ್ಥಿನಿಯರು ಸ್ವತಃ ಪ್ರತೀ ದಿವಸ ಸ್ವಲ್ಪ ಸ್ವಲ್ಪ ಕೆಲಸ ಮಾಡಿ ಗುಂಡಿ ಪೂರ್ಣಗೊಳಿಸಿದ್ದಾರೆ. 3 ಅಡಿ ಉದ್ದ, 2 ಅಡಿ ಅಗಲ, 2 ಅಡಿ ಆಳದ ಗುಂಡಿ ನಿರ್ಮಿಸಿದ್ದಾರೆ.

ತಮ್ಮ ಮನೆ ಅಂಗಳ, ನೆರೆಮನೆ ಯವರ ಜಾಗ, ಮಾರ್ಗದ ಬದಿ, ಕಾಡಿನಲ್ಲಿ ಇಂಗುಗುಂಡಿ ನಿರ್ಮಿಸಿ ದ್ದಾರೆ. ವಿದ್ಯಾರ್ಥಿನಿ ರಚನಾ 9 ಇಂಗುಗುಂಡಿಗಳನ್ನು ಸ್ವತಃ ನಿರ್ಮಿ ಸಿದ್ದು, ಹರ್ಷಿತಾ ಹಾಗೂ ಆಯಿಷತ್‌ ಆನ್ಸೀಫಾ 7 ಇಂಗುಗುಂಡಿಗಳನ್ನು ನಿರ್ಮಿಸಿದ್ದಾರೆ. ಇತರ ವಿದ್ಯಾರ್ಥಿನಿಯರು ಮೂರು, ನಾಲ್ಕು ಇಂಗುಗುಂಡಿಗಳನ್ನು ನಿರ್ಮಿ ಸಿದ್ದಾರೆ. ಹೆತ್ತವರೂ ಅವರನ್ನು ಬೆಂಬಲಿಸಿದ್ದು, ಶಿಕ್ಷಕ ರೋಶನ್‌ ಪಿಂಟೋ ತಮ್ಮ ಮನೆಯಲ್ಲಿ ಕೊಳವೆ ಬಾವಿಗೆ ಜಲ ಮರುಪೂರಣ ಮಾಡಿ ಅದರ ಪ್ರಯೋಜನ ಪಡೆದಿದ್ದಾರೆ ಹಾಗೂ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದ್ದಾರೆ.

ಜಲಸಂರಕ್ಷಣೆ ಸಾಧ್ಯ

9 ಇಂಗುಗುಂಡಿಗಳನ್ನು 3 ದಿನಗಳಲ್ಲಿ ಗುಡ್ಡ ಪ್ರದೇಶದಲ್ಲಿ ನಿರ್ಮಿಸಿದ್ದೇನೆ. ನೀರಿನ ಸಂರಕ್ಷಣೆ ಮಾಡಲು ವಿದ್ಯಾರ್ಥಿಗಳಾದ ನಮ್ಮಿಂದ ಸಾಧ್ಯವಿದೆ. ನನ್ನ ಕೆಲಸದಿಂದ ನನ್ನ ಮನೆಯವರಿಗೆ, ನೆರೆಹೊರೆಯವರಿಗೆ ಪ್ರೇರಣೆಯಾಗಿದೆ. ನನ್ನ ಅಕ್ಕಂದಿರೂ ಇಂಗುಗುಂಡಿಗಳನ್ನು ನಿರ್ಮಿಸಿದ್ದಾರೆ.
ರಚನಾ, ವಿದ್ಯಾರ್ಥಿನಿ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.