ಕಿಞ್ಞಣ್ಣ ರೈ 106ನೇ ಜನ್ಮದಿನಾಚರಣೆ : ಕಯ್ಯಾರರ ಕುಟುಂಬಕ್ಕೆ ಕೋವಿಡ್ ಕಿಟ್ ವಿತರಣೆ


Team Udayavani, Jun 8, 2021, 4:20 PM IST

fಗದಹಸಜಅಸದಹ್ಗ

ಬದಿಯಡ್ಕ :  ಗಡಿನಾಡ ಸಾಹಿತ್ಯ-ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು ಕಲ್ಕೂರ ಪ್ರತಿಷ್ಠಾನ ಮಂಗಳೂರು ಹಾಗೂ ಕೈಯಾರರ ಕುಟುಂಬದ ಸಂಯುಕ್ತಾಶ್ರಯದಲ್ಲಿ ಕೈಯಾರರ ಕವಿತಾ ಕುಟೀರದಲ್ಲಿ ದಿವಂಗತ ಡಾಕ್ಟರ್ ನಾಡೋಜ ಕೈಯಾರ ರವರ 106ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು

ಕಾರ್ಯಕ್ರಮದಲ್ಲಿ ಕಲ್ಕೂರ ಪ್ರತಿಷ್ಠಾನದ ಪ್ರದೀಪ್ ಕುಮಾರ್ ಕಲ್ಕೂರ ಅವರು ಗೂಗಲ್ ಮೀಟ್ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಕನ್ನಡದ ಕಲಿ, ಮಹಾಕವಿ, ಕಾಸರಗೋಡಿನ ಗಟ್ಟಿದನಿ, ಶತಾಯಿಷಿ ಕಯ್ಯಾರ ಕಿಞ್ಞಣ್ಣ ರೈ ಯವರು ಸಾಹಿತ್ಯ, ಸಾಂಸ್ಕೃತಿಕ, ರಾಜಕೀಯ, ಮಾತ್ರವಲ್ಲದೆ ಭೂಮಿಯ ಒಡಲಲ್ಲೂ ನಲ್ಮೆಯ ಬೀಜ ಬಿತ್ತಿ ಪರಿಶ್ರಮದಿಂದಲೇ ಪ್ರತಿಫಲದ ಬೆಳಕ ಕಂಡವರು. ರೈತನಾಗಿ, ಸಾಹಿತಿಯಾಗಿ, ಪಂಚಾಯತ್ ಅಧ್ಯಕ್ಷರಾಗಿ, ಭಾಷೆಯ ಮೇಲಿನ ಅತೀವ ಪ್ರೀತಿ ಹಾಗೂ ಭಕ್ತಿಯಿಂದ ಭಾಷೆಯ ಉಳಿವಿಗಾಗಿ ಹೋರಾಡಿದ ಧೀಮಂತ ಹೋರಾಟಗಾರ ಎಂದು ಹೇಳಿದರು. ಮಾತ್ರವಲ್ಲದೆ ಪ್ರತಿ ಕನ್ನಡ ಶಾಲೆಗಳ ಶಿಕ್ಷಕರೂ ಕಯ್ಯಾರರನ್ನು ಮಕ್ಕಳಿಗೆ ಪರಿಚಯಿಸಿ ಅವರು ನಡೆದ ಹಾದಿಯಲ್ಲಿ ಮುನ್ನಡೆಯುವಂತೆ ಪ್ರೇರೇಪಿಸಬೇಕು ಎಂದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಅವರು ಗೂಗಲ್ ಮೀಟ್ ಮೂಲಕ ಮಾತನಾಡಿ ಕಯ್ಯಾರರು ದೇಶ ಕಂಡ ಮಹಾನ್ ಚೇತನ ಅವರ ಹುಟ್ಟುಹಬ್ಬ ಆಚರಿಸುವುದು ಮತ್ತು ಅವರ ದಾಖಲಾತಿಗಳನ್ನು ಕಾಪಾಡಿಕೊಳ್ಳುವುದು ನಮ್ಮ ಕರ್ತವ್ಯ ಅಲ್ಲದೆ ಅವರು ಪತ್ರಕರ್ತರಾಗಿದ್ದುಕೊಂಡು ಅವರ ಕೆಲಸಗಳು ನಮ್ಮಂತ ಪತ್ರಕರ್ತರಿಗೆ ಹೆಮ್ಮೆ ತರುವಂತದ್ದು ಎಂದು ಹೇಳಿದರು.

ಕರ್ನಾಟಕ ಜಾನಪದ ಪರಿಷತ್ ಗಡಿನಾಡ ಘಟಕದ ಅಧ್ಯಕ್ಷರಾದ ಎ ಆರ್ ಸುಬ್ಬಯ್ಯ ಕಟ್ಟೆ ಅಧ್ಯಕ್ಷತೆ ವಹಿಸಿದರು. ಗಡಿನಾಡ ಸಾಹಿತ್ಯ-ಸಾಂಸ್ಕೃತಿಕ ಅಕಾಡೆಮಿಯ ಪ್ರೊಫೆಸರ್ ಶ್ರೀನಾಥ್ ಕೈಯಾರರ ಜೀವನಗಾಥೆಯನ್ನು ನೆನಪಿಸಿದರು. ಕೈಯಾರರ ನೂರ ಆರನೇಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾಹಿನ್ ಕೇಳೋಟ್ ( ಬದಿಯಡ್ಕ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು) ಕುಂಬ್ಡಾಜೆ ಗ್ರಾಮ ಪಂಚಾಯತ್ ಸದಸ್ಯ ಹರೀಶ್ ಗೋಸಡ ಗಡಿನಾಡ ಸಾಹಿತ್ಯ-ಸಾಂಸ್ಕೃತಿಕ ಅಕಾಡೆಮಿಯ ಕಾರ್ಯದರ್ಶಿ ಅಖಿಲೇಶ್ ನಗುಮುಗ ಯಕ್ಷಗುರು ಜಯರಾಮ್ ಪಾಟಾಳಿ ಪಡುಮಲೆ.ಮಮ್ಮುಞ ಪಚ್ಚಂಬಲ್ಲ ಮುಂತಾದವರು ಶುಭಾಶಂಸನೆಗೈದರು ಕೋರೋನ ಈ ಕಾಲದಲ್ಲಿ ನಡೆದ ಈ ಸರಳ ಕಾರ್ಯಕ್ರಮದಲ್ಲಿ ವಸಂತ ಬಾರಡ್ಕ ಜೋತ್ಸ್ನಾ ಕಡಂದೇಲು ಚಿತ್ತರಂಜನ್ ಪ್ರದೀಪ್ ಕಡಂಬಾರ್ ಮುಂತಾದವರು ಕಯ್ಯಾರರ ಆಯ್ದ ಕವನಗಳನ್ನು ಹಾಡಿದರು

ಕಾರ್ಯಕ್ರಮದಲ್ಲಿ ಕಯ್ಯಾರರ ಪುತ್ರ ಪ್ರಸನ್ನಕುಮಾರ ಸ್ವಾಗತಿಸಿ ಕೃಷ್ಣ ಪ್ರದೀಪ ಆರತಿರೈ ಧನ್ಯವಾದ ಸಮರ್ಪಿಸಿದರು.ನಿರಂಜನ ರೈ ಪೆರಡಾಲ ಗುತ್ತು ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭದಲ್ಲಿ ಕೈಯಾರರ ಕುಟುಂಬದವರಿಂದ ಕೋವಿಡ್ ಕಿಟ್ ವಿತರಿಸಲಾಯಿತು

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.