25 ಮಂದಿ ಬಂಧನ, ಹಲವು ವಾಹನ ವಶ


Team Udayavani, Apr 17, 2018, 7:40 AM IST

16ksde7.jpg

ಕಾಸರಗೋಡು: ಜಮ್ಮು-ಕಾಶ್ಮೀರ ಕಥುವಾದಲ್ಲಿ 8ರ ಬಾಲಕಿಯ ಸಾಮೂಹಿಕ ಅತ್ಯಾಚಾರ ಘಟನೆಯನ್ನು ಪ್ರತಿಭಟಿಸಿ ಸೋಮವಾರ ಹರತಾಳ ಎಂಬ ರೀತಿಯಲ್ಲಿ ನಕಲಿ ಪ್ರಚಾರ ಮಾಡಿದ 25 ಮಂದಿಯನ್ನು ಬಂಧಿಸಿದ್ದಾಗಿ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಜಿ.ಸೈಮನ್‌ ಹೇಳಿದ್ದಾರೆ. 

ಹರತಾಳ ಆಹ್ವಾನಿಸಿದವರು ಹಿಂಸೆಯಲ್ಲಿ ತೊಡಗಿದಾಗ ಅವ‌ರ ಬೈಕ್‌ಗಳನ್ನು ಮತ್ತು ರಿಕ್ಷಾಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. 

ಸೋಮವಾರ ಕೇರಳ ಸ್ತಬ್ಧ ಗೊಳ್ಳಲಿದೆ ಎಂದೂ ರವಿವಾರ ರಾತ್ರಿ 12 ರಿಂದ ಸೋಮವಾರ ರಾತ್ರಿ 12 ಗಂಟೆಯ ವರೆಗೆ ಹರತಾಳ ಎಂದೂ ಸಾಮಾಜಿಕ ಜಾಲ ತಾಣಗಳಲ್ಲಿ ಕೆಲವು ಕಿಡಿಗೇಡಿಗಳು ಸಂದೇಶ ರವಾನಿಸಿದ್ದರು. ಕೆಲವರು ವಾಯಸ್‌ ಸಂದೇಶದಲ್ಲೂ ಹರತಾಳಕ್ಕೆ ಆಹ್ವಾನ ನೀಡಿದ್ದರು. ಇಂತಹ ಕಿಡಿಗೇಡಿಗಳು ಬಂಧಿತರಲ್ಲಿ ಒಳಗೊಂಡಿದ್ದಾರೆ. ಯಾವುದೇ ರಾಜಕೀಯ ಪಕ್ಷಗಳ, ಸಂಘಟನೆಗಳ ಬೆಂಬಲವಿಲ್ಲದೆ ಜನಪರ ಹರತಾಳಕ್ಕೆ ಸಹಕರಿಸಬೇಕೆಂದು ಸಾಮಾಜಿಕ ಜಾಲ ತಾಣದಲ್ಲಿ ಸಂದೇಶ ಹರಿಯಬಿಟ್ಟು ಸಾಮಾಜಿಕ ಜಾಲ ತಾಣದ ಶಕ್ತಿಯನ್ನು ಪ್ರದರ್ಶಿಸಬೇಕೆಂದು ನಕಲಿ ಸಂದೇಶದಲ್ಲಿ ಹೇಳಲಾಗಿದೆ. 

ಈ ಸಂದೇಶ ನಕಲಿ ಎಂದು ಅರಿಯದೆ ಹಲವರು ಫೇಸ್‌ಬುಕ್‌ನಲ್ಲೂ, ವಾಟ್ಸಫ್‌ನಲ್ಲೂ ಪ್ರಚಾರ ಮಾಡಿದ್ದಾರೆ. ಈ ನಕಲಿ ಸಂದೇಶವನ್ನು ಸೃಷ್ಟಿಸಿದ ನಾಲ್ವರನ್ನು ಕಾಸರಗೋಡು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.  ರವಿವಾರ ರಾತ್ರಿ 10.05 ಗಂಟೆಗೆ ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಉಪ್ಪಳ ಕುಕ್ಕಾರಿನ ಜನಪ್ರಿಯ ಬಸ್‌ ತಂಗುದಾಣ ಪರಿಸರದಲ್ಲಿ ನಾಲ್ವರ ತಂಡ ಕಲ್ಲೆಸೆದು ಹಾನಿಗೊಳಿಸಿದ್ದಾರೆ. ಈ ನಾಲ್ವರು ಸಿಸಿಟಿವಿ ಕೆಮರಾದಲ್ಲಿ ದಾಖಲಾಗಿದ್ದಾÃ ಇವರನ್ನು ಶೀಘ್ರದಲ್ಲೇ ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ. 

ಕಾಸರಗೋಡಿನಲ್ಲಿ ಪೊಲೀಸ್‌ ಬೆಂಗಾವಲಿನೊಂದಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳ ಸಹಿತ ಖಾಸಗಿ ವಾಹನಗಳು ಓಡಾಡಿವೆ. ಕೆಲವು ಅಂಗಡಿ, ಹೊಟೇಲ್‌ಗ‌ಳು ತೆರೆದಿವೆ. ಅಘೋಷಿತ ಹರತಾಳಕ್ಕೆ ಅನುಮತಿ ನೀಡಲಾಗದು ಎಂದು ಪೊಲೀಸರು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಸಾಮಾಜಿಕ ಜಾಲ ತಾಣಗಳಲ್ಲಿ ನಕಲಿ ಸಂದೇಶಗಳನ್ನು ರವಾನಿಸಿ ಹರತಾಳ ನಡೆಲು ಅವಕಾಶ ನೀಡದು. ಫೇಸ್‌ಬುಕ್‌, ವಾಟ್ಸಫ್‌ಗಳನ್ನು ವೀಕ್ಷಿಸುತ್ತಿ ದ್ದೇವೆಂದು  ಪೊಲೀಸರು ತಿಳಿಸಿದ್ದಾರೆ. ಕಾಸರಗೋಡಿನಲ್ಲಿ ಹರತಾಳ  ಇಲ್ಲ ಎಂದು ಡಿವೈಎಸ್‌ಪಿ ಸುಕುಮಾರನ್‌ ಹೇಳಿದ್ದಾರೆ. 

ಟಾಪ್ ನ್ಯೂಸ್

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

T20: ಬಾಂಗ್ಲಾ ವಿರುದ್ಧ 7 ವಿಕೆಟ್‌ ಜಯ: ಭಾರತದ ವನಿತೆಯರ ಸರಣಿ ವಿಕ್ರಮ

T20 World Cup: 21 ವರ್ಷದ ರೋಹಿತ್‌ ನೇಪಾಲ ನಾಯಕ

T20 World Cup: 21 ವರ್ಷದ ರೋಹಿತ್‌ ನೇಪಾಲ ನಾಯಕ

T20 World Cup: ಯುಎಸ್‌ಎ, ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡಗಳಿಗೆ ಅಮುಲ್‌ ಪ್ರಾಯೋಜನೆ

T20 World Cup: ಯುಎಸ್‌ಎ, ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡಗಳಿಗೆ ಅಮುಲ್‌ ಪ್ರಾಯೋಜನೆ

1-wwqewqe

Yallapur;ಚುನಾವಣ ಸಿಬಂದಿಗಳ ತರಬೇತಿಯಲ್ಲಿ ಗದ್ದಲದ ವಾತಾವರಣ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.