ನಿಗೂಢವಾಗಿ ನಾಪತ್ತೆಯಾಗಿದ್ದ ಕಾಸರಗೋಡಿನ 8 ಮಂದಿ ಯೆಮನ್ನಲ್ಲಿ ಪತ್ತೆ
Team Udayavani, Dec 21, 2022, 4:55 PM IST
ಕಾಸರಗೋಡು: ಕಾಸರಗೋಡಿನಿಂದ ವಿದೇಶಕ್ಕೆ ಹೋಗಿ ಅಲ್ಲಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಎಂಟು ಮಂದಿಯನ್ನು ಕೊಲ್ಲಿ ರಾಷ್ಟ್ರವಾದ ಯೆಮನ್ನಲ್ಲಿ ಪತ್ತೆ ಹಚ್ಚಲಾಗಿದೆ. ತೃಕ್ಕರಿಪುರ ಪರಿಸರದ ಒಂದೇ ಕುಟುಂಬದ ಆರು ಮಂದಿ ಇತ್ತೀಚೆಗೆ ತೃಕ್ಕರಿಪುರದಿಂದ ದುಬೈಗೆ ಹೋಗಿದ್ದರು. ಅಲ್ಲಿಂದ ಅವರು ಕಳೆದ ಎರಡು ತಿಂಗಳಿನಿಂದ ನಿಗೂಢವಾಗಿ ನಾಪತ್ತೆಯಾಗಿದ್ದರು. ಈ ಬಗ್ಗೆ ಕೇಂದ್ರ ಗುಪ್ತಚರ ವಿಭಾಗ ನಡೆಸಿದ ಸಮಗ್ರ ತನಿಖೆಯಲ್ಲಿ ಈ ಎಂಟು ಮಂದಿಯನ್ನು ಯೆಮನ್ನಲ್ಲಿ ಪತ್ತೆಹಚ್ಚಲಾಗಿದೆ.
ಇದರ ನಿಗೂಢತೆಯನ್ನು ಬೇಧಿಸಲು ಕೇಂದ್ರ – ರಾಜ್ಯ ಹಾಗು ಗುಪ್ತಚರ ತನಿಖಾ ಇಂಟೆಲಿಜೆನ್ಸ್ ಬ್ಯೂರೋ(ಐಬಿ) ತಂಡಗಳು ತೃಕ್ಕರಿಪುರಕ್ಕೆ ತೆರಳಿ ಸಮಗ್ರ ತನಿಖೆ ಆರಂಭಿಸಿದೆ. ನಾಪತ್ತೆಯಾದವರ ಪೂರ್ಣ ಮಾಹಿತಿಗಳು, ಅವರ ಹಿನ್ನೆಲೆ, ಅವರು ವಿದೇಶಕ್ಕೆ ತೆರಳಲು ಹಾಗು ಅಲ್ಲಿಂದ ಯೆಮನ್ಗೆ ಹೋದ ಉದ್ದೇಶದ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ.
ಚಂದೇರ ಪೊಲೀಸ್ ಠಾಣೆ ವ್ಯಾಪ್ತಿಯಿಂದ ಮಹಿಳೆಯರೂ, ಮಕ್ಕಳು ಸಹಿತ ವರ್ಷಗಳ ಹಿಂದೆ ನಿಗೂಢ ರೀತಿಯಲ್ಲಿ 11 ಮಂದಿ ನಾಪತ್ತೆಯಾಗಿದ್ದರು. ಅವರು ಜಾಗತಿಕ ಭಯೋತ್ಪಾದಕ ಸಂಘಟನೆಯಾದ ಇಸ್ಲಾಮಿಕ್ ಸ್ಟೇಟ್(ಐ.ಎಸ್) ನ ಸಿರಿಯಾ ಮತ್ತು ಅಫ್ಘಾನಿಸ್ಥಾನದಲ್ಲಿನ ಶಿಬಿರದಲ್ಲಿರುವ ಬಗ್ಗೆ ತಿಳಿದು ಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್