ಕೇರಳದ 9 ಜಿಲ್ಲೆ ಬರ ಘೋಷಿತ: ಉಪ್ಪು ನೀರೇ ಗತಿ


Team Udayavani, Apr 2, 2018, 6:45 AM IST

01ksde6.jpg

ಕಾಸರಗೋಡು: ಕೇರಳದಲ್ಲಿ  ಮಳೆಯ ಕೊರತೆ, ಮೇಲ್ಮೈ ಮತ್ತು  ಅಂತರ್ಜಲದ ಕೊರತೆ ಹಾಗೂ ಉಪ್ಪು ನೀರಿನ ಒಳಹರಿವಿನಿಂದಾಗಿ ಕಾಸರಗೋಡು ಜಿಲ್ಲೆ  ಸೇರಿದಂತೆ ಒಂಬತ್ತು ಜಿಲ್ಲೆಗಳನ್ನು ಬರಪೀಡಿತ ಜಿಲ್ಲೆಗಳನ್ನಾಗಿ ರಾಜ್ಯ ಸರಕಾರವು ಘೋಷಿಸಿದೆ.

ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಕಾಸರಗೋಡು, ಕಣ್ಣೂರು, ಆಲಪ್ಪುಯ, ಇಡುಕ್ಕಿ, ಕಲ್ಲಿಕೋಟೆ, ಮಲಪ್ಪುರ, ಪಾಲಾಟ್‌, ತ್ರಿಶ್ಶೂರು, ವಯನಾಡು ಜಿಲ್ಲೆಗಳನ್ನು  ಬರಪೀಡಿತ ಜಿಲ್ಲೆಗಳನ್ನಾಗಿ ಘೋಷಿಸಲಾಗಿದೆ.

ಕೇಂದ್ರ ಹವಾಮಾನ ಇಲಾಖೆಯ ಪ್ರಕಾರ 2017ರ ಅಕ್ಟೋಬರ್‌ – ಡಿಸೆಂಬರ್‌ ತಿಂಗಳಲ್ಲಿ  ಈಶಾನ್ಯ ಮಾನ್ಸೂನ್‌ ಅವಧಿಯಲ್ಲಿ ಮಳೆಯ ಕೊರತೆ ತೀವ್ರವಾಗಿ ಉಂಟಾಗಿತ್ತು. ಇತ್ತೀಚೆಗೆ ಸುರಿದ ಅಕಾಲಿಕ ಮಳೆಯೂ ಅಂತರ್ಜಲ ಹೆಚ್ಚಿಸುವಲ್ಲಿ ಪ್ರಯೋಜನವಾಗಲಿಲ್ಲ. ಬರಗಾಲ ಎದುರಿಸುತ್ತಿರುವ ಹಿನ್ನೆಲೆಯಲ್ಲಿ  ಈ ಜಿಲ್ಲೆಗಳಲ್ಲಿ  ಕುಡಿಯುವ ನೀರು ವಿತರಣೆಗಾಗಿ ತುರ್ತು ಕ್ರಮ ತೆಗೆದುಕೊಳ್ಳಲು ಆದೇಶಿಸಲಾಗಿದೆ. ಆಯಾ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕಂದಾಯ ಅಧಿಕಾರಿಗಳ ಸಭೆ ಕರೆದು ಟ್ಯಾಂಕ್‌ಗಳಲ್ಲಿ ನೀರು ಸರಬರಾಜು ಹಾಗೂ ಬರಪೀಡಿತ ಪ್ರದೇಶಗಳಲ್ಲಿ  ಕಿಯೋಸ್ಕ್ಗಳಲ್ಲಿ  ನೀರು ತುಂಬಿಸುವ ಯೋಜನೆಯನ್ನು  ಹಾಕಿಕೊಳ್ಳಲಾಗುವುದು.

ಕುಡಿಯುವ ನೀರು ವಿತರಣೆಗಾಗಿ ರಾಜ್ಯ ವಿಪತ್ತು  ಪರಿಹಾರ ಪ್ರಾಧಿಕಾರ ಮೂಲಕ ಹಣವನ್ನು  ಬಳಸಿಕೊಳ್ಳ ಹುದು. ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ  ಪ್ರಸ್ತುತ ಬರ ಇಲ್ಲ. ಕುಡಿಯುವ ನೀರು ಸಮಸ್ಯೆಯೂ ಇಲ್ಲ. ಆದರೆ ಮಲೆನಾಡು ಪ್ರದೇಶಗಳಲ್ಲಿ,  ಪ್ರಧಾನ ಜಲಮೂಲಗಳಲ್ಲಿ  ನೀರಿನ ಹರಿವು ಕಡಿಮೆಯಾಗಿದೆ ಮತ್ತು  ಈ ಮೂಲಕ ಕುಡಿಯುವ ನೀರು ಸಂಗ್ರಹಕ್ಕೆ ಸಮಸ್ಯೆ ಉಂಟಾಗುವ ಸಾಧ್ಯತೆ ಇರುವುದರಿಂದ ಇಡುಕ್ಕಿ ಜಿಲ್ಲೆಯನ್ನು  ಬರಪೀಡಿತ ಜಿಲ್ಲೆಯನ್ನಾಗಿ ಘೋಷಿಸಲಾಗಿದೆ.

ಮುಳಿಯಾರಿನ ಬಾವಿಕ್ಕೆರೆ ಪಂಪ್‌ಹೌಸ್‌ನಿಂದ ಸುಮಾರು 16 ಕಿ.ಮೀ. ದೂರದ ಕಾಸರಗೋಡಿಗೆ ನೀರು ಸರಬರಾಜು ಮಾಡಲು ಅಳವಡಿಸಿರುವ ಹಳೆಯ ಕಾಲದ ಕಬ್ಬಿಣದ ಪೈಪ್‌ಗ್ಳು ಅಲ್ಲಲ್ಲಿ  ಒಡೆದಿರುವುದರಿಂದ ಲಕ್ಷಾಂತರ ಲೀಟರ್‌ ನೀರು ಪೋಲಾಗುತ್ತಿದೆ. ಹಳೆಯ ಪೈಪ್‌ಗ್ಳನ್ನು  ಬದಲಾಯಿಸಿ ಹೊಸ ಪೈಪ್‌ಗ್ಳನ್ನು  ಅಳವಡಿಸುವ ಯೋಜನೆಗಾಗಿ ಕಾಮಗಾರಿ ಆರಂಭ ಗೊಂಡರೂ, ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಭೂಸ್ವಾಧೀನ ಸಾಧ್ಯತೆ ಇರುವುದರಿಂದ ರಸ್ತೆ  ಬದಿಯಲ್ಲಿ  ಪೈಪ್‌ಗ್ಳನ್ನು  ಅಳವಡಿಸುವಲ್ಲಿ  ವಿಳಂಬ ಉಂಟಾಗಲಿದೆ.

ಕಳೆದ ವರ್ಷ ಜಿಲ್ಲೆಯಲ್ಲಿ  ಮಾರ್ಚ್‌ ಹಾಗೂ ಎಪ್ರಿಲ್‌ ತಿಂಗಳಲ್ಲಿ  ಉಂಟಾದ ಕುಡಿಯುವ ನೀರು ಸಮಸ್ಯೆಯನ್ನು  ಪರಿಹರಿಸಲು ಕೊನೆಯ ಕ್ಷಣದಲ್ಲಿ  ಪ್ರತಿ ಪಂಚಾಯತ್‌ನ ಬರಪೀಡಿತ ವಾರ್ಡ್‌ಗಳಲ್ಲಿ  ಕಿಯೋಸ್ಕ್ಗಳನ್ನು  ಸ್ಥಾಪಿಸಿ ನೀರು ವಿತರಿಸುವ ಯೋಜನೆ ಕೈಗೊಳ್ಳಲಾಗಿತ್ತು. ಜಿಲ್ಲೆಯ ಜನರು ಕೃಷಿಗಾಗಿ ಕೆರೆ, ಬಾವಿ, ಹೊಳೆಗಳನ್ನು  ಆಶ್ರಯಿಯುತ್ತಿದ್ದು, ಕುಡಿಯುವ ನೀರಿಗಾಗಿ ಕೊಳೆವೆ ಬಾವಿ ಮತ್ತು  ತೆರೆದ ಬಾವಿಗಳನ್ನು  ಬಳಸುತ್ತಿದ್ದಾರೆ. ಆದರೆ ಅಂತರ್ಜಲದ ಕೊರತೆ ಉಂಟಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ  ಮುಂದಿನ ದಿನಗಳಲ್ಲಿ  ಕುಡಿಯುವ ನೀರು ಸಮಸ್ಯೆ ತಲೆದೋರಲಿದೆ.

ಕಾಸರಗೋಡು: ಕುಡಿಯಲು ಉಪ್ಪುನೀರು  
ಚಂದ್ರಗಿರಿ ಹೊಳೆಯಲ್ಲಿ  ನೀರಿನ ಪ್ರಮಾಣ ಕಡಿಮೆಯಾಗುತ್ತಿರುವ ಹಿನ್ನೆಲೆ ಯಲ್ಲಿ  ಸಮುದ್ರದಿಂದ ಉಪ್ಪುನೀರು ಒಳಹರಿಯುವ ಸಾಧ್ಯತೆ ಹೆಚ್ಚಾಗಿದೆ. ಕಾಸರಗೋಡು ನಗರ ಮತ್ತು  ಆಸುಪಾಸಿನ ಪಂಚಾಯತ್‌ಗಳಿಗೆ ಜಲ ಮಂಡಳಿ ವತಿಯಿಂದ ಬಾವಿಕ್ಕೆರೆ ಪಂಪ್‌ ಹೌಸ್‌ ಮೂಲಕ ನೀರು ಪೂರೈಕೆಯಾಗುತ್ತಿದೆ. ಚಂದ್ರಗಿರಿ ಹೊಳೆಗೆ ಆಲೂರಿನಲ್ಲಿ  ನಿರ್ಮಿಸಿದ ತಡೆಗೋಡೆಯ ಮೂಲಕ ಉಪ್ಪುನೀರು ಸೇರುವುದರಿಂದ ನಗರಕ್ಕೆ ಉಪ್ಪುನೀರು ಮಿಶ್ರಿತ ಕುಡಿಯುವ ನೀರು ವಿತರಣೆಯಾಗುವ ಸಾಧ್ಯತೆ ಹೆಚ್ಚಾಗಿದೆ.

ಟಾಪ್ ನ್ಯೂಸ್

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.