Sulya: ಬ್ಯಾನರ್ ಹರಿದ ಪ್ರಕರಣ; ಆರೋಪಿಗಳನ್ನು ಕೂಡಲೇ ಬಂಧಿಸಲು ಒತ್ತಾಯಿಸಿ ಪ್ರತಿಭಟನೆ
ಅಯೋಧ್ಯೆ ಪ್ರತಿಷ್ಠೆ ಸಲುವಾಗಿ ಹಾಕಿದ ಬ್ಯಾನರ್ ಹರಿದ ಪ್ರಕರಣ
Team Udayavani, Jan 7, 2024, 12:03 PM IST
ಸುಳ್ಯ: ಅಯೋಧ್ಯೆ ಪ್ರತಿಷ್ಠೆ ಸಲುವಾಗಿ ಸುಳ್ಯ ನಗರದ ರಸ್ತೆ ಬದಿ ಹಾಕಿದ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳನ್ನು ಬಂಧಿಸಲು ವಿಫಲವಾದ ಪೊಲೀಸ್ ಇಲಾಖೆ ವಿರುದ್ಧ ಬೃಹತ್ ಪ್ರತಿಭಟನೆ ಸುಳ್ಯ ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಜ.7ರ ಭಾನುವಾರ ನಡೆಯಿತು.
ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ, ರಾಮ ಭಕ್ತರು ಹಾಕಿದ ಬ್ಯಾನರನ್ನು ಹರಿದು ಹಾಕಿ ರಾಮಂದಿರವನ್ನೇ ಕಟ್ ಮಾಡುವ ಉದ್ದೇಶ ಏನಿದೆ ಅವರಿಗೆ. ಕೃತ್ಯದ ಹಿಂದಿರುವವರ ಬಗ್ಗೆ ಸೂಕ್ತ ತನಿಖೆ ನಡೆಸಿ ಸಮಗ್ರ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಬೇಕು. ಶಾಂತಿ ಸುವ್ಯವಸ್ಥೆಗೆ ಕೈಜೋಡಿಸಬೇಕು. ಪೊಲೀಸ್ ಇಲಾಖೆ ಆರೋಪಿಗಳನ್ನು ಕೂಡಲೇ ಬಂಧಿಸಲಿ ಎಂದು ಆಗ್ರಹಿಸಿದರು.
ಬಿಜೆಪಿ ಸುಳ್ಯ ಮಂಡ ಅಧ್ಯಕ್ಷ ಹರೀಶ್ ಕಂಜಿಪಿಲಿ ಮಾತನಾಡಿ, ಹಿಂದುತ್ವಕ್ಕೆ ಧಕ್ಕೆ ಆದಾಗ ಹೋರಾಟ ನಡೆಸಿದ ಊರು ಸುಳ್ಯ. ಇದೀಗ ಮತ್ತೆ ಮತ್ತೆ ಹಿಂದೂಗಳನ್ನು ಕೆದಕುವ ಕೆಲಸ ನಡೆಯುತ್ತಿದೆ. ತಪ್ಪು ಯಾರು ಮಾಡಿದ್ದರು ಅವರನ್ನು ಹಿಂದೂ ಸಮಾಜ ಖಂಡಿಸುತ್ತದೆ. ಬ್ಯಾನರ್ ಹಾಕಿದನ್ನು ಹರಿದ ವಿರುದ್ಧ ಹಾಗೂ ಆರೋಪಿಗಳನ್ನು ಕೂಡಲೇ ಬಂಧಿಸಲು ಪ್ರತಿಭಟನೆ ನಡೆಸಲಾಗಿದೆ. ಮುಂದಿನ ಮೂರು ದಿನಗಳಲ್ಲಿ ಆರೋಪಿಗಳನ್ನು ಬಂಧಿಸದೇ ಇದ್ದಲ್ಲಿ ಮುಂದೆ ಸುಳ್ಯ ತಾಲೂಕು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತೇವೆ ಎಂದರು.
ನ.ಪಂ. ಮಾಜಿ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ಪ್ರಮುಖರಾದ ಎನ್.ಎ.ರಾಮಚಂದ್ರ, ಜಿ.ಜಿ.ನಾಯಕ್, ಲತೇಶ್ ಗುಂಡ್ಯ ಮಾತನಾಡಿ ಕೂಡಲೇ ಆರೋಪಿಗಳ ಪತ್ತೆಗೆ ಆಗ್ರಹಿಸಿದರು.
ತನಿಖೆ ಪ್ರಗತಿಯಲ್ಲಿದೆ. ಕೂಡಲೇ ಆರೋಪಿಗಳ ಬಂಧನವಾಗಲಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದರು. ಪೊಲೀಸ್ ಸಿಬ್ಬಂದಿಗಳು ಬಂದೋ ಬಸ್ತ್ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ