40 ದಿನಗಳ ರಜೆಯಲ್ಲಿ ತೆರಳಿದ ಮಲಯಾಳಿ ಅಧ್ಯಾಪಕಿ

ವಿದ್ಯಾರ್ಥಿಗಳು, ಹೆತ್ತವರಿಂದ ಪ್ರತಿಭಟನೆ

Team Udayavani, Jan 23, 2020, 6:35 AM IST

pratibatane

ಕಾಸರಗೋಡು: ಕನ್ನಡ ಭಾಷೆ ಅರಿಯದ ಮಲಯಾಳ ಅಧ್ಯಾಪಿಕೆಯನ್ನು ಹಿಂದಕ್ಕೆ ಕರೆಸಿಕೊಳ್ಳಬೇಕೆಂದು ಆಗ್ರಹಿಸಿ ಬೇಕಲ ಸರಕಾರಿ ಫಿಶರೀಸ್‌ ಹೈಯರ್‌ ಸೆಕೆಂಡರಿ ಶಾಲಾ ವಿದ್ಯಾರ್ಥಿಗಳು, ಹೆತ್ತವರು, ಪೋಷಕರು, ಕನ್ನಡಾಭಿಮಾನಿ ಗಳು, ಜನಪ್ರತಿನಿಧಿಗಳು ನಡೆಸಿದ ತೀವ್ರ ಹೋರಾಟದ ಫಲವಾಗಿ ಕೊನೆಗೂ ಮಲಯಾಳಿ ಅಧ್ಯಾಪಕಿ 40 ದಿನಗಳ ರಜೆಯಲ್ಲಿ ತೆರಳಿದ್ದಾರೆ.

ಈ ಅಧ್ಯಾಪಕಿಯನ್ನು ಹಿಂದಕ್ಕೆ ಕರೆಸಿ ಕೊಂಡು, ಕನ್ನಡ ಅರಿಯುವ ಅಧ್ಯಾಪಕರನ್ನು ನೇಮಿಸಬೇಕೆಂದು ವಿದ್ಯಾರ್ಥಿಗಳು ಹಾಗು ಹೆತ್ತವರು ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ|ಡಿ. ಸಜಿತ್‌ಬಾಬು ಅವರ ನಿರ್ದೇಶ ಪ್ರಕಾರ ಡಿಡಿಇ ಕೆ.ವಿ. ಪುಷ್ಪಾ ಅವರು ಕನ್ನಡ ಅರಿಯದ ಮಲಯಾಳ ಅಧ್ಯಾಪಕಿಯನ್ನು ಕರೆಸಿ ರಜೆಯಲ್ಲಿ ತೆರಳುವಂತೆಯೂ, ರಜಾ ದಿನಗಳಲ್ಲಿ ಶಿಕ್ಷಣ ಇಲಾಖೆ ನೀಡುವ ಕನ್ನಡ ಡಿಪ್ಲೋಮಾ ಕೋರ್ಸ್‌ ಪೂರ್ತಿಗೊಳಿಸಲು ನಿರ್ದೇಶಿಸಿದ್ದರು.

ಆದರೆ ಈ ಅಧ್ಯಾಪಕಿ ಮಂಗಳವಾರವೂ ಶಾಲೆಗೆ ಹಾಜರಾಗಿ ರಜೆಯಲ್ಲಿ ತೆರಳಲು ನಿರಾಕರಿಸಿದರು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು, ಹೆತ್ತವರು, ಪೋಷಕರು, ಕನ್ನಡಾಭಿಮಾನಿಗಳು, ಜಿಲ್ಲಾ ಪಂಚಾಯತ್‌ ಸ್ಥಾಯೀ ಸಮಿತಿ ಅಧ್ಯಕ್ಷ ಪಾದೂರು ಮೊಹಮ್ಮದ್‌, ಜಿಲ್ಲಾ ಪಂಚಾಯತ್‌ ಸದಸ್ಯ ನ್ಯಾಯವಾದಿ ಕೆ.ಶ್ರೀಕಾಂತ್‌, ಕನ್ನಡ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಭಾಸ್ಕರ ಕಾಸರಗೋಡು ಮೊದಲಾದವರ ನೇತೃತ್ವದಲ್ಲಿ ತೀವ್ರ ಪ್ರತಿಭಟನೆ ನಡೆಸಿದರು. ಇದರಿಂದ ಅಧ್ಯಾಪಕಿಗೆ ಬೇರೆ ದಾರಿಯಿಲ್ಲದೆ 40 ದಿನಗಳ ರಜೆಯಲ್ಲಿ ತೆರಳಿದ್ದಾರೆ.

ವಿದ್ಯಾರ್ಥಿಗಳ ಹೋರಾಟಕ್ಕೆ ಇದೀಗ ತಾತ್ಕಾಲಿಕ ಪರಿಹಾರವಾಗಿದೆ. ಶಾಶ್ವತ ಪರಿಹಾರ ಕಂಡುಕೊಳ್ಳಬೇಕಾಗಿರುವುದು ಅನಿವಾರ್ಯವಾಗಿದೆ. ಇಲ್ಲದಿದ್ದಲ್ಲಿ ಈ ಅಧ್ಯಾಪಕಿ ಮತ್ತೆ ಶಾಲೆಗೆ ಹಾಜರಾಗುವುದ ರಿಂದ ವಿದ್ಯಾರ್ಥಿಗಳು ಮತ್ತೆ ಸಮಸ್ಯೆಗೆ ತುತ್ತಾಗಲಿದ್ದಾರೆ.

ಅಧ್ಯಾಪಕಿ ರಜೆಯಲ್ಲಿ ತೆರಳದಿದ್ದರೆ ವಿದ್ಯಾರ್ಥಿಗಳನ್ನು, ಹೆತ್ತವರನ್ನು, ಪೋಷಕ ರನ್ನು, ಕನ್ನಡಾಭಿಮಾನಿಗಳನ್ನು ಒಗ್ಗೂಡಿಸಿ ಅನಿರ್ದಿಷ್ಟಾವಧಿ ಚಳವಳಿ ಹೂಡುವುದಾಗಿ ಪಾದೂರು ಮೊಹಮ್ಮದ್‌, ಕೆ. ಶ್ರೀಕಾಂತ್‌, ಭಾಸ್ಕರ ಕಾಸರಗೋಡು ಮತ್ತು ಹೆತ್ತವರು ಮುನ್ನೆಚ್ಚರಿಕೆಯನ್ನು ನೀಡಿದ್ದರು.

ಅಕ್ಟೋಬರ್‌ ತಿಂಗಳಲ್ಲಿ ನೇಮಕಗೊಂಡಿದ್ದ ಅಧ್ಯಾಪಕಿ ಬೇಕಲದ ಸರಕಾರಿ ಫಿಶರೀಸ್‌ ಹೈಯರ್‌ ಸೆಕೆಂಡರಿ ಶಾಲೆಗೆ ಹಾಜರಾಗಿದ್ದರು. ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಸೋಶ್ಯಲ್‌ ಸಯನ್ಸ್‌ (ಸಮಾಜ ವಿಜ್ಞಾನ) ಪಾಠ ಮಾಡಲು ಕನ್ನಡ ಭಾಷೆ ಅರಿಯದ ತಿರುವನಂತಪುರದ ಈ ಮಲಯಾಳ ಅಧ್ಯಾಪಕಿ ಹಾಜರಾದ ಹಿನ್ನೆಲೆಯಲ್ಲಿ ಈ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ರಜೆಯಲ್ಲಿ ತೆರಳಿದ್ದ ಅಧ್ಯಾಪಕಿ ಮತ್ತೆ ಕ್ರಿಸ್ಮಸ್‌ ರಜೆ ಕಳೆದು ಜ.14 ರಂದು ಹಾಜರಾಗಿದ್ದರು. ಅಧ್ಯಾಪಕಿಯ ವಾಪಸಾತಿಯನ್ನು ವಿದ್ಯಾರ್ಥಿಗಳು ಪ್ರತಿಭಟಿಸಿದ್ದರು.

ಅಧ್ಯಾಪಕಿ ಮೊಬೈಲ್‌ ನಲ್ಲೇ
ಪ್ರತಿಭಟನೆಗೆ ನೇತೃತ್ವ ನೀಡಿದ ಪ್ರಮುಖರು ಶಾಲಾ ಮುಖ್ಯೋಪಾಧ್ಯಾಯ ಅವರೊಂದಿಗೆ ಚರ್ಚಿಸುತ್ತಿದ್ದ ಸಂದರ್ಭದಲ್ಲಿ ಈ ಅಧ್ಯಾಪಕಿ ಮೊಬೈಲ್‌ ಫೋನ್‌ನಲ್ಲಿ ನಿರಂತರವಾಗಿ ಮಾತನಾಡುತ್ತಿದ್ದರು. ಚರ್ಚೆ ನಡೆಯುತ್ತಿರುವಾಗಲೂ ಗಮನ ನೀಡದೆ ಅಧ್ಯಾಪಕಿ ದುರಹಂಕಾರ ಪ್ರದರ್ಶಿಸಿದ್ದರು.

ಟಾಪ್ ನ್ಯೂಸ್

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.