40 ದಿನಗಳ ರಜೆಯಲ್ಲಿ ತೆರಳಿದ ಮಲಯಾಳಿ ಅಧ್ಯಾಪಕಿ

ವಿದ್ಯಾರ್ಥಿಗಳು, ಹೆತ್ತವರಿಂದ ಪ್ರತಿಭಟನೆ

Team Udayavani, Jan 23, 2020, 6:35 AM IST

pratibatane

ಕಾಸರಗೋಡು: ಕನ್ನಡ ಭಾಷೆ ಅರಿಯದ ಮಲಯಾಳ ಅಧ್ಯಾಪಿಕೆಯನ್ನು ಹಿಂದಕ್ಕೆ ಕರೆಸಿಕೊಳ್ಳಬೇಕೆಂದು ಆಗ್ರಹಿಸಿ ಬೇಕಲ ಸರಕಾರಿ ಫಿಶರೀಸ್‌ ಹೈಯರ್‌ ಸೆಕೆಂಡರಿ ಶಾಲಾ ವಿದ್ಯಾರ್ಥಿಗಳು, ಹೆತ್ತವರು, ಪೋಷಕರು, ಕನ್ನಡಾಭಿಮಾನಿ ಗಳು, ಜನಪ್ರತಿನಿಧಿಗಳು ನಡೆಸಿದ ತೀವ್ರ ಹೋರಾಟದ ಫಲವಾಗಿ ಕೊನೆಗೂ ಮಲಯಾಳಿ ಅಧ್ಯಾಪಕಿ 40 ದಿನಗಳ ರಜೆಯಲ್ಲಿ ತೆರಳಿದ್ದಾರೆ.

ಈ ಅಧ್ಯಾಪಕಿಯನ್ನು ಹಿಂದಕ್ಕೆ ಕರೆಸಿ ಕೊಂಡು, ಕನ್ನಡ ಅರಿಯುವ ಅಧ್ಯಾಪಕರನ್ನು ನೇಮಿಸಬೇಕೆಂದು ವಿದ್ಯಾರ್ಥಿಗಳು ಹಾಗು ಹೆತ್ತವರು ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ|ಡಿ. ಸಜಿತ್‌ಬಾಬು ಅವರ ನಿರ್ದೇಶ ಪ್ರಕಾರ ಡಿಡಿಇ ಕೆ.ವಿ. ಪುಷ್ಪಾ ಅವರು ಕನ್ನಡ ಅರಿಯದ ಮಲಯಾಳ ಅಧ್ಯಾಪಕಿಯನ್ನು ಕರೆಸಿ ರಜೆಯಲ್ಲಿ ತೆರಳುವಂತೆಯೂ, ರಜಾ ದಿನಗಳಲ್ಲಿ ಶಿಕ್ಷಣ ಇಲಾಖೆ ನೀಡುವ ಕನ್ನಡ ಡಿಪ್ಲೋಮಾ ಕೋರ್ಸ್‌ ಪೂರ್ತಿಗೊಳಿಸಲು ನಿರ್ದೇಶಿಸಿದ್ದರು.

ಆದರೆ ಈ ಅಧ್ಯಾಪಕಿ ಮಂಗಳವಾರವೂ ಶಾಲೆಗೆ ಹಾಜರಾಗಿ ರಜೆಯಲ್ಲಿ ತೆರಳಲು ನಿರಾಕರಿಸಿದರು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು, ಹೆತ್ತವರು, ಪೋಷಕರು, ಕನ್ನಡಾಭಿಮಾನಿಗಳು, ಜಿಲ್ಲಾ ಪಂಚಾಯತ್‌ ಸ್ಥಾಯೀ ಸಮಿತಿ ಅಧ್ಯಕ್ಷ ಪಾದೂರು ಮೊಹಮ್ಮದ್‌, ಜಿಲ್ಲಾ ಪಂಚಾಯತ್‌ ಸದಸ್ಯ ನ್ಯಾಯವಾದಿ ಕೆ.ಶ್ರೀಕಾಂತ್‌, ಕನ್ನಡ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಭಾಸ್ಕರ ಕಾಸರಗೋಡು ಮೊದಲಾದವರ ನೇತೃತ್ವದಲ್ಲಿ ತೀವ್ರ ಪ್ರತಿಭಟನೆ ನಡೆಸಿದರು. ಇದರಿಂದ ಅಧ್ಯಾಪಕಿಗೆ ಬೇರೆ ದಾರಿಯಿಲ್ಲದೆ 40 ದಿನಗಳ ರಜೆಯಲ್ಲಿ ತೆರಳಿದ್ದಾರೆ.

ವಿದ್ಯಾರ್ಥಿಗಳ ಹೋರಾಟಕ್ಕೆ ಇದೀಗ ತಾತ್ಕಾಲಿಕ ಪರಿಹಾರವಾಗಿದೆ. ಶಾಶ್ವತ ಪರಿಹಾರ ಕಂಡುಕೊಳ್ಳಬೇಕಾಗಿರುವುದು ಅನಿವಾರ್ಯವಾಗಿದೆ. ಇಲ್ಲದಿದ್ದಲ್ಲಿ ಈ ಅಧ್ಯಾಪಕಿ ಮತ್ತೆ ಶಾಲೆಗೆ ಹಾಜರಾಗುವುದ ರಿಂದ ವಿದ್ಯಾರ್ಥಿಗಳು ಮತ್ತೆ ಸಮಸ್ಯೆಗೆ ತುತ್ತಾಗಲಿದ್ದಾರೆ.

ಅಧ್ಯಾಪಕಿ ರಜೆಯಲ್ಲಿ ತೆರಳದಿದ್ದರೆ ವಿದ್ಯಾರ್ಥಿಗಳನ್ನು, ಹೆತ್ತವರನ್ನು, ಪೋಷಕ ರನ್ನು, ಕನ್ನಡಾಭಿಮಾನಿಗಳನ್ನು ಒಗ್ಗೂಡಿಸಿ ಅನಿರ್ದಿಷ್ಟಾವಧಿ ಚಳವಳಿ ಹೂಡುವುದಾಗಿ ಪಾದೂರು ಮೊಹಮ್ಮದ್‌, ಕೆ. ಶ್ರೀಕಾಂತ್‌, ಭಾಸ್ಕರ ಕಾಸರಗೋಡು ಮತ್ತು ಹೆತ್ತವರು ಮುನ್ನೆಚ್ಚರಿಕೆಯನ್ನು ನೀಡಿದ್ದರು.

ಅಕ್ಟೋಬರ್‌ ತಿಂಗಳಲ್ಲಿ ನೇಮಕಗೊಂಡಿದ್ದ ಅಧ್ಯಾಪಕಿ ಬೇಕಲದ ಸರಕಾರಿ ಫಿಶರೀಸ್‌ ಹೈಯರ್‌ ಸೆಕೆಂಡರಿ ಶಾಲೆಗೆ ಹಾಜರಾಗಿದ್ದರು. ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಸೋಶ್ಯಲ್‌ ಸಯನ್ಸ್‌ (ಸಮಾಜ ವಿಜ್ಞಾನ) ಪಾಠ ಮಾಡಲು ಕನ್ನಡ ಭಾಷೆ ಅರಿಯದ ತಿರುವನಂತಪುರದ ಈ ಮಲಯಾಳ ಅಧ್ಯಾಪಕಿ ಹಾಜರಾದ ಹಿನ್ನೆಲೆಯಲ್ಲಿ ಈ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ರಜೆಯಲ್ಲಿ ತೆರಳಿದ್ದ ಅಧ್ಯಾಪಕಿ ಮತ್ತೆ ಕ್ರಿಸ್ಮಸ್‌ ರಜೆ ಕಳೆದು ಜ.14 ರಂದು ಹಾಜರಾಗಿದ್ದರು. ಅಧ್ಯಾಪಕಿಯ ವಾಪಸಾತಿಯನ್ನು ವಿದ್ಯಾರ್ಥಿಗಳು ಪ್ರತಿಭಟಿಸಿದ್ದರು.

ಅಧ್ಯಾಪಕಿ ಮೊಬೈಲ್‌ ನಲ್ಲೇ
ಪ್ರತಿಭಟನೆಗೆ ನೇತೃತ್ವ ನೀಡಿದ ಪ್ರಮುಖರು ಶಾಲಾ ಮುಖ್ಯೋಪಾಧ್ಯಾಯ ಅವರೊಂದಿಗೆ ಚರ್ಚಿಸುತ್ತಿದ್ದ ಸಂದರ್ಭದಲ್ಲಿ ಈ ಅಧ್ಯಾಪಕಿ ಮೊಬೈಲ್‌ ಫೋನ್‌ನಲ್ಲಿ ನಿರಂತರವಾಗಿ ಮಾತನಾಡುತ್ತಿದ್ದರು. ಚರ್ಚೆ ನಡೆಯುತ್ತಿರುವಾಗಲೂ ಗಮನ ನೀಡದೆ ಅಧ್ಯಾಪಕಿ ದುರಹಂಕಾರ ಪ್ರದರ್ಶಿಸಿದ್ದರು.

ಟಾಪ್ ನ್ಯೂಸ್

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.