“ಪರಂಪರೆ ನಾಶಕ್ಕೆ ವ್ಯವಸ್ಥಿತ ಷಡ್ಯಂತ್ರ”

ಕನ್ನಡ ಮಕ್ಕಳ ಪ್ರಥಮ ಸಾಹಿತ್ಯ ಸಮ್ಮೇಳನ: ವಿಚಾರ ಸಂಕಿರಣ

Team Udayavani, Dec 3, 2019, 8:21 PM IST

rt-20

ಕಾಸರಗೋಡು: ಬಹು ಭಾಷಾ ಸಂಗಮ ಭೂಮಿಯಾದ ಗಡಿನಾಡು ಕಾಸರಗೋಡಿನ ಮೂಲ ಪರಂಪರೆ ಯಾದ ಕನ್ನಡ-ತುಳು ಭಾಷೆ ಗಳ ಸಮೃದ್ಧ ನಾಡು ನುಡಿಯ ಸೇವೆ ಗಳಿಂದ ಶ್ರೀಮಂತಗೊಂಡಿದೆ. ಆದರೆ ವರ್ತಮಾನದ ಹಲವು ತಲ್ಲಣಗಳಂತೆ ಪರಂಪರೆಯ ನಾಶಕ್ಕೆ ವ್ಯವಸ್ಥಿತ ಷಡ್ಯಂತ್ರಗಳು ಕಾರ್ಯವೆಸಗುತ್ತಿರುವುದರಿಂದ ಗಡಿನಾಡಿನ ಕನ್ನಡ-ತುಳು ಭಾಷೆಗಳ ಬೆಳವಣಿಗೆಗೆ ಧಕ್ಕೆಗಳು ಉಂಟಾಗುತ್ತಿವೆೆ ಎಂದು ಹಿರಿಯ ಸಾಹಿತಿ, ಪತ್ರಕರ್ತ, ಸವಿ ಹೃದಯದ ಕವಿಮಿತ್ರರು ವೇದಿಕೆಯ ನಿರ್ದೇಶಕ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಕರ್ನಾಟಕ ಮಕ್ಕಳ ಸಾಹಿತ್ಯ ಪರಿಷತ್ತು ಆದಿ ಚುಂಚನಗಿರಿ ಮಹಾಸಂಸ್ಥಾನ ಹಾಸನದ ನೇತೃತ್ವದಲ್ಲಿ ಎರಡು ದಿನಗಳ ಅಖೀಲ ಭಾರತ ಕನ್ನಡ ಮಕ್ಕಳ ಪ್ರಥಮ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಡೆದ ಪ್ರಸಕ್ತ ಕನ್ನಡ ನಾಡಿನ ಸ್ಥಿತಿಗತಿ ವಿಷಯದ ವಿಚಾರ ಸಂಕಿರಣದಲ್ಲಿ ಪ್ರಧಾನ ಭಾಷಣಗೈದು ಅವರು ಮಾತನಾಡಿದರು.

ಸತತ ಪರಿಶ್ರಮದ ಫಲ
ಸಾವಿರಾರು ವರ್ಷಗಳ ಬೃಹತ್‌ ಇತಿಹಾಸವಿರುವ, ಕನ್ನಡ ಸಾಹಿತ್ಯ, ಕಲೆ, ಆಡಳಿತ, ವ್ಯಾಪಾರ, ಸಾಂಸ್ಕೃತಿಕ ಚರಿತ್ರೆಗಳಲ್ಲಿ ಗಮನಾರ್ಹ ಕೊಡುಗೆಗಳ ಮೂಲಕ ಶ್ರೀಮಂತ ಪರಂಪರೆಯ ಕಾಸರಗೋಡಿನ ಕನ್ನಡಿಗರು ಇಂದು ಭಾಷಾ ಅಲ್ಪಸಂಖ್ಯಾಕತೆಯ ಬೇಗುದಿಗೆ ಒಳಗಾಗಿದ್ದಾರೆ. ತಮ್ಮ ಸಾಂವಿಧಾನಿಕ ಹಕ್ಕು ಸಹಿತ ದೈನಂದಿನ ಚಟುವಟಿಕೆಗಳಲ್ಲಿ ಸರಕಾರದ ಮಲತಾಯಿ ಧೋರಣೆಗಳಿಂದ ಕಷ್ಟದಲ್ಲಿದ್ದಾರೆ. ಆದರೂ ಹಲವಾರು ಸಂಘಟನೆಗಳ ಸತತ ಪರಿಶ್ರಮದ ಫಲವಾಗಿ ತಮ್ಮತನವನ್ನು ಉಳಿಸುವಲ್ಲಿ ಕಟಿಬದ್ದರಾಗಿ ಕನ್ನಡ ನಾಡು-ನುಡಿಯ ಸೇವೆಯನ್ನು ಮುನ್ನಡೆಸುತ್ತಿದ್ದಾರೆ. ಸವಿ ಹೃದಯದ ಕವಿಮಿತ್ರರಂತಹ ಬಳಗಗಳು ನಿರಂತರ ಚಟುವಟಿಕೆಯ ಮೂಲಕ ಕನ್ನಡ ಸಾಹಿತ್ಯ-ಸಾಂಸ್ಕೃತಿಕ ಪರಿಸರ ನಿರ್ಮಾಣದಲ್ಲಿ ಸಕ್ರಿಯರಾಗಿದ್ದಾರೆ ಎಂದು ಅವರು ತಿಳಿಸಿದರು.

ಬಾಲಕ ಅನೀಶ್‌ ಬಿ. ಕೊಪ್ಪ ಅಧ್ಯಕ್ಷತೆ ವಹಿಸಿದ್ದ ವಿಚಾರ ಸಂಕಿರಣದಲ್ಲಿ ರುಚಿತಾ ಎಸ್‌. ಚಾಮರಾಜನಗರ ಹಾಗೂ ಯಶ್ವಂತ್‌ ಗುಲಸಿಂದ ವಿಷಯ ಮಂಡನೆಗೈದರು. ಹಿರಿಯ ಸಾಹಿತಿ ಬೇಂದ್ರೆ ಕೃಷ್ಣಪ್ಪ ಸಮನ್ವಯಕಾರರಾಗಿದ್ದರು. ಕಾವ್ಯಾ ಸಿ.ಎಚ್‌., ಬಲರಾಮು, ಶಿವನಂಜೇಗೌಡ, ತಿಮ್ಮೇಶ್‌ ಪ್ರಭು, ಮಲ್ಲಿಕಾರ್ಜುನ್‌, ಸುಬ್ಬುಸ್ವಾಮಿ, ಶಿವಕುಮಾರ್‌ ಕಣಸೋಗಿ, ಡಾ| ಮಹೇಶ್‌, ಡಾ| ವಿಜಯಕುಮಾರ್‌, ಎಸ್‌.ಎ.ಸಚಿನ್‌, ಸಿ.ಎಸ್‌. ಮನೋಹರ್‌, ಕೃಷ್ಣಪ್ಪ, ಚೆನ್ನೇನಹಳ್ಳಿಸ್ವಾಮಿ, ಶೀತಲ್‌ ಕುಮಾರ್‌, ನಾರಾಯಣ್‌ ನಾಯಕ್‌, ಸಂಜೀವ್‌ ದುಮಕನಾಳ, ಜಿ.ಹಂಪೇಶ್‌, ಮಂಜುನಾಥ್‌, ರವೀಶ್‌, ಎಚ್‌.ಎಂ.ಗೌಡಯ್ಯ, ರಾಮು ಮೊದಲಾದವರು ಉಪಸ್ಥಿತರಿದ್ದು ಮಾತನಾಡಿದರು. ಮಕ್ಕಳ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ ಸಿ.ಎನ್‌.ಅಶೋಕ್‌, ಆದಿಚುಂಚನಗಿರಿ ಮಠದ ಶಾಖಾ ಧಿಕಾರಿ ಎಚ್‌.ಕೆ. ಚಂದ್ರಶೇಖರ್‌, ಕೇಂದ್ರ ಮಕ್ಕಳ ಸಾಹಿತ್ಯ ಪರಿಷತ್ತಿನ ಸಂಚಾಲಕ ಎ.ಎಂ. ಜಯರಾಮ್‌, ಹಾಸನ ತಾಲೂಕು ಅಧ್ಯಕ್ಷ ಚಂದ್ರಶೇಖರ್‌, ಅರಸೀಕೆರೆ ತಾಲೂಕು ಅಧ್ಯಕ್ಷ ಅನಂತಕುಮಾರ್‌ ಮೊದಲಾದವರು ಉಪಸ್ಥಿತರಿದ್ದರು. ಜಾಹ್ನವಿ ಕೆ.ಪಿ. ಕುಂದೂರ್‌ ಸ್ವಾಗತಿಸಿ, ಆದಿತ್ಯ ಬ್ಯಾಡರಹಳ್ಳಿ ವಂದಿಸಿದರು. ರೇಖಾಶ್ರೀ ಚಾಮರಾಜನಗರ ಕಾರ್ಯಕ್ರಮ ನಿರೂಪಿಸಿದರು. ಯಶೋದಾ ಜೈನ್‌ ಸಹಕರಿಸಿದರು.

ಟಾಪ್ ನ್ಯೂಸ್

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.