ಕುಂಬಳೆ: ಸ್ಕೂಟರ್ ಗೋಡೆಗೆ ಬಡಿದು ಯುವಕ ಸಾವು
Team Udayavani, Jun 23, 2022, 7:57 PM IST
ಕುಂಬಳೆ: ಮಂಜೇಶ್ವರ ಹೊಸಂಗಡಿಯ ರೈಲ್ವೇ ಗೇಟಿನ ಬಳಿಯ ನಿವಾಸಿ ದಿನೇಶ್ ಕುಮಾರ್-ಸುಮತಿ ದಂಪತಿ ಪುತ್ರ ದೀಕ್ಷಿತ್ (30) ಅವರ ಸ್ಕೂಟರ್ ಖಾಸಗಿ ವ್ಯಕ್ತಿಯ ಆವರಣ ಗೋಡೆಗೆ ಬಡಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರು ಸಾವನ್ನಪ್ಪಿದ್ದಾರೆ.
ಗುರುವಾರ ಮುಂಜಾನೆ 3 ಗಂಟೆಗೆ ಕಟ್ಟೆ ಬಜಾರಿನಲ್ಲಿ ದೀಕ್ಷಿತ್ ಚಲಾಯಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಗೋಡೆಗೆ ಬಡಿದು ದೀಕ್ಷಿತ್ ಪ್ರಜ್ಞೆ ತಪ್ಪಿ ಬಿದ್ದಿದ್ದರು. ಮುಂಜಾನೆ ಬೆಸ್ತರು ಈ ದಾರಿಯಾಗಿ ಮೀನು ಹಿಡಿಯಲು ತೆರಳುತ್ತಿದ್ದಾಗ ಬಿದ್ದವನನ್ನು ಎತ್ತಿ ಆಸ್ಪತ್ರೆಗೆ ಒಯ್ದರೂ, ಚಿಕಿತ್ಸೆ ಫಲಕಾರಿಯಾಗಿಲ್ಲ. ಮಂಗಳೂರಿನಲ್ಲಿ ಚಾಲಕ ವೃತ್ತಿಯಲ್ಲಿರುವ ಈತ ಕೆಲಸ ಮುಗಿಸಿ ಮರಳುವಾಗ ಅಪಘಾತವಾಗಿತ್ತು. ಮೃತರು ಅವಿವಾಹಿತರಾಗಿದ್ದು, ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ.
ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…